ಗೃಹ ಸಚಿವ ಜಿ ಪರಮೇಶ್ವರ್ 
ರಾಜ್ಯ

ವಿನಯ್ ಆತ್ಮಹತ್ಯೆ: ಸಾಮಾಜಿಕ ಜಾಲತಾಣದಲ್ಲಿ ಬಂದಿದ್ದೆಲ್ಲಾ ಸತ್ಯವಲ್ಲ, ವರದಿ ಆಧರಿಸಿ ಕ್ರಮ; ರಾಜ್ಯ ಸರ್ಕಾರ

ಇದಕ್ಕೆ ಸಂಬಂಧಪಟ್ಟ ಡಿಸಿಪಿ ಈ ಪ್ರಕರಣದ ತನಿಖೆ ಮಾಡುತ್ತಾರೆ. ಪ್ರಕರಣದ ಹಿಂದೆ ಪ್ರಭಾವಿ ವ್ಯಕ್ತಿಗಳಿದ್ದರೆ ಪರಿಶೀಲನೆ ನಡೆಸಲಾಗುವುದು. ವರದಿ ಆಧರಿಸಿ ಕ್ರಮ ತೆಗೆದುಕೊಳ್ಳುತ್ತೇವೆ.

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬಂದಿದ್ದೆಲ್ಲಾ ಸತ್ಯವಲ್ಲ, ವರದಿ ಆಧರಿಸಿ ಕ್ರಮ ಕೈಗೊಳ್ಳುತ್ತೇವೆಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಶುಕ್ರವಾರ ಹೇಳಿದ್ದಾರೆ.

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ಸಾಮಾಜಿಕ ಜಾಲತಾಣದಲ್ಲಿ ಬಂದಿದ್ದೆಲ್ಲಾ ಸತ್ಯ ಇರಲ್ಲ. ಪರಿಶೀಲಿಸಿ ಸತ್ಯ ಇದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ. ಇದಕ್ಕೆ ಸಂಬಂಧಪಟ್ಟ ಡಿಸಿಪಿ ಈ ಪ್ರಕರಣದ ತನಿಖೆ ಮಾಡುತ್ತಾರೆ. ಪ್ರಕರಣದ ಹಿಂದೆ ಪ್ರಭಾವಿ ವ್ಯಕ್ತಿಗಳಿದ್ದರೆ ಪರಿಶೀಲನೆ ನಡೆಸಲಾಗುವುದು. ವರದಿ ಆಧರಿಸಿ ಕ್ರಮ ತೆಗೆದುಕೊಳ್ಳುತ್ತೇವೆಂದು ಭರವಸೆ ನೀಡಿದರು.

ಕೊಡಗು ಜಿಲ್ಲೆಯ ಸೋಮವಾರಪೇಟೆ ಗೋಣಿಮರೂರು ನಿವಾಸಿ ವಿನಯ್ ಸೋಮಯ್ಯ ಬಿಜೆಪಿ ಕಾರ್ಯಕರ್ತರಾಗಿದ್ದು, ಇಂದು ಬೆಳಿಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದು, ತಮ್ಮ ಸಾವಿಕೆ ನಿರ್ಧಾರಕ್ಕೆ ಕಾರಣ ತಿಳಿಸಿದ್ದಾರೆ. ಅಲ್ಲದೆ, ಕೊಡಗು ಜಿಲ್ಲೆಯ ಕಾಂಗ್ರೆಸ್​ ಮುಖಂಡ ತೆನ್ನಿರ ಮೈನಾ ಮೇಲೆ ಆರೋಪ ಮಾಡಿದ್ದಾರೆಂದು ಹೇಳಲಾಗುತ್ತಿದೆ.

ಮೃತ ವಿನಯ್ ಕೊಡಗು ಸಮಸ್ಯೆ, ಸಲಹೆ ಸೂಚನೆಯ ವಾಟ್ಸ್​ಆ್ಯಪ್ ಗ್ರೂಪ್ ಮಾಡಿದ್ದರು. ಈ ಗ್ರೂಪ್​​ ಮೂಲಕ ಕಾಂಗ್ರೆಸ್​ ಶಾಸಕ ಪೊನ್ನಣ್ಣ ತೇಜೋವಧೆಯ ಆರೋಪ ಹೊತ್ತಿದ್ದರು. ಈ ಬಗ್ಗೆ ಕೊಡಗಿನಲ್ಲಿ ರಾಜಕೀಯ ಪ್ರೇರಿತ ಪ್ರಕರಣದಲ್ಲಿ FIR ದಾಖಲಾಗಿತ್ತು. ಗ್ರೂಪ್‌ನಲ್ಲಿ ಯಾರೋ ಹಾಕಿದ್ದ ಮೆಸೇಜ್‌ಗೆ ವಿನಯ್ ಮೇಲೆ FIR ಆಗಿತ್ತು.

ಮಡಿಕೇರಿ ನಗರ ಠಾಣೆಯಲ್ಲಿ ಕಾಂಗ್ರೆಸ್​ ಮುಖಂಡ ತೆನ್ನಿರ ಮೈನಾ ದೂರು ನೀಡಿದ್ದರು. ಅದರಂತೆ ಕೆಲವು ದಿನಗಳ ಹಿಂದೆ ವಿನಯ್ ಬಂಧನಕ್ಕೆ ಒಳಗಾಗಿ ಜಾಮೀನು ಪಡೆದು ಹೊರಬಂದಿದ್ದರು. ಇದೀಗ ಮನನೊಂದು ಆತ್ಮಹತ್ಯೆ ಮಾಡಿಕೊಂಡುವ ಬಗ್ಗೆ ಡೆತ್​ನೋಟ್​ನಲ್ಲಿ ಉಲ್ಲೇಖ ಮಾಡಿದ್ದಾರೆ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT