ಬಿಎಂಟಿಸಿ ಬಸ್ ಗಳು BMTC
ರಾಜ್ಯ

ಪ್ರಯಾಣಿಕರ ದಟ್ಟಣೆ ಹೆಚ್ಚಿಸಿದ 'ಶಕ್ತಿ ಯೋಜನೆ': ಹಳೆಯ ವಾಹನಗಳ ಮೇಲೆ ಹೆಚ್ಚಿದ ಹೊರೆ; 4,000 ಹೊಸ ಬಸ್ ಖರೀದಿಗೆ ಸರ್ಕಾರ ಮುಂದು!

ಯೋಜನೆಯಿಂದಾಗಿ ಪ್ರತಿದಿನ 25 ಲಕ್ಷ ಹೆಚ್ಚುವರಿ ಪ್ರಯಾಣಿಕರು ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಸಾರಿಗೆ ಇಲಾಖೆ ಇರುವ ವ್ಯವಸ್ಥೆಯಲ್ಲೇ ಪರಿಸ್ಥಿತಿ ನಿಭಾಯಿಸುತ್ತಿದೆ.

ಬೆಂಗಳೂರು: ಉಚಿತ ಬಸ್​​​ ಒದಗಿಸುವ ಶಕ್ತಿ ಯೋಜನೆ ಆರಂಭದ ಬಳಿಕ ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಬಹುತೇಕ ಎಲ್ಲಾ ಸಾರಿಗೆ ಬಸ್ ಗಳು ಜನದಟ್ಟಣೆಯೊಂದಿಗೆ ಓಡಾಡುತ್ತಿವೆ. ಇದರಿಂದ ಹಳೆಯ ಬಸ್ ಗಳ ಮೇಲೆ ಹೊರೆ ಹೆಚ್ಚಾಗಿದೆ.

ಯೋಜನೆಯಿಂದಾಗಿ ಪ್ರತಿದಿನ 25 ಲಕ್ಷ ಹೆಚ್ಚುವರಿ ಪ್ರಯಾಣಿಕರು ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ವಾರ್ಷಿಕವಾಗಿ 900 ಕೋಟಿಗೂ ಹೆಚ್ಚುವರಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ. ಸಾರಿಗೆ ಇಲಾಖೆ ಇರುವ ವ್ಯವಸ್ಥೆಯಲ್ಲೇ ಪರಿಸ್ಥಿತಿ ನಿಭಾಯಿಸುತ್ತಿದೆ.

ಪ್ರಸ್ತುತ 26,000 ಬಸ್ ಗಳಲು ಓಡಾಡುತ್ತಿವೆ. ಪ್ರತಿವರ್ಷ ಶೇ.10ರಷ್ಟು ಬಸ್ ಗಳನ್ನು ಬದಲಾಯಿಸಬೇಕು. ಇದಲ್ಲದೆ, ಹಿಂದಿನ ಬಿಜೆಪಿ ಸರ್ಕಾರದ ಮೂರು ವರ್ಷ ಮತ್ತು ಹತ್ತು ತಿಂಗಳ ಅವಧಿಯಲ್ಲಿ, ಯಾವುದೇ ಹೊಸ ಬಸ್‌ಗಳನ್ನು ಖರೀದಿಸಿಲ್ಲ. ಇದರ ಪರಿಣಾಮ ಬಸ್ ಸಂಖ್ಯೆ ಇದೀಗ 21,000ಕ್ಕೆ ಇಳಿದಿದೆ. ಬಸ್ ಸಮಸ್ಯೆ ನಿವಾರಣೆಗೆ ಬಾಡಿಗೆ ಬಸ್ ನೆರವು ಪಡೆಯಲು ಚಿಂತನೆ ನಡೆಸಿದ್ದು, ಇದಕ್ಕೆ ರಾಮಲಿಂಗಾ ರೆಡ್ಡಿಯವರು ನಿರಾಕರಿಸಿದ್ದಾರೆಂದು ತಿಳಿದುಬಂದಿದೆ.

ಬಾಡಿಗೆ ಬದಲು ಹೊಸ ಬಸ್ ಗಳ ಖರೀದಿಸುವಂತೆ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆಂದು ವರದಿಗಳು ತಿಳಿಸಿವೆ. ಬಜೆಟ್ ನಲ್ಲಿ ಈ ಕುರಿತು ಪ್ರಸ್ತಾಪಿಸಲಾಗಿದ್ದು, 4,000 ಹೊಸ ಬಸ್ ಖರೀದಿ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಪ್ರಸ್ತುತ ಕಾಂಗ್ರೆಸ್ ನಾಯಕರು ಅಹಮದಾಬಾದ್ ನಲ್ಲಿ ನಡೆಯುತ್ತಿರುವ ಎಐಸಿಸಿ ಸಭೆಯಲ್ಲಿ ಬ್ಯುಸಿಯಾಗಿದ್ದು, ಸಭೆ ಬಳಿಕ ಹಿಂತಿರುಗಿದ ನಂತರ ಶುಕ್ರವಾರ ನಡೆಯುವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾಕ ತೆಗೆದುಕೊಳ್ಳಲಿದ್ದಾರೆಂದು ತಿಳಿದುಬಂದಿದೆ.

4,000 ಬಸ್‌ಗಳ ಖರೀದಿಸಲು ನಿರ್ಧರಿಸಲಾಗಿದ್ದು, ಪ್ರತಿ ಬಸ್‌ಗೆ 50 ಲಕ್ಷ ರೂ.ಗಳಂತೆ 2,000 ಕೋಟಿ ರೂ. ವೆಚ್ಚವಾಗುತ್ತದೆ. ರಾಜ್ಯಾದ್ಯಂತ, ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಪರಿಸ್ಥಿತಿ ಕಠಿಣವಾಗಿದ್ದು, ಅಲ್ಲಿ ಬಸ್ ಗಳನ್ನು ನಿಯೋಜಿಸುವ ಅಗತ್ಯವಿದೆ. ಬೆಳಗಾವಿ ಮತ್ತು ಕಲ್ಯಾಣ ಕರ್ನಾಟಕದಂತಹ ಪ್ರದೇಶಗಳಲ್ಲಿ ಪರಿಸ್ಥಿತಿ ಕಠಿಣವಾಗಿದೆ. ಖಾಸಗಿ ಬಸ್ ಗಳು ಕೂಡ ಅಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಹೀಗಾಗಿ ಈ ಪ್ರದೇಶಗಳಿಗೆ ಆದ್ಯತೆ ಮೇರೆಗೆ ಬಸ್ ಗಳನ್ನು ನಿಯೋಜನೆಗೊಳಿಸಲಾಗುತ್ತದೆ ಮೂಲಗಳು ಮಾಹಿತಿ ನೀಡಿವೆ.

4,000 ಹೊಸ ಬಸ್ ಗಳಲ್ಲಿ ಬೆಳಗಾವಿಗೆ 700, ಕಲ್ಯಾಣ ಕರ್ನಾಟಕಕ್ಕೆ 700 ಮತ್ತು ದಕ್ಷಿಣ ಜಿಲ್ಲೆಗಳಿಗೆ 600 ನಿಯೋಜನೆಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT