ಡಿ.ಕೆ. ಶಿವಕುಮಾರ್  
ರಾಜ್ಯ

ಕೆರೆಗಳಿಗೆ ಕಲುಷಿತ ನೀರು ಸೇರದಂತೆ ಕ್ರಮ ವಹಿಸಿ: ಅಧಿಕಾರಿಗಳಿಗೆ DCM ಡಿ.ಕೆ ಶಿವಕುಮಾರ್ ಸೂಚನೆ

ಯಶವಂತಪುರ ವೃತ್ತದ ಬಳಿ ರಸ್ತೆಯ ಬದಿಯಲ್ಲಿ ಸುಮಾರು 10-15 ಲೋಡ್ ನಿರ್ಮಾಣ ತ್ಯಾಜ್ಯ ಸುರಿದಿರುವುದನ್ನು ಗಮನಿಸಲಾಗಿದೆ. ಆದ್ದರಿಂದ, ನಿರ್ಮಾಣ ತ್ಯಾಜ್ಯವನ್ನು ಸಾಗಿಸುವ ಎಲ್ಲಾ ಟ್ರಕ್‌ಗಳು ಮತ್ತು ವಾಹನಗಳಿಗೆ ಜಿಪಿಎಸ್ ಅಳವಡಿಸಬೇಕು.

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯುವುದನ್ನು ತಡೆಯಲು ಮತ್ತು ಎಲ್ಲಾ ಕೆರೆಗಳನ್ನು ಸಂಸ್ಕರಿಸಿದ ನೀರಿನಿಂದ ತುಂಬಿಸಲು ಕ್ರಮ ಕೈಗೊಳ್ಳುವಂತೆ ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೋಮವಾರ ಸೂಚನೆ ನೀಡಿದ್ದಾರೆ.

ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕೆರೆಗಳ ಸಂರಕ್ಷಣೆ, ಕಸ ವಿಲೇವಾರಿ ಮತ್ತು ಇತರ ವಿಷಯಗಳ ಕುರಿತು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡ ಶಿವಕುಮಾರ್ ಅವರು, "ಸಂಸ್ಕರಿತ ನೀರಿನಿಂದ ಕೆರೆಗಳನ್ನು ತುಂಬಿಸುವ ಜವಾಬ್ದಾರಿಯನ್ನು ಬಿಡಬ್ಲ್ಯೂಎಸ್ಎಸ್ಬಿಗೆ ವಹಿಸಲು ನಿರ್ಧರಿಸಲಾಗಿದೆ" ಎಂದು ಹೇಳಿದರು.

ಬೆಂಗಳೂರು ನಗರ ಜಿಲ್ಲೆಯಲ್ಲಿ ಉಂಟಾಗಬಹುದಾದ ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಹರಿಸಲು ತಕ್ಷಣ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚನೆ ನೀಡಿದರು.

ಇದೇ ವೇಳೆ ಕಟ್ಟಡ ನಿರ್ಮಾಣಗಳ ತ್ಯಾಜ್ಯವನ್ನು ಸಾಗಿಸುವ ಟ್ರಕ್‌ಗಳಿಗೆ ಜಿಪಿಎಸ್ ಅಳವಡಿಸುವಂತೆ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯಶವಂತಪುರ ವೃತ್ತದ ಬಳಿ ರಸ್ತೆಯ ಬದಿಯಲ್ಲಿ ಸುಮಾರು 10-15 ಲೋಡ್ ನಿರ್ಮಾಣ ತ್ಯಾಜ್ಯವನ್ನು ಸುರಿಯಲಾಗಿರುವುದನ್ನು ನಾನು ಮತ್ತು ಪಾಲಿಕೆ ಆಯುಕ್ತರು ನೋಡಿದ್ದೇವೆ. ಆದ್ದರಿಂದ, ನಿರ್ಮಾಣ ತ್ಯಾಜ್ಯವನ್ನು ಸಾಗಿಸುವ ಎಲ್ಲಾ ಟ್ರಕ್‌ಗಳು ಮತ್ತು ವಾಹನಗಳಿಗೆ ಜಿಪಿಎಸ್ ಅಳವಡಿಸಬೇಕು. ಈ ಟ್ರಕ್‌ಗಳು ಕಸವನ್ನು ಎಲ್ಲಿ ಸಂಗ್ರಹಿಸುತ್ತವೆ ಮತ್ತು ಎಲ್ಲಿ ವಿಲೇವಾರಿ ಮಾಡುತ್ತವೆ ಎಂಬುದನ್ನು ಬಿಬಿಎಂಪಿ ಮತ್ತು ಪೊಲೀಸ್ ಅಧಿಕಾರಿಗಳು ಮೇಲ್ವಿಚಾರಣೆ ಮಾಡಬೇಕೆಂದು ನಿರ್ದೇಶನ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT