ಎಂ.ಎನ್‌. ಕುಮಾರ್‌ 
ರಾಜ್ಯ

ಚೆಕ್ ಬೌನ್ಸ್ ಕೇಸ್: ಮಾಣಿಕ್ಯ ಸಿನಿಮಾ ನಿರ್ಮಾಪಕ ಎಂ.ಎನ್ ಕುಮಾರ್‌ ಬಂಧನ

ನಟರೊಬ್ಬರಿಂದ ಸಾಲ ಪಡೆದುಕೊಂಡಿದ್ದ ಕುಮಾರ್ ಅವರು ಹಣವನ್ನು ವಾಪಸ್‌ ನೀಡಿರಲಿಲ್ಲ. ಕುಮಾರ್ ಅವರು ನೀಡಿದ್ದ ಚೆಕ್‌ ಸಹ ಬೌನ್ಸ್ ಆಗಿತ್ತು. ಕುಮಾರ್ ಅವರ ವಿರುದ್ಧ 4ನೇ ಎಸಿಎಂಎಂ ಕೋರ್ಟ್‌ನಲ್ಲಿ ದೂರು ದಾಖಲಾಗಿತ್ತು.

ಬೆಂಗಳೂರು: ಚೆಕ್‌ ಬೌನ್ಸ್‌ ಪ್ರಕರಣವೊಂದರಲ್ಲಿ ಮಾಣಿಕ್ಯ ಚಿತ್ರ ನಿರ್ಮಾಪಕ ಎಂ.ಎನ್‌. ಕುಮಾರ್‌ ಅವರನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿದ್ದಾರೆ.

ನಟರೊಬ್ಬರಿಂದ ಸಾಲ ಪಡೆದುಕೊಂಡಿದ್ದ ಕುಮಾರ್ ಅವರು ಹಣವನ್ನು ವಾಪಸ್‌ ನೀಡಿರಲಿಲ್ಲ. ಕುಮಾರ್ ಅವರು ನೀಡಿದ್ದ ಚೆಕ್‌ ಸಹ ಬೌನ್ಸ್ ಆಗಿತ್ತು. ಕುಮಾರ್ ಅವರ ವಿರುದ್ಧ 4ನೇ ಎಸಿಎಂಎಂ ಕೋರ್ಟ್‌ನಲ್ಲಿ ದೂರು ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಕುಮಾರ್‌ಗೆ ಶಿಕ್ಷೆ ವಿಧಿಸಿ ಬಂಧನದ ವಾರಂಟ್‌ ಹೊರಡಿಸಿತ್ತು. ಕುಮಾರ್‌ ಅವರ ಕಚೇರಿ ಗಾಂಧಿನಗರದಲ್ಲಿ ಇದ್ದ ಕಾರಣ ಉಪ್ಪಾರಪೇಟೆ ಠಾಣೆ ಪೊಲೀಸರಿಗೆ ಕೋರ್ಟ್‌ನಿಂದ ವಾರೆಂಟ್‌ ಜಾರಿ ಮಾಡಲು ನ್ಯಾಯಾಲಯ ಆದೇಶಿಸಿತ್ತು.

ಇದೀಗ ಕುಮಾರ್‌ ಅವರನ್ನು ಬಂಧಿಸಿರುವ ಪೊಲೀಸರು, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಬಂಧನಕ್ಕೊಳಗಾಗಿರುವ ಕುಮಾರ್ ಅವರು, ‘ರನ್ನ’, ‘ಮಾಣಿಕ್ಯ’, ‘ಮುಕುಂದ ಮುರಾರಿ’, ‘ಅಂಜನಿಪುತ್ರ’ ಸೇರಿದಂತೆ ಹಲವು ಸಿನಿಮಾಗಳನ್ನು ಅವರು ನಿರ್ಮಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT