ಗೃಹ ಸಚಿವ ಜಿ ಪರಮೇಶ್ವರ್ 
ರಾಜ್ಯ

ವಿನಯ್ ಆತ್ಮಹತ್ಯೆ: ಸಾಮಾಜಿಕ ಜಾಲತಾಣದಲ್ಲಿ ಬಂದಿದ್ದೆಲ್ಲಾ ಸತ್ಯವಲ್ಲ, ವರದಿ ಆಧರಿಸಿ ಕ್ರಮ; ರಾಜ್ಯ ಸರ್ಕಾರ

ಇದಕ್ಕೆ ಸಂಬಂಧಪಟ್ಟ ಡಿಸಿಪಿ ಈ ಪ್ರಕರಣದ ತನಿಖೆ ಮಾಡುತ್ತಾರೆ. ಪ್ರಕರಣದ ಹಿಂದೆ ಪ್ರಭಾವಿ ವ್ಯಕ್ತಿಗಳಿದ್ದರೆ ಪರಿಶೀಲನೆ ನಡೆಸಲಾಗುವುದು. ವರದಿ ಆಧರಿಸಿ ಕ್ರಮ ತೆಗೆದುಕೊಳ್ಳುತ್ತೇವೆ.

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬಂದಿದ್ದೆಲ್ಲಾ ಸತ್ಯವಲ್ಲ, ವರದಿ ಆಧರಿಸಿ ಕ್ರಮ ಕೈಗೊಳ್ಳುತ್ತೇವೆಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಶುಕ್ರವಾರ ಹೇಳಿದ್ದಾರೆ.

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ಸಾಮಾಜಿಕ ಜಾಲತಾಣದಲ್ಲಿ ಬಂದಿದ್ದೆಲ್ಲಾ ಸತ್ಯ ಇರಲ್ಲ. ಪರಿಶೀಲಿಸಿ ಸತ್ಯ ಇದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ. ಇದಕ್ಕೆ ಸಂಬಂಧಪಟ್ಟ ಡಿಸಿಪಿ ಈ ಪ್ರಕರಣದ ತನಿಖೆ ಮಾಡುತ್ತಾರೆ. ಪ್ರಕರಣದ ಹಿಂದೆ ಪ್ರಭಾವಿ ವ್ಯಕ್ತಿಗಳಿದ್ದರೆ ಪರಿಶೀಲನೆ ನಡೆಸಲಾಗುವುದು. ವರದಿ ಆಧರಿಸಿ ಕ್ರಮ ತೆಗೆದುಕೊಳ್ಳುತ್ತೇವೆಂದು ಭರವಸೆ ನೀಡಿದರು.

ಕೊಡಗು ಜಿಲ್ಲೆಯ ಸೋಮವಾರಪೇಟೆ ಗೋಣಿಮರೂರು ನಿವಾಸಿ ವಿನಯ್ ಸೋಮಯ್ಯ ಬಿಜೆಪಿ ಕಾರ್ಯಕರ್ತರಾಗಿದ್ದು, ಇಂದು ಬೆಳಿಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದು, ತಮ್ಮ ಸಾವಿಕೆ ನಿರ್ಧಾರಕ್ಕೆ ಕಾರಣ ತಿಳಿಸಿದ್ದಾರೆ. ಅಲ್ಲದೆ, ಕೊಡಗು ಜಿಲ್ಲೆಯ ಕಾಂಗ್ರೆಸ್​ ಮುಖಂಡ ತೆನ್ನಿರ ಮೈನಾ ಮೇಲೆ ಆರೋಪ ಮಾಡಿದ್ದಾರೆಂದು ಹೇಳಲಾಗುತ್ತಿದೆ.

ಮೃತ ವಿನಯ್ ಕೊಡಗು ಸಮಸ್ಯೆ, ಸಲಹೆ ಸೂಚನೆಯ ವಾಟ್ಸ್​ಆ್ಯಪ್ ಗ್ರೂಪ್ ಮಾಡಿದ್ದರು. ಈ ಗ್ರೂಪ್​​ ಮೂಲಕ ಕಾಂಗ್ರೆಸ್​ ಶಾಸಕ ಪೊನ್ನಣ್ಣ ತೇಜೋವಧೆಯ ಆರೋಪ ಹೊತ್ತಿದ್ದರು. ಈ ಬಗ್ಗೆ ಕೊಡಗಿನಲ್ಲಿ ರಾಜಕೀಯ ಪ್ರೇರಿತ ಪ್ರಕರಣದಲ್ಲಿ FIR ದಾಖಲಾಗಿತ್ತು. ಗ್ರೂಪ್‌ನಲ್ಲಿ ಯಾರೋ ಹಾಕಿದ್ದ ಮೆಸೇಜ್‌ಗೆ ವಿನಯ್ ಮೇಲೆ FIR ಆಗಿತ್ತು.

ಮಡಿಕೇರಿ ನಗರ ಠಾಣೆಯಲ್ಲಿ ಕಾಂಗ್ರೆಸ್​ ಮುಖಂಡ ತೆನ್ನಿರ ಮೈನಾ ದೂರು ನೀಡಿದ್ದರು. ಅದರಂತೆ ಕೆಲವು ದಿನಗಳ ಹಿಂದೆ ವಿನಯ್ ಬಂಧನಕ್ಕೆ ಒಳಗಾಗಿ ಜಾಮೀನು ಪಡೆದು ಹೊರಬಂದಿದ್ದರು. ಇದೀಗ ಮನನೊಂದು ಆತ್ಮಹತ್ಯೆ ಮಾಡಿಕೊಂಡುವ ಬಗ್ಗೆ ಡೆತ್​ನೋಟ್​ನಲ್ಲಿ ಉಲ್ಲೇಖ ಮಾಡಿದ್ದಾರೆ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT