ನಟ ದರ್ಶನ್ 
ರಾಜ್ಯ

ರೇಣುಕಸ್ವಾಮಿ ಕೊಲೆ ಪ್ರಕರಣ: ವಿಚಾರಣೆಗೆ ಗೈರಾದ ನಟ ದರ್ಶನ್ ಗೆ ಕೋರ್ಟ್ ತರಾಟೆ

ತೀವ್ರ ಬೆನ್ನು ನೋವಿನಿಂದಾಗಿ ನಟ ದರ್ಶನ್ ಹಾಜರಾಗಲು ಸಾಧ್ಯವಿಲ್ಲ ಎಂದು ದರ್ಶನ್ ಪರ ವಕೀಲರು ತಿಳಿಸಿದ ನಂತರ ನ್ಯಾಯಾಲಯವು ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಸೋಮವಾರ ವಿಚಾರಣೆಗೆ ಹಾಜರಾಗಿದ್ದರು. ಆದರೆ ವಿಚಾರಣೆಗೆ ಹಾಜರಾಗದ ಎರಡನೇ ಆರೋಪಿ ನಟ ದರ್ಶನ್ ತೂಗುದೀಪ ಅವರನ್ನು ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ತರಾಟೆಗೆ ತೆಗೆದುಕೊಂಡಿದೆ.

ತೀವ್ರ ಬೆನ್ನು ನೋವಿನಿಂದಾಗಿ ನಟ ದರ್ಶನ್ ಹಾಜರಾಗಲು ಸಾಧ್ಯವಿಲ್ಲ ಎಂದು ದರ್ಶನ್ ಪರ ವಕೀಲರು ತಿಳಿಸಿದ ನಂತರ ನ್ಯಾಯಾಲಯವು ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

ಪ್ರಕರಣದ ಎಲ್ಲಾ ಆರೋಪಿಗಳು ವೈಯಕ್ತಿಕವಾಗಿ ಹಾಜರಾಗುವುದು ಕಡ್ಡಾಯ ಎಂದು ನ್ಯಾಯಾಧೀಶರು ಪುನರುಚ್ಚರಿಸಿದರು. ಗಣ್ಯ ವ್ಯಕ್ತಿಗಳು ಅನಿಸಿಕೊಂಡವರು ಸೂಕ್ತ ಕಾನೂನಿನ ಕಾರಣವಿಲ್ಲದೆ ವಿನಾಯಿತಿ ಪಡೆಯಬಹುದು ಎಂಬ ಕಲ್ಪನೆ ತಪ್ಪು. ಕೇಸ್ ಇದ್ದಾಗ ಕೋರ್ಟ್ ಗೆ ತಪ್ಪದೇ ಹಾಜರಾಗಬೇಕು. ಗೈರು ಆಗಬಾರದು ಎಂದು ಎಚ್ಚರಿಸಿದರು.

ವಿಚಾರಣೆಯ ಸಮಯದಲ್ಲಿ, ದರ್ಶನ್ ಪರ ವಕೀಲರು, ತನಿಖೆಗೆ ಸಂಬಂಧಿಸಿದಂತೆ ಅವರ ನಿವಾಸದ ಮೇಲೆ ದಾಳಿ ನಡೆಸಿದಾಗ ವಶಪಡಿಸಿಕೊಂಡ 75 ಲಕ್ಷ ರೂ. ನಗದನ್ನು ಬಿಡುಗಡೆ ಮಾಡುವಂತೆಯೂ ಕೋರಿದರು.

ಈ ವಿಷಯವನ್ನು ನಿರ್ಧರಿಸುವ ಮೊದಲು ಆದಾಯ ತೆರಿಗೆ ಇಲಾಖೆಯ ಪ್ರತಿಕ್ರಿಯೆಯನ್ನು ಕೇಳುವುದಾಗಿ ನ್ಯಾಯಾಲಯ ಹೇಳಿದೆ ಮತ್ತು ಮುಂದಿನ ವಿಚಾರಣೆಯನ್ನು ಮೇ 20ಕ್ಕೆ ನಿಗದಿಪಡಿಸಿದೆ.

ತನಿಖೆಯ ಸಮಯದಲ್ಲಿ ವಶಪಡಿಸಿಕೊಂಡ ಮೊಬೈಲ್ ಫೋನ್‌ಗಳನ್ನು ಹಿಂತಿರುಗಿಸುವಂತೆ ಕೋರಿ ಪ್ರತಿವಾದಿಯು ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಿದ್ದಾರೆ.

ಆರೋಪಿಗಳು ಜಾಮೀನು ಪಡೆದರೂ ಪ್ರತಿ ತಿಂಗಳು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂಬ ಷರತ್ತು ಹಿನ್ನೆಲೆಯಲ್ಲಿ ಎಲ್ಲರೂ ಕೋರ್ಟ್​ಗೆ ಹಾಜರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET paper leak: ಯುವಕರ ಭವಿಷ್ಯದ ಜೊತೆ ಆಟ, ತಕ್ಷಣ ಧರ್ಮೇಂದ್ರ ಪ್ರಧಾನ್ ವಜಾಗೊಳಿಸಿ: ರಾಹುಲ್ ಗಾಂಧಿ ಆಗ್ರಹ

ನಟ Jayam Ravi ವಿಚ್ಛೇದನ: ನಿರಾಕರಿಸಿದ್ದು ಯಾರು?, ಮದುವೆಯಾಗಿದ್ದು ಯಾರು? ಎಂಬುದನ್ನು ಸಾಬೀತು ಪಡಿಸುತ್ತೇನೆ: ಆರ್ತಿ ತಾಯಿ ಸುಜಾತ

IPL 2026: 2 ಓವರ್ ನಲ್ಲಿ ಪಂದ್ಯ ಕಳೆದುಕೊಂಡ GT, KKRಗೆ 29 ರನ್ ಗಳ ಭರ್ಜರಿ ಜಯ

IPL 2026: ಗಾಯದ ನಡುವೆಯೂ ಭರ್ಜರಿ ಬ್ಯಾಟಿಂಗ್, Sai Sudharsan ದಾಖಲೆ

'ಪ್ಲೀಸ್ ನಾಳೆ ಒಂದಿನ ಗೆಲ್ರಪ್ಪಾ': ಎದುರಾಳಿ RCB ಬೆನ್ನು ಬಿದ್ದ CSK ಫ್ಯಾನ್ಸ್! ಬೆಂಗಳೂರು ಗೆಲುವು ಚೆನ್ನೈಗೇಕೆ ಮುಖ್ಯ?

SCROLL FOR NEXT