ಹೆಚ್ ಡಿ ಕುಮಾರಸ್ವಾಮಿ  online desk
ರಾಜ್ಯ

ಹಿರಿಯ ಪತ್ರಕರ್ತ, ಮಾಜಿ MLC ರಾಮಯ್ಯ ನಿವಾಸಕ್ಕೆ ಹೆಚ್.ಡಿ ಕುಮಾರಸ್ವಾಮಿ ಭೇಟಿ; ಆರೋಗ್ಯ ವಿಚಾರಣೆ

ಸೋಮವಾರ ಬೆಳಗ್ಗೆ ರಾಮಯ್ಯ ಅವರ ನಿವಾಸಕ್ಕೆ ಆಗಮಿಸಿದ ಸಚಿವರು, ಆರೋಗ್ಯ ವಿಚಾರಿಸಿ ಅದಷ್ಟು ಬೇಗ ಉತ್ತಮವಾಗಿ ಚೇತರಿಸಿಕೊಳ್ಳುವಂತೆ ಶುಭ ಹಾರೈಸಿದರು.

ಬೆಂಗಳೂರು: ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ನಾಡಿನ ಹಿರಿಯ ಪತ್ರಕರ್ತರು, ವಿಧಾನ ಪರಿಷತ್ ಮಾಜಿ ಸದಸ್ಯರಾದ ಪಿ. ರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.

ಸೋಮವಾರ ಬೆಳಗ್ಗೆ ರಾಮಯ್ಯ ಅವರ ನಿವಾಸಕ್ಕೆ ಆಗಮಿಸಿದ ಸಚಿವರು, ಆರೋಗ್ಯ ವಿಚಾರಿಸಿ ಅದಷ್ಟು ಬೇಗ ಉತ್ತಮವಾಗಿ ಚೇತರಿಸಿಕೊಳ್ಳುವಂತೆ ಶುಭ ಹಾರೈಸಿದರು.

ಕೆಲ ಹೊತ್ತು ರಾಮಯ್ಯ ಅವರ ನಿವಾಸದಲ್ಲಿಯೇ ಇದ್ದ ಸಚಿವರು, ಅವರೊಂದಿಗೆ ಉಪಹಾರ ಸೇವಿಸಿದರು. ಈ ಬಗ್ಗೆ ಮಾಹಿತಿ ನೀಡಿರುವ ಸಚಿವರು; ಪ್ರಾಮಾಣಿಕ, ಮೌಲ್ಯಾಧಾರಿತ ಮಾಧ್ಯಮದ ಶ್ರೇಷ್ಠ ಕೊಂಡಿಯಾಗಿರುವ ಹಿಂದೂ ರಾಮಯ್ಯನವರು ನಮ್ಮ ತಂದೆಯವರ ವಯಸ್ಸಿನವರು ಮತ್ತು ಅವರ ಸಮಕಾಲೀನರು. ಅವರ ಅನಾರೋಗ್ಯದ ಬಗ್ಗೆ ಮಾಹಿತಿ ಬಂತು. ಅವರ ಕ್ಷೇಮ ವಿಚಾರಿಸಲು ಬಂದೆ. ಅವರು ಆರೋಗ್ಯವಾಗಿರಲಿ, ಶತಾಯುಷಿಯಾಗಿ ಸದಾ ಮಾರ್ಗದಶನ ನೀಡಲಿ ಎಂದು ಹಾರೈಸಿದೆ ಎಂದು ಹೇಳಿದ್ದಾರೆ.

ಹಿರಿಯರು ಆಗಿರುವ ರಾಮಯ್ಯ ಅವರು ಪತ್ರಿಕೋದ್ಯಮದ ಮಹಾವೃಕ್ಷ. ಅವರು ನನ್ನ ಗುರು ಸಮಾನರು. ವಿಧಾನ ಪರಿಷತ್ ಮಾಜಿ ಸದಸ್ಯರಾಗಿಯೂ ಅವರು ನಾಡಿಗೆ ಬಹುದೊಡ್ಡ ಸೇವೆ ಮಾಡಿದ್ದಾರೆ. ಅಲ್ಲದೆ, ಮೊದಲಿನಿಂದಲೂ ನನ್ನ ಬಗ್ಗೆ ಅವರು ಬಹಳಷ್ಟು ಪ್ರೀತಿ, ವಾತ್ಸಲ್ಯ ಹೊಂದಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT