ಸಂಗ್ರಹ ಚಿತ್ರ 
ರಾಜ್ಯ

ಪ್ರಿಯಕರನೊಂದಿಗೆ ಪತ್ನಿ ವಿವಾಹ: ಇನ್‌ಸ್ಟಾಗ್ರಾಮ್‌ ವಿಡಿಯೋ ನೋಡಿ ಪತಿ ಶಾಕ್; ದೂರು ದಾಖಲು

ಪತ್ನಿ 50 ಲಕ್ಷ ರೂ. ಮೌಲ್ಯದ ಆಸ್ತಿ ದಾಖಲೆಗಳು ಸೇರಿದಂತೆ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾಳೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು: ಇನ್ಸ್ಟಾಗ್ರಾಮ್​ನಲ್ಲಿ ಪರಿಚಯವಾದ ವ್ಯಕ್ತಿಗಾಗಿ ಗಂಡ, ಮಕ್ಕಳನ್ನೇ ಬಿಟ್ಟು ಓಡಿ ಹೋದ ಮಹಿಳೆಯೊಬ್ಬಳು ಆತನನ್ನು ವಿವಾಹವಾಗಿದ್ದು, ಪ್ರಿಯಕರ ಜೊತೆ ಮದುವೆಯಾದ ಫೋಟೋ ಹಾಗೂ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ ನಲ್ಲಿ ಹಂಚಿಕೊಂಡಿದ್ದಾಳೆ. ಈ ವಿಡಿಯೋವನ್ನು ನೋಡಿದ ಪತಿ ಆಘಾತಗೊಂಡಿದ್ದು, ಪೊಲೀಸರಿಗೆ ದೂರು ನೀಡಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.

ಈ ಸಂಬಂಧ ನೆಲಮಂಗಲ ಪಟ್ಟಣ ಪೊಲೀಸರಿಗೆ ರಮೇಶ್ ಎಂಬುವವರು ದೂರು ನೀಡಿದ್ದಾರೆ. 12 ವರ್ಷಗಳ ಹಿಂದೆ ನೇತ್ರಾವತಿಯನ್ನು ವಿವಾಹವಾಗಿದ್ದು, ನಮಗೆ 11 ವರ್ಷಗ ಗಂಡು ಮಗುವಿದೆ. ಇನ್‌ಸ್ಟಾಗ್ರಾಮ್'ನಲ್ಲಿ ಪರಿಚಯವಾದ ವ್ಯಕ್ತಿಯೊಂದಿಗೆ ಪತ್ನಿ ವಿವಾಹವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿದ ಬಳಿಕವೇ 2ನೇ ವಿವಾಹದ ವಿಚಾರ ತಿಳಿದುಬಂದಿದೆ ಎಂದು ಹೇಳಿದ್ದಾರೆ.

ಪತ್ನಿ 50 ಲಕ್ಷ ರೂ. ಮೌಲ್ಯದ ಆಸ್ತಿ ದಾಖಲೆಗಳು ಸೇರಿದಂತೆ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾಳೆ ಎಂದು ಆರೋಪಿಸಿದ್ದಾರೆ.

ದಂಪತಿಗಳ ನಡುವೆ ವೈವಾಹಿಕ ಕಲಹಗಳಿದ್ದು, ಈ ಹಿಂದೆ ಕೂಡ ರಮೇಶ್ ಪತ್ನಿಯ ವಿರುದ್ಧ ದೂರು ನೀಡಿದ್ದರು. ಒಂದು ವರ್ಷದ ಹಿಂದೆ ಮನೆ ಬಿಟ್ಟು ಹೋಗಿದ್ದ ನೇತ್ರಾವತಿ ಯಾರೊಂದಿಗೂ ಸಂಪರ್ಕದಲ್ಲಿರಲಿಲ್ಲ. ಪೋಷಕರ ಮನೆಗೆ ಹೋಗಿರಬೇಕೆಂದು ತಿಳಿದಿದ್ದೆ. ಅಲ್ಲೂ ಇಲ್ಲ ಎಂದು ತಿಳಿದ ಬಳಿಕ ನಾಪತ್ತೆ ದೂರು ದಾಖಲಿಸಿದ್ದೆ. ಇದೀಗ ಪತ್ನಿ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಸಂತೋಷ್ ಎಂಬ ವ್ಯಕ್ತಿಯೊಂದಿಗೆ ಓಡಿಹೋಗಿದ್ದಾಳೆ. ನಾನು ಚೆನ್ನಾಗಿಯೇ ನೋಡಿಕೊಂಡಿದ್ದರೂ ನನಗೆ ಮೋಸ ಮಾಡಿದ್ದಾಳೆ. ಮತ್ತೊಂದು ವಿವಾಹವಾಗಲು ಕೌಂಟುಬಿಕ ಹಿಂಸಾಚಾರ ದೂರು ದಾಖಲಿಸಿದ್ದಾಳೆ. ಮನೆಯಲ್ಲಿದ್ದ ಎಲ್ಲಾ ಬೆಲೆ ಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾಳೆಂದು ರಮೇಶ್ ಹೇಳಿದ್ದಾರೆ.

ಈ ಮಧ್ಯೆ ನೇತ್ರಾವತಿ ಮೊದಲ ಪತಿಯ ಬಳಿಕೆ ನಿರಾಕರಿಸಿದ್ದು, ಆತ ಕುಡಿತದ ಚಟಕ್ಕೆ ಬಿದ್ದಿದ್ದು, ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿರುವುದಾಗಿ ಹೇಳಿದ್ದಾಳೆ, ಅಲ್ಲದೆ, ತನ್ನ ಬಟ್ಟೆ ಹಾಗೂ ಇತರೆ ವಸ್ತುಗಳನ್ನು ಪಡೆಯಲು ಪೊಲೀಸರ ನೆರವು ಕೋರಿದ್ದಾಳೆ. ಈ ಸಂಬಂಧ ನೆಲಮಂಗಲ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT