ಸಾಂದರ್ಭಿಕ ಚಿತ್ರ 
ರಾಜ್ಯ

ವ್ಹೀಲಿಂಗ್ ವಿರುದ್ಧ ಟ್ರಾಫಿಕ್ ಪೊಲೀಸರ ಸಮರ: ತಿಂಗಳಲ್ಲಿ 398 ಕೇಸ್, 324 ಮಂದಿ ಬಂಧನ; ಪುಂಡರಿಂದ 1 ಲಕ್ಷ ರೂ ಶೂರಿಟಿ ಪಡೆಯಲು ನಿರ್ಧಾರ

ಮಾರ್ಚ್ 1ರಿಂದ 31ರವರೆಗೆ ನಗರದ ವಿವಿಧ ಸಂಚಾರ ಠಾಣೆಗಳ ವ್ಯಾಪ್ತಿಗಳಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಒಂದೇ ತಿಂಗಳಲ್ಲಿ 398 ಪ್ರಕರಣಗಳು ದಾಖಲಾಗಿವೆ.

ಬೆಂಗಳೂರು: ರಸ್ತೆ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ, ವ್ಹೀಲಿಂಗ್‌ನಲ್ಲಿ ಭಾಗಿಯಾಗುವವರ ವಿರುದ್ಧ ನಗರದ ಸಂಚಾರಿ ಪೊಲೀಸರು ಸಮರ ಸಾರಿದ್ದು, ಒಂದೇ ತಿಂಗಳಲ್ಲಿ 398 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಮಾರ್ಚ್ 1ರಿಂದ 31ರವರೆಗೆ ನಗರದ ವಿವಿಧ ಸಂಚಾರ ಠಾಣೆಗಳ ವ್ಯಾಪ್ತಿಗಳಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಒಂದೇ ತಿಂಗಳಲ್ಲಿ 398 ಪ್ರಕರಣಗಳು ದಾಖಲಾಗಿವೆ. ಅಲ್ಲದೆ, 324 ಮಂದಿಯನ್ನು ಬಂಧನಕ್ಕೊಳಪಡಿಸಿದ್ದು, 397 ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಬಂಧಿತ 324 ಜನರ ಪೈಕಿ 82 ಮಂದಿ ಅಪ್ರಾಪ್ತ ವಯಸ್ಕರಾಗಿದ್ದು, ಪೊಲೀಸರು 197 ನೋಂದಣಿ ಪ್ರಮಾಣಪತ್ರಗಳನ್ನು (ಆರ್‌ಸಿ) ರದ್ದುಗೊಳಿಸಲು ಮತ್ತು 40 ಚಾಲನಾ ಪರವಾನಗಿಗಳನ್ನು (ಡಿಎಲ್) ಅಮಾನತುಗೊಳಿಸಲು ಶಿಫಾರಸು ಮಾಡಿದ್ದಾರೆ. ಅಲ್ಲದೆ, ನಿಯಮ ಉಲ್ಲಂಘಿಸಿದ ಪುಂಡರಿಂದ ರೂ.1 ಲಕ್ಷ ಶ್ಯೂರಿಟಿ ಬಾಂಡ್ ಪಡೆಯಲು ನಿರ್ಧರಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂ.ಎನ್. ಅನುಚೇತ್ ಅವರು ತಿಳಿಸಿದ್ದಾರೆ.

ವ್ಹೀಲಿಂಗ್‌ನಲ್ಲಿ ಭಾಗಿಯಾಗುವವರ ವಿರುದ್ಧ ಕಳೆದ ಮೂರು ತಿಂಗಳಿನಲ್ಲಿ 500ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಅಲ್ಲದೆ, ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ (ಬಿಎನ್ಎಸ್ಎಸ್) ಅಡಿಯಲ್ಲಿ 1 ಲಕ್ಷ ರೂಪಾಯಿಯ ಮುಚ್ಚಳಿಕೆ ಬರೆಸಿಕೊಳ್ಳಲಾಗುತ್ತಿದೆ. 2ನೇ ಬಾರಿ ವ್ಹೀಲಿಂಗ್‌ನಲ್ಲಿ ತೊಡಗಿದರೆ ಮುಚ್ಚಳಿಕೆ ಪ್ರಕಾರ, ವಾಹನ ಮುಟ್ಟುಗೋಲು ಪ್ರಕ್ರಿಯೆ ಜರುಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ವ್ಹೀಲಿಂಗ್‌ನಲ್ಲಿ ಭಾಗಿಯಾದ ಆರೋಪಿಗಳನ್ನು ತಪಾಸಣೆಗೊಳಪಡಿಸಲಾಗುತ್ತಿದೆ. ಕೆಲವು ಪ್ರಕರಣಗಳಲ್ಲಿ ಆರೋಪಿಗಳು ಮಾದಕ ವಸ್ತು ಸೇವನೆ ಮಾಡಿರುವುದು ಮತ್ತು‌ ಆಯುಧಗಳನ್ನಿಟ್ಟುಕೊಂಡಿರುವುದು ಕಂಡುಬಂದಿದೆ.

ವಿಜಯನಗರ, ಕಾಮಾಕ್ಷಿಪಾಳ್ಯ, ಕೆ.ಜಿ.ಹಳ್ಳಿ, ಮಡಿವಾಳ, ಅಶೋಕನಗರ ವ್ಯಾಪ್ತಿಯಲ್ಲಿ ಅಂತಹ ಪ್ರಕರಣಗಳು ವರದಿಯಾಗಿವೆ. ಆ ಸಂದರ್ಭಗಳಲ್ಲಿ ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ, ಶಸ್ತ್ರಾಸ್ತ್ರ ಕಾಯ್ದೆಗಳಲ್ಲಿಯೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ವ್ಯಕ್ತಿ ವೀಲಿಂಗ್ ಮಾಡುವಾಗ ಸಿಕ್ಕಿಬಿದ್ದರೆ, ಅವರ ವಿರುದ್ಧ ಕಾನೂನು ಮತ್ತು ಸುವ್ಯವಸ್ಥೆ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗುತ್ತದೆ. ನಂತರ, ಆರೋಪಪಟ್ಟಿ ಸಲ್ಲಿಸಲಾಗುತ್ತದೆ. ಎರಡನೇ ಬಾರಿ ಸಿಕ್ಕಿಬಿದ್ದರೆ, 1 ಲಕ್ಷ ರೂ.ಗಳ ಶ್ಯೂರಿಟಿ ಬಾಂಡ್ ನೀಡಬೇಕಾಗುತ್ತದೆ. ಬಾಂಡ್ ನೀಡಲು ವಿಫಲರಾದವರನ್ನು ಜೈಲಿಗೆ ಕಳುಹಿಸಲಾಗುತ್ತದೆ ಎಂದು ಸಂಚಾರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT