ರಾಜ್ಯ

ಬೆಂಗಳೂರಿನ 2ನೇ ವಿಮಾನ‌ ನಿಲ್ದಾಣ: ಬಿಡದಿ ಔಟ್; ಈ ಎರಡು ಜಾಗ ಫಿಕ್ಸ್!

ಬಿಡದಿ ಬೆಂಗಳೂರಿನ ಎರಡನೇ ವಿಮಾನ‌ ನಿಲ್ದಾಣಕ್ಕೆ ಸೂಕ್ತ ಅಲ್ಲ. ಈ ಜಾಗವನ್ನು ಬಿಟ್ಟು ಈ ಎರಡು ಜಾಗಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಲಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಬೆಂಗಳೂರು: ಬಿಡದಿ ಬೆಂಗಳೂರಿನ ಎರಡನೇ ವಿಮಾನ‌ ನಿಲ್ದಾಣಕ್ಕೆ ಸೂಕ್ತ ಅಲ್ಲ. ಈ ಜಾಗವನ್ನು ಬಿಟ್ಟು ಈ ಎರಡು ಜಾಗಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಲಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಬಿಡದಿ ಸೂಕ್ತವಲ್ಲ ಎಂದು ಈ ಹಿಂದೆ ತಾಂತ್ರಿಕ ತಂಡ ವರದಿ ವಿಚಾರವಾಗಿ ಮಾತನಾಡಿದ ಅವರು, ಕನಕಪುರದ ಹಾರೋಹಳ್ಳಿ ಬಳಿ ಒಂದು ಜಾಗ ನೋಡಿದ್ದೇವೆ. ಕುಣಿಗಲ್ ರಸ್ತೆ ಬಳಿ ಒಂದು ಜಾಗ ನೋಡಿದ್ದೇವೆ. ಇವು ವಿಧಾನಸೌಧಕ್ಕೆ 50 ಕಿ.ಮೀ ದೂರ ಇವೆ‌ ಎಂದರು. ಕೇಂದ್ರ ಅಧ್ಯಯನ ತಂಡ ನಿನ್ನೆಯಿಂದ ಮೂರು ದಿನಗಳ ಕಾಲ ಸ್ಥಳ ಪರಿಶೀಲನೆ ನಡೆಸಲಿವೆ. ನಂತರ ದೆಹಲಿಗೆ ತೆರಳಿ ಸ್ಥಳಗಳ ಬಗ್ಗೆ ವರದಿ ನೀಡುತ್ತಾರೆ ಎಂದರು. ಇನ್ನು ದೆಹಲಿಯಿಂದ ನಮಗೆ ಸ್ಥಳ ವರದಿ ಬರಬೇಕು. ಆಮೇಲೆ ನಾವು ಸಮಗ್ರ ಯೋಜನಾ ವರದಿ (DPR) ಮಾಡಬೇಕಾಗುತ್ತದೆ ಎಂದರು.

ನಗರದಲ್ಲಿ ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಸರಕಾರವು ಗುರುತಿಸಿರುವ ಮೂರು ಸ್ಥಳಗಳ ಪೈಕಿ ಕನಕಪುರ ರಸ್ತೆಯಲ್ಲಿರುವ ಎರಡು ತಾಣಗಳ ಪರಿಶೀಲನೆಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ತಂಡವು ಮಂಗಳವಾರ ನಡೆಸಿತು. ನಂತರ ತಂಡದ ಸದಸ್ಯರು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರನ್ನು ಭೇಟಿಯಾಗಿ ವಿಚಾರ ವಿನಿಮಯ ನಡೆಸಿದರು.

ಈ ಸಂದರ್ಭದಲ್ಲಿ ಸಚಿವರು ಕೂಡ ಉದ್ದೇಶಿತ ವಿಮಾನ ನಿಲ್ದಾಣದ ಅಗತ್ಯ, ಬೆಂಗಳೂರಿನ ನಾಗರಿಕ ಮತ್ತು ಕೈಗಾರಿಕಾ ಅಗತ್ಯ ಇತ್ಯಾದಿಗಳನ್ನು ತಂಡದ ಸದಸ್ಯರಿಗೆ ವಿವರಿಸಿ, ಪ್ರಾತ್ಯಕ್ಷಿಕೆ ಪ್ರದರ್ಶಿಸಿದರು. ಅತ್ಯಂತ ಪಾರದರ್ಶಕವಾಗಿ ಸ್ಥಳ ಗುರುತಿಸುವ ಕೆಲಸ ಆಗಲಿ ಎಂದು ತಂಡಕ್ಕೆ ಸಲಹೆ ನೀಡಿದರು. ನಾಳೆಯೂ ಈ ತಂಡ ನೆಲಮಂಗಲ-ಕುಣಿಗಲ್ ರಸ್ತೆಯ ಸ್ಥಳ ಪರಿಶೀಲನೆ ನಡೆಸಲಿದೆ. ಉದ್ದೇಶಿತ ಎರಡನೆಯ ವಿಮಾನ ನಿಲ್ದಾಣವನ್ನು ಬೆಂಗಳೂರಿನ ಅಗತ್ಯಗಳನ್ನು ಗಮನದಲ್ಲಿ ಇಟ್ಟುಕೊಂಡು ನಿರ್ಮಿಸಲು ಸರ್ಕಾರ ತೀರ್ಮಾನಿಸಿದೆ. ಸ್ಥಳ ಪರಿಶೀಲನೆಯ ಬಳಿಕ ಪ್ರಾಧಿಕಾರದ ಅಭಿಪ್ರಾಯ ಏನೆಂಬುದನ್ನು ತಿಳಿದುಕೊಂಡು, ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಪ್ರಾಧಿಕಾರದ ತಂಡದಲ್ಲಿ ಜನರಲ್ ಮ್ಯಾನೇಜರ್ ವಿಕ್ರಮ್ ಸಿಂಗ್, ಜಂಟಿ ಜನರಲ್ ಮ್ಯಾನೇಜರ್ ಕೆ. ಶ್ರೀನಿವಾಸರಾವ್, ಸಹಾಯಕ ಜನರಲ್ ಮ್ಯಾನೇಜರ್ ಮನುಜ್ ಭಾರದ್ವಾಜ್, ಪ್ರಧಾನ ಕಚೇರಿಯ ಅಧಿಕಾರಿಗಳಾದ ಸಚ್ಚಿದಾನಂದ್, ಸಂತೋಷಕುಮಾರ್ ಭಾರತಿ, ಅಮನ್ ಚಿಪಾ ಇದ್ದರು. ಸರ್ಕಾರದ ಪರವಾಗಿ ಮೂಲಸೌಕರ್ಯ ಇಲಾಖೆ ಕಾರ್ಯದರ್ಶಿ ಎನ್. ಮಂಜುಳಾ, ಹೆಚ್ಚುವರಿ ಕಾರ್ಯದರ್ಶಿ ಹೆಪ್ಸಿಬಾ ರಾಣಿ, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಖುಷ್ಬೂ ಗೋಯಲ್, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಹಾಜರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT