ಡಿ ಕೆ ಶಿವಕುಮಾರ್ 
ರಾಜ್ಯ

ಮೆಟ್ರೊ ಪಿಲ್ಲರ್, ಪಾರಂಪರಿಕ ಕಟ್ಟಡಗಳಿಗೆ ದೀಪಾಲಂಕಾರ: ಡಿ.ಕೆ ಶಿವಕುಮಾರ್

‘ಬೆಂಗಳೂರು ನಗರದಲ್ಲಿ ಎಲ್‌ಇಡಿ ದೀಪ ಬಳಸಲಾಗುವುದು. ಈ ಹಿಂದೆ ಕರೆಯಲಾಗಿದ್ದ ಟೆಂಡರ್ ವಿಫಲವಾಗಿದ್ದು, ಮರು ಟೆಂಡರ್ ಕರೆಯಲಾಗುವುದು. ಡಿಪಿಆರ್ ಕೂಡ ಸಿದ್ಧಪಡಿಸಲಾಗಿದೆ’ ಎಂದರು.

ಬೆಂಗಳೂರು: ‘ಮೆಟ್ರೊ ಪಿಲ್ಲರ್ ಹಾಗೂ ಐತಿಹಾಸಿಕ ಪಾರಂಪರಿಕ ಕಟ್ಟಡಗಳ ದೀಪಾಲಂಕಾರಕ್ಕೆ ಬ್ರಾಂಡ್ ಬೆಂಗಳೂರು ಅಡಿ ಟೆಂಡರ್ ಕರೆಯಲಾಗಿದೆ’ ಎಂದು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸೌಧದಲ್ಲಿ ನೂತನ ವಿದ್ಯುತ್ ದೀಪ ಅಲಂಕಾರ ಲೋಕಾರ್ಪಣೆಗೊಳಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬೆಂಗಳೂರಿನ ಸುಮಾರು 40 ಕಡೆ ದೀಪಾಲಂಕಾರಕ್ಕೆ ಸ್ಥಳಗಳನ್ನು ಗುರುತಿಸಲಾಗಿದೆ. ಯಾವ, ಯಾವ ಸ್ಥಳಗಳು ಎಂದು ಅಧಿಕಾರಿಗಳು ತಿಳಿಸಲಿದ್ದಾರೆ’ ಎಂದರು.

‘ಬೆಂಗಳೂರು ನಗರದಲ್ಲಿ ಎಲ್‌ಇಡಿ ದೀಪ ಬಳಸಲಾಗುವುದು. ಈ ಹಿಂದೆ ಕರೆಯಲಾಗಿದ್ದ ಟೆಂಡರ್ ವಿಫಲವಾಗಿದ್ದು, ಮರು ಟೆಂಡರ್ ಕರೆಯಲಾಗುವುದು. ಡಿಪಿಆರ್ ಕೂಡ ಸಿದ್ಧಪಡಿಸಲಾಗಿದೆ’ ಎಂದರು.

‘ತಮ್ಮ ಅವಧಿಯಲ್ಲಿ ಸಾಕ್ಷಿಗುಡ್ಡೆಗಳನ್ನು ಸೃಷ್ಟಿ ಮಾಡಬೇಕೆಂದು ಸಭಾಧ್ಯಕ್ಷ ಯು.ಟಿ. ಖಾದರ್ ಅವರು ವಿಧಾನಸೌಧ, ವಿಕಾಸಸೌಧ, ಬೆಳಗಾವಿಯ ಸುವರ್ಣ ಸೌಧಕ್ಕೆ ದೀಪಾಲಂಕಾರ ಮಾಡಿಸಿದ್ದಾರೆ’ ಎಂದರು.

‘ಎಸ್.ಎಂ. ಕೃಷ್ಣ ಅವರ ಕಾಲದಲ್ಲಿ ನಾವೆಲ್ಲರೂ ಬೆಂಬಲವಾಗಿ ನಿಂತು ವಿಕಾಸಸೌಧ, ಉದ್ಯೋಗ ಸೌಧ ನಿರ್ಮಾಣ ಮಾಡಿ ಇತಿಹಾಸ ಸೃಷ್ಟಿಯಾಯಿತು. ಒಮ್ಮೆ ರಾಜೀವ್ ಗಾಂಧಿ ಅವರು ಬೆಂಗಳೂರಿಗೆ ಬಂದಾಗ ಜಿಪಿಒ ಕಚೇರಿಯು ವಿಧಾನಸೌಧದ ವಾಸ್ತುಶಿಲ್ಪ ಹೊಂದಿರಬೇಕು ಎಂದು ಸಲಹೆ ನೀಡಿದ್ದರು. ಈ ವೇಳೆ ಆಸ್ಕರ್ ಫರ್ನಾಂಡಿಸ್ ಕೂಡ ಇದ್ದರು’ ಎಂದು ನೆನಪಿಸಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT