ವಿನಯ್ ಸೋಮಯ್ಯ ಸಂಗ್ರಹ ಚಿತ್ರ 
ರಾಜ್ಯ

'ರಾಜಕೀಯ ಪ್ರೇರಿತ FIR ಗಳ ವಿರುದ್ಧ ನನ್ನ ಸಾವು ಪಾಠವಾಗಬೇಕು': ಸಾವಿಗೂ ಮುನ್ನ ವಿನಯ್ ಸೋಮಯ್ಯ ಡೆತ್ ನೋಟ್!

ಪೊನ್ನಣ್ಣ ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಶಾಸಕ ಎ.ಎಸ್. ಪೊನ್ನಣ್ಣ ಅವರ ಬಗ್ಗೆ ಟೀಕೆ ಮಾಡಿದ್ದ ವಿಚಾರಕ್ಕೆ ಎಫ್ ಐಆರ್ ದಾಖಲಾದ ವಿಚಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಬರೆದ ಡೆತ್ ನೋಟ್ ನಲ್ಲಿ ನನ್ನ ಸಾವು "ರಾಜಕೀಯ ಪ್ರೇರಿತ ಎಫ್‌ಐಆರ್‌ಗಳನ್ನು ದಾಖಲಿಸುವುದರ ವಿರುದ್ಧ ಪಾಠವಾಗಬೇಕು" ಎಂದು ಬರೆದಿದ್ದಾರೆ.

ಪೊನ್ನಣ್ಣ ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಎಫ್​​ಐಆರ್​ ದಾಖಲಿಸಿದ್ದಕ್ಕೆ ಮನನೊಂದು ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರಿನ ನಾಗವಾರದ ಕಚೇರಿಯಲ್ಲಿ ನಡೆದಿದೆ. ವಿನಯ್ ಸೋಮಯ್ಯ(35ವ) ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ.

ಆತ್ಮಹತ್ಯೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಡೆತ್​ನೋಟ್ ಪೋಸ್ಟ್ ಮಾಡಿದ್ದ ವಿನಯ್, ರಾಜಕೀಯ ಪ್ರೇರಿತ FIRನಿಂದ ಮನನೊಂದಿದ್ದೇನೆ. ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದರು. ಸದ್ಯ ವಿನಯ್ ಸೋಮಯ್ಯ ಆತ್ಮಹತ್ಯೆ ಹಿಂದೆ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿವೆ.

ಇವರು ಬೆಂಗಳೂರಿನ ಎಚ್‌ಬಿಆರ್ ಲೇಔಟ್‌ನಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರ ಪ್ರಕಾರ, ಸೋಮಯ್ಯ ಕಳೆದ ರಾತ್ರಿ ಕಚೇರಿಗೆ ಬಂದು ಅಲ್ಲಿಯೇ ಇದ್ದರು. ನೇಣು ಬಿಗಿದುಕೊಳ್ಳುವ ಮೊದಲು ಅವರು ವಾಟ್ಸಾಪ್ ಗುಂಪಿನಲ್ಲಿ ತಮ್ಮ ಡೆತ್ ನೋಟ್ ನ್ನು ಪೋಸ್ಟ್ ಮಾಡಿದ್ದಾರೆ.

ನನ್ನ ಸಾವು ರಾಜಕೀಯ ಪ್ರೇರಿತ ಎಫ್‌ಐಆರ್‌ಗಳ ದಾಖಲಾತಿಯ ವಿರುದ್ಧ ಪಾಠವಾಗಬೇಕು. ದೂರು ದಾಖಲಿಸುವ ಮೊದಲು ಪೊಲೀಸರು ಒಬ್ಬ ವ್ಯಕ್ತಿ ದೂರು ನೀಡುತ್ತಾನೆ ಎಂಬ ಕಾರಣಕ್ಕೆ ಎಫ್‌ಐಆರ್ ದಾಖಲಿಸುವುದು ಸರಿಯೇ?" ಎಂದು ಪರಿಶೀಲಿಸಬೇಕು. ದಯವಿಟ್ಟು ನನ್ನ ಸಂದೇಶವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿ, ಅಮಾಯಕರ ವಿರುದ್ಧ ಎಫ್‌ಐಆರ್‌ಗಳು ದಾಖಲಾಗುವ ಪ್ರವೃತ್ತಿಯನ್ನು ಕೊನೆಗೊಳಿಸಲು ಅದು ಸಹಾಯ ಮಾಡಲಿ. ನನ್ನ ಕುಟುಂಬಕ್ಕೆ ನಾನು ಹೇಳಲು ಏನೂ ಇಲ್ಲ - ಅದನ್ನು ಅವರಿಗೆ ಹೇಗೆ ವ್ಯಕ್ತಪಡಿಸಬೇಕೆಂದು ನನಗೆ ತಿಳಿದಿಲ್ಲ ಎಂದು ಬರೆದಿದ್ದಾರೆ.

ಎಫ್‌ಐಆರ್ ದಾಖಲಾದ ಇಷ್ಟು ದಿನಗಳ ನಂತರ ಜನರು ಏನಾಯಿತು ಎಂದು ಆಶ್ಚರ್ಯ ಪಡುತ್ತಾರೆ. ನಾನು ನನ್ನ ಕುಟುಂಬವನ್ನು ಭೇಟಿಯಾಗಲು ಕಾಯುತ್ತಿದ್ದೆ. ಅವರೊಂದಿಗೆ ಕಳೆದ ಒಳ್ಳೆಯ ಕ್ಷಣಗಳನ್ನು ಆನಂದಿಸುತ್ತಾ ನಾನು ನನ್ನ ಜೀವನವನ್ನು ಕೊನೆಗೊಳಿಸುತ್ತಿದ್ದೇನೆ. ಸಾಧ್ಯವಾದರೆ, ನನ್ನನ್ನು ಕ್ಷಮಿಸಿ." ಎಂದು ಕೊನೆಗೆ ಬರೆದಿದ್ದಾರೆ.

ವಿನಯ್ ಸೋಮಯ್ಯ ತಮ್ಮ ಟಿಪ್ಪಣಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ತೆನ್ನೇರ ಮೈನಾ ಅವರನ್ನು ಸ್ಪಷ್ಟವಾಗಿ ಹೆಸರಿಸಿದ್ದಾರೆ, ತಮ್ಮ ಸಾವಿಗೆ ಅವರನ್ನು ಹೊಣೆಗಾರರನ್ನಾಗಿ ಮಾಡಿದ್ದಾರೆ. ಅವರು ಕಾಂಗ್ರೆಸ್ ಶಾಸಕರಾದ ಎ.ಎಸ್. ಪೊನ್ನಣ್ಣ ಮತ್ತು ಮಂಥರ್ ಗೌಡ ಅವರ ಹೆಸರುಗಳನ್ನು ಸಹ ಉಲ್ಲೇಖಿಸಿದ್ದಾರೆ.

ಸೋಮಯ್ಯ ಅವರು ಎಫ್‌ಐಆರ್ ದಾಖಲಾದಾಗಿನಿಂದ ಜಾಮೀನು ಪಡೆಯುವವರೆಗೂ ಅವರು ತಮ್ಮ ತಾಯಿಯೊಂದಿಗೆ ಮಾತನಾಡಿಲ್ಲ ಎಂದು ಹೇಳಿಕೊಂಡಿದ್ದಾರೆ.

ಅಭಿವೃದ್ಧಿ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ನನ್ನ ಮೇಲೆ ಕೇಸ್ ದಾಖಿಲಿಸಿದರು. ಜಾಮೀನು ಸಿಕ್ಕಿದ್ದರು ನನ್ನ ಸ್ನೇಹಿತನ ಮನೆಗೆ ಹೋಗಿ ಪೊಲೀಸರು ವಿಚಾರಿಸಿದ್ದಾರೆ. ವಿರಾಜಪೇಟೆ ಶಾಸಕ ಪೊನ್ನಣ್ಣ ಆದೇಶದಂತೆ ಇದೆಲ್ಲಾ ಮಾಡಿದ್ದಾರೆ. ಯಾರೋ ಹಾಕಿದ ಫೋಟೋಗೆ ನಮ್ಮ ಮೇಲೆ ಎಫ್​ಐಆರ್​ ಮಾಡಿದ್ದಾರೆ. ನಮ್ಮ ಮೇಲೆ ರೌಡಿಶೀಟ್​​​ ಓಪನ್ ಮಾಡುವ ಹುನ್ನಾರ ನಡೆದಿದೆ. ಇವರಿಗೆ ಸರಿಯಾದ ಶಿಕ್ಷೆಯಾದರೆ ನನ್ನ ಸಾವಿಗೆ ನ್ಯಾಯ ಸಿಗುತ್ತೆ ಎಂದು ವಿನಯ್​ ಡೆತ್​ನೋಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಈ ವಿಷಯವು ಈಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಬಿಜೆಪಿ ನಾಯಕರು ಈ ಘಟನೆಯನ್ನು ಬಲವಾಗಿ ಖಂಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT