ಸಂಗ್ರಹ ಚಿತ್ರ 
ರಾಜ್ಯ

ಪ್ರಿಯಕರನೊಂದಿಗೆ ಪತ್ನಿ ವಿವಾಹ: ಇನ್‌ಸ್ಟಾಗ್ರಾಮ್‌ ವಿಡಿಯೋ ನೋಡಿ ಪತಿ ಶಾಕ್; ದೂರು ದಾಖಲು

ಪತ್ನಿ 50 ಲಕ್ಷ ರೂ. ಮೌಲ್ಯದ ಆಸ್ತಿ ದಾಖಲೆಗಳು ಸೇರಿದಂತೆ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾಳೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು: ಇನ್ಸ್ಟಾಗ್ರಾಮ್​ನಲ್ಲಿ ಪರಿಚಯವಾದ ವ್ಯಕ್ತಿಗಾಗಿ ಗಂಡ, ಮಕ್ಕಳನ್ನೇ ಬಿಟ್ಟು ಓಡಿ ಹೋದ ಮಹಿಳೆಯೊಬ್ಬಳು ಆತನನ್ನು ವಿವಾಹವಾಗಿದ್ದು, ಪ್ರಿಯಕರ ಜೊತೆ ಮದುವೆಯಾದ ಫೋಟೋ ಹಾಗೂ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ ನಲ್ಲಿ ಹಂಚಿಕೊಂಡಿದ್ದಾಳೆ. ಈ ವಿಡಿಯೋವನ್ನು ನೋಡಿದ ಪತಿ ಆಘಾತಗೊಂಡಿದ್ದು, ಪೊಲೀಸರಿಗೆ ದೂರು ನೀಡಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.

ಈ ಸಂಬಂಧ ನೆಲಮಂಗಲ ಪಟ್ಟಣ ಪೊಲೀಸರಿಗೆ ರಮೇಶ್ ಎಂಬುವವರು ದೂರು ನೀಡಿದ್ದಾರೆ. 12 ವರ್ಷಗಳ ಹಿಂದೆ ನೇತ್ರಾವತಿಯನ್ನು ವಿವಾಹವಾಗಿದ್ದು, ನಮಗೆ 11 ವರ್ಷಗ ಗಂಡು ಮಗುವಿದೆ. ಇನ್‌ಸ್ಟಾಗ್ರಾಮ್'ನಲ್ಲಿ ಪರಿಚಯವಾದ ವ್ಯಕ್ತಿಯೊಂದಿಗೆ ಪತ್ನಿ ವಿವಾಹವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿದ ಬಳಿಕವೇ 2ನೇ ವಿವಾಹದ ವಿಚಾರ ತಿಳಿದುಬಂದಿದೆ ಎಂದು ಹೇಳಿದ್ದಾರೆ.

ಪತ್ನಿ 50 ಲಕ್ಷ ರೂ. ಮೌಲ್ಯದ ಆಸ್ತಿ ದಾಖಲೆಗಳು ಸೇರಿದಂತೆ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾಳೆ ಎಂದು ಆರೋಪಿಸಿದ್ದಾರೆ.

ದಂಪತಿಗಳ ನಡುವೆ ವೈವಾಹಿಕ ಕಲಹಗಳಿದ್ದು, ಈ ಹಿಂದೆ ಕೂಡ ರಮೇಶ್ ಪತ್ನಿಯ ವಿರುದ್ಧ ದೂರು ನೀಡಿದ್ದರು. ಒಂದು ವರ್ಷದ ಹಿಂದೆ ಮನೆ ಬಿಟ್ಟು ಹೋಗಿದ್ದ ನೇತ್ರಾವತಿ ಯಾರೊಂದಿಗೂ ಸಂಪರ್ಕದಲ್ಲಿರಲಿಲ್ಲ. ಪೋಷಕರ ಮನೆಗೆ ಹೋಗಿರಬೇಕೆಂದು ತಿಳಿದಿದ್ದೆ. ಅಲ್ಲೂ ಇಲ್ಲ ಎಂದು ತಿಳಿದ ಬಳಿಕ ನಾಪತ್ತೆ ದೂರು ದಾಖಲಿಸಿದ್ದೆ. ಇದೀಗ ಪತ್ನಿ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಸಂತೋಷ್ ಎಂಬ ವ್ಯಕ್ತಿಯೊಂದಿಗೆ ಓಡಿಹೋಗಿದ್ದಾಳೆ. ನಾನು ಚೆನ್ನಾಗಿಯೇ ನೋಡಿಕೊಂಡಿದ್ದರೂ ನನಗೆ ಮೋಸ ಮಾಡಿದ್ದಾಳೆ. ಮತ್ತೊಂದು ವಿವಾಹವಾಗಲು ಕೌಂಟುಬಿಕ ಹಿಂಸಾಚಾರ ದೂರು ದಾಖಲಿಸಿದ್ದಾಳೆ. ಮನೆಯಲ್ಲಿದ್ದ ಎಲ್ಲಾ ಬೆಲೆ ಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾಳೆಂದು ರಮೇಶ್ ಹೇಳಿದ್ದಾರೆ.

ಈ ಮಧ್ಯೆ ನೇತ್ರಾವತಿ ಮೊದಲ ಪತಿಯ ಬಳಿಕೆ ನಿರಾಕರಿಸಿದ್ದು, ಆತ ಕುಡಿತದ ಚಟಕ್ಕೆ ಬಿದ್ದಿದ್ದು, ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿರುವುದಾಗಿ ಹೇಳಿದ್ದಾಳೆ, ಅಲ್ಲದೆ, ತನ್ನ ಬಟ್ಟೆ ಹಾಗೂ ಇತರೆ ವಸ್ತುಗಳನ್ನು ಪಡೆಯಲು ಪೊಲೀಸರ ನೆರವು ಕೋರಿದ್ದಾಳೆ. ಈ ಸಂಬಂಧ ನೆಲಮಂಗಲ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT