ಡಿ.ಕೆ ಶಿವಕುಮಾರ್ 
ರಾಜ್ಯ

ಬೆಲೆ ಏರಿಕೆ ಪ್ರಾರಂಭ ಮಾಡಿದ್ದೇ ಬಿಜೆಪಿ; ಭದ್ರಾ ಮೇಲ್ದಂಡೆ ಅನುದಾನ ವಿಚಾರ ಕೇಂದ್ರ ಸಂಪುಟದ ಮುಂದೆ: ಡಿ.ಕೆ ಶಿವಕುಮಾರ್

ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5,300 ಕೋಟಿ ಅನುದಾನ ಬಿಡುಗಡೆ ವಿಚಾರವನ್ನು ಕೇಂದ್ರ ಸಚಿವ ಸಂಪುಟದ ಮುಂದೆ ಇಡಲಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವರು ತಿಳಿಸಿದ್ದಾರೆ.

ಬೆಂಗಳೂರು: ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು. ರೈತರಿಗೆ ನೆರವಾಗಲು ನಾವು ಹಾಲಿನ ದರ ಏರಿಸಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು. ಬೆಲೆ ಏರಿಕೆ ವಿರುದ್ದ ಬಿಜೆಪಿ ಹೋರಾಟದ ಬಗ್ಗೆ ಕೇಳಿದಾಗ, ನಾವೇನು ಈಗ ಬೆಲೆ ಏರಿಕೆ ಮಾಡಿಲ್ಲ. ಅವರು ಬೆಲೆ ಏರಿಕೆ ಮಾಡಿದ ಕಾರಣಕ್ಕೆ ನಾವು ಗ್ಯಾರಂಟಿ ಯೋಜನೆಗಳನ್ನು ನೀಡಿದ್ದು. ರೈತರಿಗೆ ಸಹಾಯವಾಗಲು ಹಾಲಿನ ಬೆಲೆ ಏರಿಕೆ ಮಾಡಲಾಗಿದೆ. ಬೆಲೆ ಏರಿಕೆ ನಂತರವೂ ಬೇರೆ ರಾಜ್ಯಗಳಿಗಿಂತ ನಮ್ಮಲ್ಲಿ ಹಾಲಿನ ದರ ಕಡಿಮೆಯಿದೆ ಎಂದು ತಿಳಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5,300 ಕೋಟಿ ಅನುದಾನ ಬಿಡುಗಡೆ ವಿಚಾರವನ್ನು ಕೇಂದ್ರ ಸಚಿವ ಸಂಪುಟದ ಮುಂದೆ ಇಡಲಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವರು ತಿಳಿಸಿದ್ದಾರೆ. ನಾವು ಭದ್ರಾ ಯೋಜನೆಗೆ ಎಷ್ಟು ಖರ್ಚು ಮಾಡಿದ್ದೇವೆ, ಕೇಂದ್ರ ಎಷ್ಟು ಕೊಡಬೇಕು ಎಂಬುದನ್ನೂ ತಿಳಿಸಿದ್ದೇವೆ. ದೆಹಲಿ ಭೇಟಿ ವೇಳೆ ಕೇಂದ್ರ ಜಲಶಕ್ತಿ ಸಚಿವರನ್ನು ನಾನು ಹಾಗೂ ಮುಖ್ಯಮಂತ್ರಿಯವರು ಭೇಟಿ ಮಾಡಿ ರಾಜ್ಯದ ನೀರಾವರಿ ಸಂಬಂಧಿತ ವಿಚಾರಗಳನ್ನು ಚರ್ಚೆ ಮಾಡಿದೆವು. ಮಹದಾಯಿ, ಮೇಕೆದಾಟು, ಕಳಸಾ ಬಂಡೂರಿ, ಭದ್ರಾ ಮೇಲ್ದಂಡೆ ವಿಚಾರಗಳನ್ನು ಮನವರಿಕೆ ಮಾಡಿದ್ದೇವೆ. ನಮ್ಮ ಸಮಸ್ಯೆಗಳು ಅವರಿಗೆ ಅರ್ಥವಾಗಿದೆ. ಈ ವಿಚಾರವಾಗಿ ಒಬ್ಬೊಬ್ಬರನ್ನೇ ಕರೆಸಿ ಮಾತುಕಥೆ ನಡೆಸುವುದಾಗಿ ತಿಳಿಸಿದ್ದಾರೆ ಎಂದರು.

ಎತ್ತಿನಹೊಳೆಗೆ ಅನುಮತಿ ನೀಡಲೇಬೇಕು. ಇದರಲ್ಲಿ ಕೊಡಿಸುವುದೇನಿದೆ? ಇದು ಅವರ ಕರ್ತವ್ಯ. ಸ್ವಾಧೀನ ಪಡಿಸಿಕೊಂಡ ಭೂಮಿಗೆ ಬದಲಿ ಭೂಮಿ ನೀಡಿದ್ಧೇವೆ ಎಂದು ತಿಳಿಸಿದರು. ತಮಿಳುನಾಡಿನಿಂದ ಮೇಕೆದಾಟಿಗೆ ಮೊದಲು ಒಪ್ಪಿಗೆ ಪಡೆಯಿರಿ ನಾವು ನಂತರ ಕೊಡಿಸುತ್ತೇವೆ ಎನ್ನುವ ಬಿಜೆಪಿಯವರ ಹೇಳಿಕೆಯ ಬಗ್ಗೆ ಕೇಳಿದಾಗ, “ಅವರ ಸಲಹೆಯನ್ನು ನಾನು ಸ್ವೀಕರಿಸುತ್ತೇನೆ” ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!