ಕೊಲೆ ಆರೋಪಿ ಮುತ್ತಿಡುತ್ತಿರುವ ಯುವಕ 
ರಾಜ್ಯ

ಮಂಗಳೂರು: ಕೋರ್ಟ್ ಆವರಣದೊಳಗೆ ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಹಣೆಗೆ ಮುತ್ತಿಟ್ಟ ಯುವಕ!

ಇಬ್ಬರು ಪೊಲೀಸರು ಬೆಂಗಾವಲಾಗಿ ನಿಂತಿದ್ದರೂ ಯುವಕ ಬೆಳ್ಳಾರೆಯ ತಲೆಯನ್ನು ಎರಡೂ ಕೈಗಳಿಂದ ಹಿಡಿದು ಹಣೆಗೆ ಮುತ್ತಿಡುವಲ್ಲಿ ಯಶಸ್ವಿಯಾಗಿದ್ದಾನೆ.

ಮಂಗಳೂರು: 2022ರಲ್ಲಿ ನಡೆದಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಾಫಿ ಬೆಳ್ಳಾರೆ ಹಣೆಗೆ ಅಪರಿಚಿತ ಯುವಕನೋರ್ವ ಮುತ್ತಿಟ್ಟಿರುವ ಘಟನೆ ಸೋಮವಾರ ನಡೆದಿದೆ.

ಶಾಫಿ ಬೆಳ್ಳಾರೆಯನ್ನು ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ ಈ ಘಟನೆ ನಡೆದಿದೆ. ಇಬ್ಬರು ಪೊಲೀಸರು ಬೆಂಗಾವಲಾಗಿ ನಿಂತಿದ್ದರೂ ಯುವಕ ಬೆಳ್ಳಾರೆಯ ತಲೆಯನ್ನು ಎರಡೂ ಕೈಗಳಿಂದ ಹಿಡಿದು ಹಣೆಗೆ ಮುತ್ತಿಡುವಲ್ಲಿ ಯಶಸ್ವಿಯಾಗಿದ್ದಾನೆ.

ನ್ಯಾಯಾಲಯದ ಆವರಣದಲ್ಲಿ ಪೊಲೀಸರ ಸಮ್ಮುಖದಲ್ಲಿಯೇ ಬಹಿರಂಗವಾಗಿಯೇ ಈ ಘಟನೆ ನಡೆದಿದೆ.

ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಬೆಳ್ಳಾರೆಯನ್ನು 2017 ರಲ್ಲಿ ಆರ್‌ಎಸ್‌ಎಸ್ ಮತ್ತು ಕಲ್ಲಡ್ಕ ಭಟ್ ವಿರುದ್ಧ ಮಾಡಿದ್ದ ಅವಹೇಳನಾಕಾರಿ ಭಾಷಣ ಸಂಬಂಧದ ಪ್ರತ್ಯೇಕ ಕೇಸ್ ಗಳಲ್ಲಿ ಆತನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆತರಲಾಗಿತ್ತು.

ಬೆಳ್ಳಾರೆಗೆ ಕಿಸ್ ಮಾಡಿದ ತಕ್ಷಣ ಯುವಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನನ್ನು ಗುರುತಿಸಿ ಬಂಧಿಸಲು ಶೋಧ ಕಾರ್ಯ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT