ಟೊಮೆಟೊ (ಸಾಂದರ್ಭಿಕ ಚಿತ್ರ) 
ರಾಜ್ಯ

ಟೊಮೆಟೊ ದರ ದಿಢೀರ್‌ ಕುಸಿತ: ಕೆಜಿಗೆ 30 ರೂ ಇದ್ದ ಬೆಲೆ 2 ರೂಪಾಯಿಗೆ ಇಳಿಕೆ; ರೈತರು ಕಂಗಾಲು

ಕೆಜಿಗೆ 30 ರೂ.ಗೆ ಮಾರಾಟವಾಗುತ್ತಿದ್ದ ಟೊಮೆಟೊ ಈಗ ಎಪಿಎಂಸಿ ಮಾರುಕಟ್ಟೆಯಲ್ಲಿ ಕೆಜಿಗೆ 2 ರೂ.ಗೆ ಮಾರಾಟವಾಗುತ್ತಿದೆ.

ಗದಗ: ಟೊಮ್ಯಾಟೊ ಬೆಲೆ ದಿಢೀರ್ ಕುಸಿತ ಕಂಡಿದ್ದು, ಈ ಬೆಳವಣಿಗೆ ಗದಗ ಜಿಲ್ಲೆಯ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಕೆಜಿಗೆ 30 ರೂ.ಗೆ ಮಾರಾಟವಾಗುತ್ತಿದ್ದ ಟೊಮೆಟೊ ಈಗ ಎಪಿಎಂಸಿ ಮಾರುಕಟ್ಟೆಯಲ್ಲಿ ಕೆಜಿಗೆ 2 ರೂ.ಗೆ ಮಾರಾಟವಾಗುತ್ತಿದೆ.

ಪೂರ್ವ ಮುಂಗಾರು ಮಳೆಯ ಪರಿಣಾಮ ಕಳೆದ ವಾರದಿಂದ ಬೆಲೆಗಳು ಕುಸಿಯಲು ಪ್ರಾರಂಭಿಸಿದೆ. ಈ ಬಾರಿ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಹೆಚ್ಚು ರೈತರು ಟೊಮೆಟೊ ಬೆಳೆದಿದ್ದಾರೆ. ಜತೆಗೆ, ಬಿಸಿಲ ವಾತಾವರಣದಿಂದಾಗಿ ಕಾಯಿಗಳು ಬೇಗ ಹಣ್ಣಾಗುತ್ತವೆ. ಅಲ್ಲದೆ, ಹೊರರಾಜ್ಯಗಳಲ್ಲೂ ಟೊಮೆಟೊ ಹೆಚ್ಚಾಗಿ ಬೆಳೆದಿರುವುದರಿಂದ ಕರ್ನಾಟಕದಿಂದ ಬೇರೆ ರಾಜ್ಯಗಳಿಗೆ ಹಣ್ಣು ರವಾನೆಯಾಗುತ್ತಿಲ್ಲ. ಹೀಗಾಗಿ, ಮಾರುಕಟ್ಟೆಗೆ ಹಣ್ಣು ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿದ್ದು, ಬೇಡಿಕೆಯಿಲ್ಲದೆ ಬೆಲೆಗಳು ಕುಸಿದಿವೆ ಎಂದು ತಿಳಿದುಬಂದಿದೆ.

ಬೆಲೆ ಕುಸಿತ ಹಿನ್ನೆಲೆಯಲ್ಲಿ ಗದಗದ ಹಲವಾರು ರೈತರು ಎಪಿಎಂಸಿ ಅಂಗಡಿ ಮಾಲೀಕರ ವಿರುದ್ಧ ಪ್ರತಿಭಟನೆ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳು ಟೊಮೆಟೊಗೆ ಬೆಂಬಲ ಬೆಲೆ ಘೋಷಿಸಬೇಕೆಂದು ಒತ್ತಾಯಿಸಿದ್ದಾರೆ.

ಈ ನಡುವೆ ಹಳ್ಳಿಗಳಲ್ಲಿ ಸ್ಥಳೀಯ ಅಂಗಡಿಗಳಲ್ಲಿ ಟೊಮೆಟೋ ಬಲೆ ಕೆಜಿಗೆ ಇನ್ನೂ 20 ರೂ.ಗಳ ಆಸುಪಾಸಿನಲ್ಲಿ ಇರುವುದರಿಂದ ಕೆಲ ರೈತರು ತಮ್ಮ ಬೆಳೆಗಳನ್ನು ತೆಗೆದುಕೊಂಡು ಹೋಗಿ, ಸ್ವತಃ ಮಾರಾಟ ಮಾಡಲು ನಿರ್ಧರಿಸಿದ್ದಾರೆ.

ಸಗಟು ವ್ಯಾಪಾರಿಗಳು ಟೊಮೆಟೊದ ಗುಣಮಟ್ಟ ಮತ್ತು ಗಾತ್ರಕ್ಕೆ ಅನುಗುಣವಾಗಿ ಬೆಲೆಯನ್ನು ನಿರ್ಧರಿಸುತ್ತಿದ್ದಾರೆ. ನಮ್ಮ ಬೆಳೆಗಳನ್ನೇ ಚಿಲ್ಲರೆ ವ್ಯಾಪಾರಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಹೀಗಾಗಿ ಬೆಲೆ ಕುಸಿತವು ನಮ್ಮ ಮೇಲಷ್ಟೇ ಪರಿಣಾಮ ಬೀರಿದೆ. ಎಪಿಎಂಸಿ ಅಧಿಕಾರಿಗಳು ಈ ವಿಷಯದ ಬಗ್ಗೆ ಮೌನ ತಾಳಿರುವುದರಿಂದ ಪ್ರತಿಭಟನೆ ನಡೆಸಲಾಗಿದೆ ಎಂದು ರೈತರು ಹೇಳಿದ್ದಾರೆ.

ಗದಗದ ರೈತ ಪ್ರಕಾಶ್ ಬೀರನೂರ್ ಎಂಬವವರು ಮಾತನಾಡಿ, ನಾವು 300 ಟ್ರೇ ಟೊಮೆಟೊ ತಂದಿದ್ದೇವೆ ಆದರೆ ಕೇವಲ 1,500 ರೂ. ಮಾತ್ರ ಸಿಕ್ಕಿದೆ. ಅಂದರೆ ಪ್ರತಿ ಟ್ರೇಗೆ 50 ರೂ. ಸಿಕ್ಕಿದಯಷ್ಟೇ. ಪ್ರತಿ ಟ್ರೇನಲ್ಲಿ 25 ಕೆಜಿ ಟೊಮೆಟೊ ಇದೆ, ಅಂದರೆ ನಮಗೆ ಕೆಜಿಗೆ ಕೇವಲ 2 ರೂ. ಮಾತ್ರ ಸಿಕ್ಕಿದೆ. ಅಕಾಲಿಕ ಮಳೆ ಮತ್ತು ಟೊಮೆಟೊ ಅತಿಯಾದ ಸಂಗ್ರಹ ಇದಕ್ಕೆ ಮುಖ್ಯ ಕಾರಣ ಎಂಬುದು ನಮಗೆ ತಿಳಿದಿದೆ. ಆದರೆ, ಅಧಿಕಾರಿಗಳು ಕನಿಷ್ಠ ಬೆಂಬಲ ಬೆಲೆಯನ್ನಾದರೂ ಘೋಷಿಸಬಹುದಿತ್ತು. ನಮ್ಮಿಂದ ರೂ,2ಗೆ ಟೊಮೆಟೋ ಖರೀದಿರಿ ಮಾರುಕಟ್ಟೆಗಳಲ್ಲಿ ಕೆಜಿಗೆ 10 ರಿಂದ 20 ರೂ. ವಿಧಿಸುತ್ತಿದ್ದಾರೆ. ಸಸಿ ನೆಟ್ಟ, ಗೊಬ್ಬರ ಸಿಂಪಡಿಸಿದ, ದಿನಗೂಲಿ ಕಾರ್ಮಿಕರಿಗೆ 300 ರೂ. ನೀಡಿದ ಮತ್ತು ವರ್ಗಾವಣೆ ಶುಲ್ಕ ಪಾವತಿಸಿದ ರೈತರು ತೀರಾ ಕಡಿಮೆ ಬೆಲೆಯನ್ನು ಪಡೆಯುತ್ತಿದ್ದಾರೆ, ಆದರೆ, ಮಾರಾಟಗಾರರು ಐದು ಪಟ್ಟು ಹೆಚ್ಚು ಪಡೆಯುತ್ತಿದ್ದಾರೆ. ಇದು ರೈತರಿಗಾಗುತ್ತಿರುವ ಅನ್ಯಾಯವಾಗಿದೆ ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

4 ಲಕ್ಷ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಅನುಮತಿ ನೀಡಿದವರಿಂದ ಪಾಠದ ಅಗತ್ಯವಿಲ್ಲ: ವಿಶ್ವಸಂಸ್ಥೆಯಲ್ಲಿ ಪಾಕ್‌ ವಿರುದ್ಧ ಗುಡುಗಿದ ಭಾರತ

ನನ್ನ ಸೂಚನೆ ಪರಿಣಾಮಕಾರಿಯಾಗಿತ್ತು, ಹೀಗಾಗಿ ಯುದ್ಧ ನಿಲ್ಲಿಸಿದರು: ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಟ್ರಂಪ್ ಪುನರುಚ್ಛಾರ

ಪರಿಶಿಷ್ಟ ಜಾತಿಯವರು ಬೌದ್ಧ ಧರ್ಮಕ್ಕೆ ಮತಾಂತರ ಆದ್ರು 'SC ಜಾತಿ ಪ್ರಮಾಣಪತ್ರ': ರಾಜ್ಯ ಸರ್ಕಾರದ ಆದೇಶ!

Uttar Pradesh: ರಾತ್ರಿ ಹೊತ್ತಲ್ಲಿ 'ಹಾವಾಗಿ' ಕಚ್ಚಲು ಓಡಾಡಿಸುವ ಪತ್ನಿ: ಅಧಿಕಾರಿಗಳ ದುಂಬಾಲು ಬಿದ್ದ ಪತಿ!

CJI ಮೇಲೆ 'ಶೂ' ಎಸೆತ: ಯಾವುದೇ ಪಶ್ಚಾತ್ತಾಪವಿಲ್ಲ, ನಾನು ಮಾಡಿದ್ದು ಸರಿಯಿದೆ ಎಂದ ವಕೀಲ ರಾಕೇಶ್ ಕಿಶೋರ್

SCROLL FOR NEXT