ಸಿಎಂ ಸಿದ್ದರಾಮಯ್ಯ 
ರಾಜ್ಯ

ವಿನಯ್ ಆತ್ಮಹತ್ಯೆ: ಸಾವಿನಲ್ಲೂ ಬಿಜೆಪಿ ರಾಜಕೀಯ, ಅವರ ಡಿಮ್ಯಾಂಡ್ ಗೆಲ್ಲಾ ಉತ್ತರ ಕೊಡೋಕೆ ಆಗಲ್ಲ- ಸಿಎಂ ಸಿದ್ದರಾಮಯ್ಯ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರಾದ ಶಾಸಕ ಪೊನ್ನಣ್ಣ ಮತ್ತು ಮಂತರ್ ಗೌಡ ವಿರುದ್ದ ಎಫ್ ಐಆರ್ ಹಾಕುವಂತೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಕುಶಾಲನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಆತ್ಮಹತ್ಯೆ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸುದ್ದಿಯಾಗುತ್ತಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಆರೋಪ, ಪ್ರತ್ಯಾರೋಪ, ಜಟಾಪಟಿಗೂ ಕಾರಣವಾಗುತ್ತಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರಾದ ಶಾಸಕ ಪೊನ್ನಣ್ಣ ಮತ್ತು ಮಂತರ್ ಗೌಡ ವಿರುದ್ದ ಎಫ್ ಐಆರ್ ಹಾಕುವಂತೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಕುಶಾಲನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯವರು ಸಾವಿನಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಅವರ ಡಿಮ್ಯಾಂಡ್ ಗೆಲ್ಲಾ ನಾವು ಉತ್ತರ ಕೊಡೋಕೆ ಆಗಲ್ಲ.

ಶಾಸಕರಾದ ಪೊನ್ನಣ್ಣ, ಮಂತರ್ ಗೌಡ ಅವರ ಹೆಸರನ್ನು ಎಫ್ ಐಆರ್ ನಲ್ಲಿ ಸೇರಿಸಬೇಕು ಎನ್ನುವ ಬಿಜೆಪಿ ನಾಯಕರ ಬೇಡಿಕೆ ಒಪ್ಪಲು ಆಗದು ಎಂದರು.

ವಿನಯ್ ಸೋಮಯ್ಯ ಅವರ ಸಾವಿನ ಸಂಬಂಧ ಎಫ್ಐರ್ ಆಗಿದೆ. ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗುತ್ತದೆ. ತನಿಖೆ ನಡೆಯುವಾಗ ನಾನು ಹೆಚ್ಚು ಮಾತಾಡಲ್ಲ . ಬಿಜೆಪಿ ನಾಯಕರು ಹತಾಶರಾಗಿ ಮಾತನಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ದೂರಿದರು.

ಏನಿದು ಪ್ರಕರಣ: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರು ಶಾಸಕ ಪೊನ್ನಣ್ಣ ಬಗ್ಗೆ ಅಪಹಾಸ್ಯ ಮಾಡಿ ವಾಟ್ಸಪ್ ಪೋಸ್ಟ್ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ವಿನಯ್ ಮೇಲೆ ಎಫ್​ಐಆರ್ ದಾಖಲಾಗಿತ್ತು ಎನ್ನಲಾಗುತ್ತಿದೆ.

ಸೋಶಿಯಲ್ ಮೀಡಿಯಾದಲ್ಲಿ ವಿನಯ್​ ಡೆತ್​ ನೋಟ್ ಪೋಸ್ಟ್ ಮಾಡಿದ್ದರು. ಈ ಡೆತ್​ ನೋಟ್ ಮೇಲೆಯೇ ಪೊಲೀಸರಿಗೆ ಅನುಮಾನ ಶುರುವಾಗಿದೆ. ವಿನಯ್​ ಟೈಪ್​ ಮಾಡಿದ್ದ ಡೆತ್​ ನೋಟ್ ಪೊಲೀಸರಿಗೆ ಹೊಸ ತಲೆನೋವಾಗಿ ಪರಿಣಮಿಸಿದೆ. ​ಮೊಬೈಲ್ ವಾಟ್ಸಪ್ ನಲ್ಲಿ ವಿನಯ್​ ಡೆತ್ ನೋಟ್ ಬರೆದಿದ್ರು ಎನ್ನಲಾಗ್ತಿದೆ. ಡಿಜಿಟಲ್ ರೂಪದಲ್ಲಿ ಬರೆಯಲಾದ ಈ ಡೆತ್ ನೋಟ್ ಅನ್ನು ಯಾವ ರೀತಿ ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಪೊಲೀಸರು ಚಿಂತನೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT