ಎಟಿಎಂ ದರೋಡೆ PTI
ರಾಜ್ಯ

ಕಲಬುರಗಿ: SBI ATM ದರೋಡೆ; 18 ಲಕ್ಷ ರೂ ದೋಚಿ ಪರಾರಿ!

ಬುಧವಾರ ಬೆಳಗಿನ ಜಾವ ಗ್ಯಾಸ್ ಕಟ್ಟರ್ ಬಳಸಿ ಭದ್ರತೆ ಇಲ್ಲದ SBI ATM ಅನ್ನು ಮುರಿದ ಖದೀಮರು 18 ಲಕ್ಷ ರೂಪಾಯಿ ನಗದು ದೋಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲಬುರಗಿ: ಬುಧವಾರ ಬೆಳಗಿನ ಜಾವ ಗ್ಯಾಸ್ ಕಟ್ಟರ್ ಬಳಸಿ ಭದ್ರತೆ ಇಲ್ಲದ SBI ATM ಅನ್ನು ಮುರಿದ ಖದೀಮರು 18 ಲಕ್ಷ ರೂಪಾಯಿ ನಗದು ದೋಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಮನಗರ ಬಳಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಎಟಿಎಂ ಕಿಯೋಸ್ಕ್‌ಗೆ ಪ್ರವೇಶಿಸಿದ ನಂತರ, ದುಷ್ಕರ್ಮಿಗಳು ತಮ್ಮ ಗುರುತು ಸಿಗದಂತೆ ಸಿಸಿಟಿವಿ ಕ್ಯಾಮೆರಾಗಳ ಮೇಲೆ ಕಪ್ಪು ಬಣ್ಣ ಎರಚಿದ್ದಾರೆ. ನಂತರ ಅವರು ಎರಡು ಎಟಿಎಂಗಳಲ್ಲಿ ಒಂದನ್ನು ಗ್ಯಾಸ್ ಕಟ್ಟರ್ ಬಳಸಿ ಮುರಿದು ಹಣದೊಂದಿಗೆ ಪರಾರಿಯಾಗಿದ್ದಾರೆ.

ಇನ್ನೊಂದು ಯಂತ್ರದಲ್ಲಿ ಯಾವುದೇ ಹಣವಿಲ್ಲದ ಕಾರಣ ಅದನ್ನು ಹಾಗೆಯೇ ಬಿಟ್ಟಿದ್ದಾರೆ. ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ, ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ಎಟಿಎಂಗೆ ಹಣ ತುಂಬಿಸಲಾಗಿದೆ ಎಂದು ಹೇಳಿದರು.

ದರೋಡೆ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದು ಎಟಿಎಂನ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಘಟನೆ ನಡೆದ ಸಮಯದಲ್ಲಿ ಎಟಿಎಂ ಕಿಯೋಸ್ಕ್‌ನಲ್ಲಿ ಯಾವುದೇ ಭದ್ರತಾ ಸಿಬ್ಬಂದಿ ಇರಲಿಲ್ಲ ಎಂದು ಅವರು ಹೇಳಿದರು. ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT