ಹೆಚ್ ಡಿ ಕುಮಾರಸ್ವಾಮಿ  online desk
ರಾಜ್ಯ

ಹಿರಿಯ ಪತ್ರಕರ್ತ, ಮಾಜಿ MLC ರಾಮಯ್ಯ ನಿವಾಸಕ್ಕೆ ಹೆಚ್.ಡಿ ಕುಮಾರಸ್ವಾಮಿ ಭೇಟಿ; ಆರೋಗ್ಯ ವಿಚಾರಣೆ

ಸೋಮವಾರ ಬೆಳಗ್ಗೆ ರಾಮಯ್ಯ ಅವರ ನಿವಾಸಕ್ಕೆ ಆಗಮಿಸಿದ ಸಚಿವರು, ಆರೋಗ್ಯ ವಿಚಾರಿಸಿ ಅದಷ್ಟು ಬೇಗ ಉತ್ತಮವಾಗಿ ಚೇತರಿಸಿಕೊಳ್ಳುವಂತೆ ಶುಭ ಹಾರೈಸಿದರು.

ಬೆಂಗಳೂರು: ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ನಾಡಿನ ಹಿರಿಯ ಪತ್ರಕರ್ತರು, ವಿಧಾನ ಪರಿಷತ್ ಮಾಜಿ ಸದಸ್ಯರಾದ ಪಿ. ರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.

ಸೋಮವಾರ ಬೆಳಗ್ಗೆ ರಾಮಯ್ಯ ಅವರ ನಿವಾಸಕ್ಕೆ ಆಗಮಿಸಿದ ಸಚಿವರು, ಆರೋಗ್ಯ ವಿಚಾರಿಸಿ ಅದಷ್ಟು ಬೇಗ ಉತ್ತಮವಾಗಿ ಚೇತರಿಸಿಕೊಳ್ಳುವಂತೆ ಶುಭ ಹಾರೈಸಿದರು.

ಕೆಲ ಹೊತ್ತು ರಾಮಯ್ಯ ಅವರ ನಿವಾಸದಲ್ಲಿಯೇ ಇದ್ದ ಸಚಿವರು, ಅವರೊಂದಿಗೆ ಉಪಹಾರ ಸೇವಿಸಿದರು. ಈ ಬಗ್ಗೆ ಮಾಹಿತಿ ನೀಡಿರುವ ಸಚಿವರು; ಪ್ರಾಮಾಣಿಕ, ಮೌಲ್ಯಾಧಾರಿತ ಮಾಧ್ಯಮದ ಶ್ರೇಷ್ಠ ಕೊಂಡಿಯಾಗಿರುವ ಹಿಂದೂ ರಾಮಯ್ಯನವರು ನಮ್ಮ ತಂದೆಯವರ ವಯಸ್ಸಿನವರು ಮತ್ತು ಅವರ ಸಮಕಾಲೀನರು. ಅವರ ಅನಾರೋಗ್ಯದ ಬಗ್ಗೆ ಮಾಹಿತಿ ಬಂತು. ಅವರ ಕ್ಷೇಮ ವಿಚಾರಿಸಲು ಬಂದೆ. ಅವರು ಆರೋಗ್ಯವಾಗಿರಲಿ, ಶತಾಯುಷಿಯಾಗಿ ಸದಾ ಮಾರ್ಗದಶನ ನೀಡಲಿ ಎಂದು ಹಾರೈಸಿದೆ ಎಂದು ಹೇಳಿದ್ದಾರೆ.

ಹಿರಿಯರು ಆಗಿರುವ ರಾಮಯ್ಯ ಅವರು ಪತ್ರಿಕೋದ್ಯಮದ ಮಹಾವೃಕ್ಷ. ಅವರು ನನ್ನ ಗುರು ಸಮಾನರು. ವಿಧಾನ ಪರಿಷತ್ ಮಾಜಿ ಸದಸ್ಯರಾಗಿಯೂ ಅವರು ನಾಡಿಗೆ ಬಹುದೊಡ್ಡ ಸೇವೆ ಮಾಡಿದ್ದಾರೆ. ಅಲ್ಲದೆ, ಮೊದಲಿನಿಂದಲೂ ನನ್ನ ಬಗ್ಗೆ ಅವರು ಬಹಳಷ್ಟು ಪ್ರೀತಿ, ವಾತ್ಸಲ್ಯ ಹೊಂದಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರವೇ ಅಡ್ಡಿ ಸೃಷ್ಟಿಸುತ್ತಿದೆ: DCM ಡಿ.ಕೆ. ಶಿವಕುಮಾರ್

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

SCROLL FOR NEXT