ಅಪಘಾತ ನಂತರ ದೃಶ್ಯ 
ರಾಜ್ಯ

ಯಾದಗಿರಿಯಲ್ಲಿ ಬೊಲೆರೊ-ಸಾರಿಗೆ ಬಸ್ ನಡುವೆ ಡಿಕ್ಕಿ: ಸ್ಥಳದಲ್ಲೇ ನಾಲ್ವರು ಸಾವು

ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವಸ್ಥಾನಕ್ಕೆ ಜವಳ ಕಾರ್ಯಕ್ಕೆ ಕುಟುಂಬಸ್ಥರು ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.

ಯಾದಗಿರಿ: ಬುಲೆರೊ ಹಾಗೂ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಬಳಿಯ ರಾಷ್ಟ್ರೀಯ ಹೆದ್ದಾರಿ 150ಎಯಲ್ಲಿ ಕಳೆದ ರಾತ್ರಿ‌ ನಡೆದಿದೆ.

ಯಾದಗಿರಿ ತಾಲೂಕಿನ ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವರ್ಕನಹಳ್ಳಿ ಗ್ರಾಮದವರಾದ ಬುಲೆರೊ ಚಾಲಕ ಶರಣಪ್ಪ(30ವ), ಸುನೀತಾ(19ವ), ಸೋಮವ್ವ(50ವ) ಮತ್ತು ತಂಗಮ್ಮ(55ವ) ಮೃತಪಟ್ಟವರಾಗಿದ್ದಾರೆ. ಘಟನಾ ಸ್ಥಳಕ್ಕೆ ಎಸ್​​ಪಿ ಪೃಥ್ವಿಕ್ ಶಂಕರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವಸ್ಥಾನಕ್ಕೆ ಜವಳ ಕಾರ್ಯಕ್ಕೆ ಕುಟುಂಬಸ್ಥರು ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಬುಲೆರೋ ವಾಹನದಲ್ಲಿದ್ದ ಇನ್ನೂ ಹಲವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT