ಪರಪ್ಪನ ಅಗ್ರಹಾರ  
ರಾಜ್ಯ

ಆಹಾರ-ಮೂಲಭೂತ ಸೌಕರ್ಯ ನೀಡಲು ಲಂಚಕ್ಕೆ ಆಗ್ರಹ, ಕೈದಿ ಮೇಲೆ ಹಲ್ಲೆ: ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳ ವಿರುದ್ಧ ದೂರು ದಾಖಲು

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ನಿವಾಸಿ ಬಾನು ಎಂಬುವವರು ಕರ್ನಾಟಕ ಮಾನವ ಹಕ್ಕುಗಳ ಆಯೋಗಕ್ಕೆ ಸೋಮವಾರ ದೂರು ನೀಡಿದ್ದು, ತಮ್ಮ ಒಬ್ಬನೇ ಮಗನ ರಕ್ಷಿಸುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು: ವಿಚಾರಣಾಧೀನ ಕೈದಿಗೆ ಆಹಾರ ಹಾಗೂ ಮೂಲಭೂತ ಸೌಕರ್ಯ ಒದಗಿಸಲು ಕಾರಾಗೃಹ ಸಿಬ್ಬಂದಿ ಲಂಚಕ್ಕೆ ಬೇಡಿಕೆ ಇಡುತ್ತಿದ್ದು, ಹಲ್ಲೆ ನಡೆಸುತ್ತಿದ್ದಾರೆಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳ ವಿರುದ್ಧ ಮಹಿಳೆಯೊಬ್ಬರು ಕರ್ನಾಟಕ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ನಿವಾಸಿ ಬಾನು ಎಂಬುವವರು ಕರ್ನಾಟಕ ಮಾನವ ಹಕ್ಕುಗಳ ಆಯೋಗಕ್ಕೆ ಸೋಮವಾರ ದೂರು ನೀಡಿದ್ದು, ತಮ್ಮ ಒಬ್ಬನೇ ಮಗನ ರಕ್ಷಿಸುವಂತೆ ಮನವಿ ಮಾಡಿದ್ದಾರೆ.

ನನ್ನ 21 ವರ್ಷದ ಮಗ ಹಮೀದ್ ಅಕ್ಟೋಬರ್ 4, 2023 ರಿಂದ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಇತ್ತೀಚೆಗೆ ಜೈಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ, ಏಪ್ರಿಲ್ 5 ರಂದು 7-8 ಮಂದಿ ಜೈಲು ಸಿಬ್ಬಂದಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆತ ಹೇಳಿದ್ದ. ಜೈಲು ಸಿಬ್ಬಂದಿ ಹಲ್ಲೆ ನಡೆಸಿರುವ ಹಿನ್ನೆಲೆಯಲ್ಲಿ ಮಗನ ದೇಹದ ಮೇಲೆ ಗಂಭೀರ ಗಾಯಗಳಾಗಿದ್ದು, ಇದರ ವೀಡಿಯೊವನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡಿರುವುದಾಗಿ ಹೇಳಿದ್ದಾರೆ. ವಿಡಿಯೋದಲ್ಲಿ ಹಮೀದ್ ಅವರ ತೊಡೆ, ಎದೆ ಮತ್ತು ಕೈಗಳ ಮೇಲೆ ಗಾಯದ ಗುರುತುಗಳಿವೆ ಕಂಡು ಬಂದಿದೆ ಎನ್ನಲಾಗಿದೆ.

ಜೈಲಿನಲ್ಲಿ ನನ್ನ ಮಗನಿಗೆ ಆಹಾರ ಮತ್ತು ಮೂಲಭೂತ ಸೌಕರ್ಯಗಳನ್ನು ನಿರಾಕರಿಸಲಾಗಿದೆ. ಸೌಲಭ್ಯಗಳನ್ನು ನೀಡಲು ಜೈಲು ಅಧಿಕಾರಿಗಳು 30,000 ರೂ. ಲಂಚ ಕೇಳಿದ್ದು, ಹಣ ನೀಡದ್ದಕ್ಕೆ ಶೌಚಾಲಯದಲ್ಲಿ ಮಲಗಿಸಿ, ನಿಂದಿಸಿ ದೈಹಿಕ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿದ್ದಾರೆ.

ದೂರಿನ ಜೊತೆಗೆ, ಹಮೀದ್ ದೇಹದ ಮೇಲಿರುವ ಗಾಯದ ಗುರುತುಗಳ ಛಾಯಾಚಿತ್ರಗಳು ಮತ್ತು ವೀಡಿಯೊಗಳನ್ನು ಲಗತ್ತಿಸಿದ್ದಾರೆ.

ಜೊತೆಗೆ ಮಗನಿಗೆ ವೈದ್ಯಕೀಯ ನೆರವು ನೀಡಲು ಅಧಿಕಾರಿಗಳು ನಿರಾಕರಿಸಿದ್ದು, ಹಣ ಹೊಂದಿಸುವಂತೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

ಬಿಹಾರದಲ್ಲಿ ರಾಜಕೀಯ ಬಿರುಗಾಳಿ: ಮುಖ್ಯಮಂತ್ರಿ ಸ್ಥಾನಕ್ಕೆ ನಿತಿಶ್ ಕುಮಾರ್ ರಾಜೀನಾಮೆ?

ಖಮೇನಿ ಹತ್ಯೆ ಕುರಿತು ಪೋಸ್ಟ್‌: ಎನ್‌ಸಿ ಸಂಸದ, ಶ್ರೀನಗರ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್ ದಾಖಲು

'ದೇಹದ ಮೇಲೆ ಕ್ಯಾಮೆರಾ Zoom': ಪಾಪರಾಜಿಗಳ ವಿರುದ್ಧ ಸಪ್ತಮಿಗೌಡ ಕಿಡಿ; Rukmini Vasanth ಬೆಂಬಲ!

ಇರಾನ್ ಹಡಗಿನ ಮೇಲೆ ದಾಳಿ; 101 ಜನ ನಾಪತ್ತೆ; ಅಮೆರಿಕದೊಂದಿಗೆ 'ಸಂಧಾನ ಇಲ್ಲ', ಯುದ್ಧ ಮುಂದುವರಿಯಲಿದೆ! Video

SCROLL FOR NEXT