ಕೊಲೆ ಆರೋಪಿ ಮುತ್ತಿಡುತ್ತಿರುವ ಯುವಕ 
ರಾಜ್ಯ

ಮಂಗಳೂರು: ಕೋರ್ಟ್ ಆವರಣದೊಳಗೆ ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಹಣೆಗೆ ಮುತ್ತಿಟ್ಟ ಯುವಕ!

ಇಬ್ಬರು ಪೊಲೀಸರು ಬೆಂಗಾವಲಾಗಿ ನಿಂತಿದ್ದರೂ ಯುವಕ ಬೆಳ್ಳಾರೆಯ ತಲೆಯನ್ನು ಎರಡೂ ಕೈಗಳಿಂದ ಹಿಡಿದು ಹಣೆಗೆ ಮುತ್ತಿಡುವಲ್ಲಿ ಯಶಸ್ವಿಯಾಗಿದ್ದಾನೆ.

ಮಂಗಳೂರು: 2022ರಲ್ಲಿ ನಡೆದಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಾಫಿ ಬೆಳ್ಳಾರೆ ಹಣೆಗೆ ಅಪರಿಚಿತ ಯುವಕನೋರ್ವ ಮುತ್ತಿಟ್ಟಿರುವ ಘಟನೆ ಸೋಮವಾರ ನಡೆದಿದೆ.

ಶಾಫಿ ಬೆಳ್ಳಾರೆಯನ್ನು ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ ಈ ಘಟನೆ ನಡೆದಿದೆ. ಇಬ್ಬರು ಪೊಲೀಸರು ಬೆಂಗಾವಲಾಗಿ ನಿಂತಿದ್ದರೂ ಯುವಕ ಬೆಳ್ಳಾರೆಯ ತಲೆಯನ್ನು ಎರಡೂ ಕೈಗಳಿಂದ ಹಿಡಿದು ಹಣೆಗೆ ಮುತ್ತಿಡುವಲ್ಲಿ ಯಶಸ್ವಿಯಾಗಿದ್ದಾನೆ.

ನ್ಯಾಯಾಲಯದ ಆವರಣದಲ್ಲಿ ಪೊಲೀಸರ ಸಮ್ಮುಖದಲ್ಲಿಯೇ ಬಹಿರಂಗವಾಗಿಯೇ ಈ ಘಟನೆ ನಡೆದಿದೆ.

ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಬೆಳ್ಳಾರೆಯನ್ನು 2017 ರಲ್ಲಿ ಆರ್‌ಎಸ್‌ಎಸ್ ಮತ್ತು ಕಲ್ಲಡ್ಕ ಭಟ್ ವಿರುದ್ಧ ಮಾಡಿದ್ದ ಅವಹೇಳನಾಕಾರಿ ಭಾಷಣ ಸಂಬಂಧದ ಪ್ರತ್ಯೇಕ ಕೇಸ್ ಗಳಲ್ಲಿ ಆತನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆತರಲಾಗಿತ್ತು.

ಬೆಳ್ಳಾರೆಗೆ ಕಿಸ್ ಮಾಡಿದ ತಕ್ಷಣ ಯುವಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನನ್ನು ಗುರುತಿಸಿ ಬಂಧಿಸಲು ಶೋಧ ಕಾರ್ಯ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT