ಸಂಜನಾ ಗಲ್ರಾನಿ 
ರಾಜ್ಯ

ನಟಿ ಸಂಜನಾ ಗಲ್ರಾನಿಗೆ ವಂಚನೆ: ಅಪರಾಧಿ​ಗೆ 61 ಲಕ್ಷ ರೂ ದಂಡ, 6 ತಿಂಗಳು ಜೈಲು ಶಿಕ್ಷೆ

ಸಂಜನಾ ಗಲ್ರಾನಿ ಅವರ ಸ್ನೇಹಿತ ಬನಶಂಕರಿ 3ನೇ ಹಂತದ ನಿವಾಸಿ ರಾಹುಲ್ ತೋನ್ಸೆ ಅಲಿಯಾಸ್ ರಾಹುಲ್ ಶೆಟ್ಟಿ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 33ನೇ ಎಸಿಜೆಎಂ ನ್ಯಾಯಾಲಯ ನ್ಯಾಯಾಧೀಶ ಪಿಎಸ್ ಸಂತೋಷ್ ಕುಮಾರ್‌ ಅವರು ದಂಡ ಮತ್ತು ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದ್ದಾರೆ.

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಅವರಿಗೆ ಹಣ ವಂಚಿಸಿದ ಪ್ರಕರಣಕ್ಕ ಸಂಬಂಧಿಸಿದಂತೆ ಅಪರಾಧಿ ರಾಹುಲ್ ತೋನ್ಸೆಗೆ 61.50 ಲಕ್ಷ ರೂ. ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ವಿಧಿಸಿ 33ನೇ ಎಸಿಜೆಎಂ ನ್ಯಾಯಾಲಯ ಆದೇಶಿಸಿದೆ.

ಸಂಜನಾ ಗಲ್ರಾನಿ ಅವರ ಸ್ನೇಹಿತ ಬನಶಂಕರಿ 3ನೇ ಹಂತದ ನಿವಾಸಿ ರಾಹುಲ್ ತೋನ್ಸೆ ಅಲಿಯಾಸ್ ರಾಹುಲ್ ಶೆಟ್ಟಿ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 33ನೇ ಎಸಿಜೆಎಂ ನ್ಯಾಯಾಲಯ ನ್ಯಾಯಾಧೀಶ ಪಿಎಸ್ ಸಂತೋಷ್ ಕುಮಾರ್‌ ಅವರು ದಂಡ ಮತ್ತು ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದ್ದಾರೆ.

ದಂಡದ ಮೊತ್ತದಲ್ಲಿ 10 ಸಾವಿರ ಕೋರ್ಟ್ ಶುಲ್ಕ ಕಡಿತ ಮಾಡಿ ಉಳಿದ ಹಣ ಸಂಜನಾಗೆ ನೀಡಬೇಕು. ನಿಗದಿತ ಸಮಯದಲ್ಲಿ ದಂಡ ಪಾವತಿಸಿದರೆ ಆರು ತಿಂಗಳ ಶಿಕ್ಷೆ ಮಾಫಿ ಮಾಡಲಾಗುವುದು. ಒಂದು ವೇಳೆ ಪರಿಹಾರ ಮೊತ್ತ ನೀಡದೆ ಜೈಲು ಶಿಕ್ಷೆ ಅನುಭವಿಸಿದರೂ ದೂರುದಾರೆಗೆ ಪರಿಹಾರ ಹಿಂದಿರುಗಿಸುವ ಹೊಣೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

2018-19ರಲ್ಲಿ ನಡೆದ ಘಟನೆ ಇದಾಗಿದೆ. ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ನೀಡುವುದಾಗಿ ರಾಹುಲ್ ಆಮಿಷವೊಡ್ಡಿದ್ದ. ಆ ಬಳಿಕ ಗಲ್ರಾನಿಯಿಂದ 45 ಲಕ್ಷ ಹಣ ಪಡೆದು ವಂಚನೆ ಮಾಡಿದ್ದ.

ಈ ಸಂಬಂಧ ಇಂದಿರಾ ನಗರ ಠಾಣೆಯಲ್ಲಿ ರಾಹುಲ್ ಹಾಗೂ ಆತನ ಕುಟುಂಬದ ವಿರುದ್ಧ ಸಂಜನಾ ದೂರು ದಾಖಲು ಮಾಡಿದ್ದರು. ಈ ದೂರನ್ನು ಆಧರಿಸಿ ಕೇಸ್ ದಾಖಲಿಸಿಕೊಳ್ಳಲಾಗಿತ್ತು. ಕೋರ್ಟ್​ ವಿಚಾರಣೆಯಲ್ಲಿ ರಾಹುಲ್ ತೋನ್ಸೆ ಅಪರಾಧಿ ಎಂದು ಸಾಬೀತಾಗಿದೆ. ಹೀಗಾಗಿ, ಶಿಕ್ಷೆ ವಿಧಿಸಲಾಗಿದೆ.

ರಾಹುಲ್ ದೊಡ್ಡ ಉದ್ಯಮಿಯಾಗಿದ್ದು, ಗೋವಾ ಹಾಗೂ ಕೊಲಂಬೋದಲ್ಲಿ ಕ್ಯಾಸಿನೊ ನಡೆಸುತ್ತಿದ್ದ. ಈ ಪ್ರಕರಣದಲ್ಲಿ ರಾಹುಲ್ ತಂದೆ ರಾಮಕೃಷ್ಣ, ತಾಯಿ ರಾಜೇಶ್ವರಿ ಕೂಡ ಶಾಮೀಲಾಗಿದ್ದರು ಎನ್ನಲಾಗಿತ್ತು. ಅವರ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು. ಇದಲ್ಲದೆ, ಉದ್ಯಮಿಗೆ 25 ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪವೂ ಇವನ ಮೇಲೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT