ರಾಜ್ಯ

ಬೆಂಗಳೂರು: ಮುಂದಿನ ಎರಡು ದಿನ ರಾಜ್ಯದ ಕೆಲ ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ

ರಾಜ್ಯ ಕೆಲ ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಗಂಟೆಗೆ 40 ಕಿ.ಮೀ ವೇಗದ ಗಾಳಿ ಬೀಸುವ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ಎಚ್ಚರಿಕೆ ನೀಡಿದೆ.

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ಎರಡು ದಿನಗಳಲ್ಲಿ ಮೋಡ ಕವಿದ ವಾತಾವರಣ, ಸಾಧಾರಣ ಮಳೆಯಾಗಲಿದೆ. ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ರಾಜ್ಯ ಕೆಲ ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಗಂಟೆಗೆ 40 ಕಿ.ಮೀ ವೇಗದ ಗಾಳಿ ಬೀಸುವ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ಎಚ್ಚರಿಕೆ ನೀಡಿದೆ.

ಬಿರುಗಾಳಿಯ ಸಮಯದಲ್ಲಿ ಜನರು ಮನೆಯೊಳಗೆ ಇರಲು ಮತ್ತು ತೀವ್ರ ಮಳೆಯ ಸಮಯದಲ್ಲಿ ಪ್ರಯಾಣ ತಪ್ಪಿಸಲು ಸೂಚಿಸಲಾಗಿದೆ ಎಂದು KSNDMC ತಿಳಿಸಿದೆ, ಬೆಂಗಳೂರು ಮತ್ತು ಹತ್ತಿರದ ಪ್ರದೇಶಗಳಲ್ಲಿ ಗುಡುಗು ಸಹಿತ ಬಿರುಗಾಳಿ ಬೀಸುವ ಬಗ್ಗೆ ಎಚ್ಚರಿಕೆ ನೀಡಿದೆ.

KSNDMCಯ ಐದು ದಿನಗಳ ಹವಾಮಾನ ಮುನ್ಸೂಚನೆಯ ಪ್ರಕಾರ, ಸೋಮವಾರದವರೆಗೆ ಕರ್ನಾಟಕದಾದ್ಯಂತ ಮೋಡ ಕವಿದ ವಾತಾವರಣವಿರುತ್ತದೆ, ಗುಡುಗು, ಮಿಂಚು ಮತ್ತು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುತ್ತದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಭಾರತ ಹವಾಮಾನ ಇಲಾಖೆಯ ಪ್ರಕಾರ, ಸೋಮವಾರ ಬೆಂಗಳೂರಿನಲ್ಲಿ ಸ್ಪಷ್ಟ ಆಕಾಶವಿರುತ್ತದೆ. "ಮಳೆ ಬರುವ ಸಾಧ್ಯತೆ ಇಲ್ಲ, ಕನಿಷ್ಠ ತಾಪಮಾನವು ಕನಿಷ್ಠ 21-22 ಡಿಗ್ರಿ ಸೆಲ್ಸಿಯಸ್ ನಡುವೆ ಇರುತ್ತದೆ" ಎಂದು ಐಎಂಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT