ನಟ ದರ್ಶನ್ 
ರಾಜ್ಯ

ರೇಣುಕಸ್ವಾಮಿ ಕೊಲೆ ಪ್ರಕರಣ: ವಿಚಾರಣೆಗೆ ಗೈರಾದ ನಟ ದರ್ಶನ್ ಗೆ ಕೋರ್ಟ್ ತರಾಟೆ

ತೀವ್ರ ಬೆನ್ನು ನೋವಿನಿಂದಾಗಿ ನಟ ದರ್ಶನ್ ಹಾಜರಾಗಲು ಸಾಧ್ಯವಿಲ್ಲ ಎಂದು ದರ್ಶನ್ ಪರ ವಕೀಲರು ತಿಳಿಸಿದ ನಂತರ ನ್ಯಾಯಾಲಯವು ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಸೋಮವಾರ ವಿಚಾರಣೆಗೆ ಹಾಜರಾಗಿದ್ದರು. ಆದರೆ ವಿಚಾರಣೆಗೆ ಹಾಜರಾಗದ ಎರಡನೇ ಆರೋಪಿ ನಟ ದರ್ಶನ್ ತೂಗುದೀಪ ಅವರನ್ನು ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ತರಾಟೆಗೆ ತೆಗೆದುಕೊಂಡಿದೆ.

ತೀವ್ರ ಬೆನ್ನು ನೋವಿನಿಂದಾಗಿ ನಟ ದರ್ಶನ್ ಹಾಜರಾಗಲು ಸಾಧ್ಯವಿಲ್ಲ ಎಂದು ದರ್ಶನ್ ಪರ ವಕೀಲರು ತಿಳಿಸಿದ ನಂತರ ನ್ಯಾಯಾಲಯವು ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

ಪ್ರಕರಣದ ಎಲ್ಲಾ ಆರೋಪಿಗಳು ವೈಯಕ್ತಿಕವಾಗಿ ಹಾಜರಾಗುವುದು ಕಡ್ಡಾಯ ಎಂದು ನ್ಯಾಯಾಧೀಶರು ಪುನರುಚ್ಚರಿಸಿದರು. ಗಣ್ಯ ವ್ಯಕ್ತಿಗಳು ಅನಿಸಿಕೊಂಡವರು ಸೂಕ್ತ ಕಾನೂನಿನ ಕಾರಣವಿಲ್ಲದೆ ವಿನಾಯಿತಿ ಪಡೆಯಬಹುದು ಎಂಬ ಕಲ್ಪನೆ ತಪ್ಪು. ಕೇಸ್ ಇದ್ದಾಗ ಕೋರ್ಟ್ ಗೆ ತಪ್ಪದೇ ಹಾಜರಾಗಬೇಕು. ಗೈರು ಆಗಬಾರದು ಎಂದು ಎಚ್ಚರಿಸಿದರು.

ವಿಚಾರಣೆಯ ಸಮಯದಲ್ಲಿ, ದರ್ಶನ್ ಪರ ವಕೀಲರು, ತನಿಖೆಗೆ ಸಂಬಂಧಿಸಿದಂತೆ ಅವರ ನಿವಾಸದ ಮೇಲೆ ದಾಳಿ ನಡೆಸಿದಾಗ ವಶಪಡಿಸಿಕೊಂಡ 75 ಲಕ್ಷ ರೂ. ನಗದನ್ನು ಬಿಡುಗಡೆ ಮಾಡುವಂತೆಯೂ ಕೋರಿದರು.

ಈ ವಿಷಯವನ್ನು ನಿರ್ಧರಿಸುವ ಮೊದಲು ಆದಾಯ ತೆರಿಗೆ ಇಲಾಖೆಯ ಪ್ರತಿಕ್ರಿಯೆಯನ್ನು ಕೇಳುವುದಾಗಿ ನ್ಯಾಯಾಲಯ ಹೇಳಿದೆ ಮತ್ತು ಮುಂದಿನ ವಿಚಾರಣೆಯನ್ನು ಮೇ 20ಕ್ಕೆ ನಿಗದಿಪಡಿಸಿದೆ.

ತನಿಖೆಯ ಸಮಯದಲ್ಲಿ ವಶಪಡಿಸಿಕೊಂಡ ಮೊಬೈಲ್ ಫೋನ್‌ಗಳನ್ನು ಹಿಂತಿರುಗಿಸುವಂತೆ ಕೋರಿ ಪ್ರತಿವಾದಿಯು ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಿದ್ದಾರೆ.

ಆರೋಪಿಗಳು ಜಾಮೀನು ಪಡೆದರೂ ಪ್ರತಿ ತಿಂಗಳು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂಬ ಷರತ್ತು ಹಿನ್ನೆಲೆಯಲ್ಲಿ ಎಲ್ಲರೂ ಕೋರ್ಟ್​ಗೆ ಹಾಜರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT