ನಟಿ ರಾನ್ಯಾ ರಾವ್ 
ರಾಜ್ಯ

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ನ್ಯಾಯಾಂಗ ಬಂಧನ ವಿಸ್ತರಣೆ

ರನ್ಯಾ ರಾವ್, ಉದ್ಯಮಿ ತರುಣ್ ರಾಜು ಮತ್ತು ಆಭರಣ ವ್ಯಾಪಾರಿ ಸಾಹಿಲ್ ಜೈನ್ ಅವರು ದುಬೈನಿಂದ ಭಾರತಕ್ಕೆ 12.56 ಕೋಟಿ ರೂ. ಗೂ ಹೆಚ್ಚು ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸಿದ ಆರೋಪ ಹೊತ್ತಿದ್ದಾರೆ.

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟಿ ರನ್ಯಾ ರಾವ್, ಮತ್ತಿಬ್ಬರ ನ್ಯಾಯಾಂಗ ಬಂಧನ ಅವಧಿಯನ್ನು ನಗರದ ನ್ಯಾಯಾಲಯವೊಂದು ಸೋಮವಾರ ಏಪ್ರಿಲ್ 21 ರವರೆಗೆ ವಿಸ್ತರಿಸಿದೆ.

ರನ್ಯಾ ರಾವ್, ಉದ್ಯಮಿ ತರುಣ್ ರಾಜು ಮತ್ತು ಆಭರಣ ವ್ಯಾಪಾರಿ ಸಾಹಿಲ್ ಜೈನ್ ಅವರು ದುಬೈನಿಂದ ಭಾರತಕ್ಕೆ 12.56 ಕೋಟಿ ರೂ. ಗೂ ಹೆಚ್ಚು ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸಿದ ಆರೋಪ ಹೊತ್ತಿದ್ದಾರೆ.

ಮಾರ್ಚ್ 3, 2025 ರಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈಯಿಂದ 14.8 ಕೆಜಿ ಚಿನ್ನ ಕಳ್ಳಸಾಗಣೆ ಆರೋಪದಲ್ಲಿ ನಟಿ ರನ್ಯಾ ರಾವ್ ಅವರನ್ನು ಬಂಧಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿತ್ತು.

ನಂತರದ ತನಿಖೆ ವೇಳೆ ರನ್ಯಾ ಅವರು 2023 ಮತ್ತು 2025ರ ನಡುವೆ 45 ಬಾರಿ ಏಕಾಂಗಿಯಾಗಿ ಪ್ರವಾಸ ಮಾಡಿದ್ದು, ಕಳ್ಳಸಾಗಣೆ ಜಾಲದಲ್ಲಿ ಭಾಗಿಯಾಗಿರುವ ಶಂಕೆಯನ್ನು ಹೆಚ್ಚಿಸಿತ್ತು.

ಹೆಚ್ಚಿನ ವಿಚಾರಣೆ ವೇಳೆ 2023 ರಲ್ಲಿ ನಟ ಮತ್ತು ಉದ್ಯಮಿ ತರುಣ್ ರಾಜು ಅವರೊಂದಿಗೆ 2023ರಲ್ಲಿ ದುಬೈ ಮೂಲದ ವಿರಾ ಡೈಮಂಡ್ ಟ್ರೆಡಿಂಗ್ ಸಂಸ್ಥೆಯೊಂದಿಗೆ ಸಂಬಂಧ ನಟಿ ಸಂಬಂಧ ಹೊಂದಿರುವುದು ತಿಳಿದುಬಂದಿತ್ತು. ವಿರಾಟ್ ಕೊಂಡೂರು ಎಂದೂ ಕರೆಯಲ್ಪಡುವ ರಾಜು ದುಬೈನಲ್ಲಿ ಚಿನ್ನ ಖರೀದಿಸಿ, ಭಾರತಕ್ಕೆ ಅಕ್ರಮವಾಗಿ ಸಾಗಿಸಲು ತೊಡಗಿಸಿಕೊಂಡಿರುವ ಕುರಿತು ಸಾಕ್ಷ್ಯಧಾರ ದೊರೆತ ನಂತರ ಆತನನ್ನು ಬಂಧಿಸಲಾಗಿತ್ತು.

ತನಿಖೆ ವೇಳೆ ಆಭರಣ ವ್ಯಾಪಾರಿ ಸಾಹಿಲ್ ಜೈನ್ ಸಹ ಈ ಜಾಲದಲ್ಲಿದ್ದು, ಸುಮಾರು 40 ಕೋಟಿ ರೂ. ಮೌಲ್ಯದ ಸುಮಾರು 49 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮೂಲಕ ಮಾರಾಟ ಮಾಡಲು ರನ್ಯಾಗೆ ನೆರವಾಗಿದ್ದಾರೆ ಎನ್ನಲಾಗಿದೆ. ಅಲ್ಲದೇ ದೊಡ್ಡ ಮಟ್ಟದ ಹವಾಲಾ ವಹಿವಾಟು ನಡೆಸಿದ್ದು, ಕಮಿಷನ್ ಕೂಡಾ ಪಡೆದಿದ್ದರು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT