ಮೆಟ್ರೋ ರೈಲು (ಸಾಂದರ್ಭಿಕ ಚಿತ್ರ) 
ರಾಜ್ಯ

ಮಂಗಳೂರು–ಉಡುಪಿ ನಡುವೆ ಮೆಟ್ರೊ ರೈಲು: ವರದಿಗೆ ಸೂಚನೆ

ಮಂಗಳೂರು– ಉಡುಪಿ ನಡುವೆ ಮೆಟ್ರೊ ರೈಲು ಯೋಜನೆಯು ಕರಾವಳಿಯ ಆರ್ಥಿಕತೆ ಬೆಳವಣಿಗೆ, ಜನರ ಜೀವನ ಮಟ್ಟದ ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ.

ಮಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಮಂಗಳೂರು–ಉಡುಪಿ ನಡುವೆ ಮೆಟ್ರೊ ರೈಲು ಯೋಜನೆ ಆರಂಭಿಸುವ ಕುರಿತು ಕಾರ್ಯಸಾಧ್ಯತೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.

ಹೌದು.. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸೂಚನೆಯಂತೆ ಮಂಗಳೂರು– ಉಡುಪಿ ನಡುವೆ ಮೆಟ್ರೊ ರೈಲು ಯೋಜನೆ ಅನುಷ್ಠಾನ ಸಂಬಂಧ ಕಾರ್ಯಸಾಧ್ಯತೆ ವರದಿ ನೀಡುವಂತೆ ಜಿಲ್ಲಾ ನಗರಾಭಿವೃದ್ಧಿ ಕೋಶವು ವಿವಿಧ ಇಲಾಖೆಗಳು, ಸಂಘ–ಸಂಸ್ಥೆಗಳಿಗೆ ಪತ್ರ ಬರೆದಿದೆ.

ಮಂಗಳೂರು– ಉಡುಪಿ ನಡುವೆ ಮೆಟ್ರೊ ರೈಲು ಯೋಜನೆಯು ಕರಾವಳಿಯ ಆರ್ಥಿಕತೆ ಬೆಳವಣಿಗೆ, ಜನರ ಜೀವನ ಮಟ್ಟದ ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ.

ಮಂಗಳೂರು ಮತ್ತು ಉಡುಪಿ ನಗರಗಳ ನಡುವೆ ಮೆಟ್ರೊ ರೈಲು ಯೋಜನೆ ಬಗ್ಗೆ ಕಾರ್ಯಸಾಧ್ಯತಾ ವರದಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸೂಚಿಸಿದ್ದಾರೆ.

ಅಲ್ಲದೆ ವಾಣಿಜ್ಯ ನಗರವಾಗಿರುವ ಮಂಗಳೂರಿನಲ್ಲಿ ಇರುವ ಸೌಲಭ್ಯ, ವೈದ್ಯಕೀಯ ಸೌಲಭ್ಯ, ಶಿಕ್ಷಣ ಸಂಸ್ಥೆಗಳು, ಕಡಲ ಕಿನಾರೆ ಈ ಎಲ್ಲ ಅಂಶಗಳನ್ನು ಪರಿಗಣಿಸಿ, ಮೆಟ್ರೊ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಸಚಿವರು ತಿಳಿಸಿದ್ದಾರೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.

ಈ ಪತ್ರವನ್ನು ಜಿಲ್ಲಾಧಿಕಾರಿ ಪರವಾಗಿ ನಗರಾಭಿವೃದ್ಧಿ ಕೋಶವು, ಎನ್‌ಎಂಪಿಎ, ಎಂಆರ್‌ಪಿಎಲ್, ನಗರ ಪೊಲೀಸ್ ಕಮಿಷನರ್, ಎನ್‌ಐಟಿಕೆ, ಡಿಎಫ್‌ಒ, ಸಾರಿಗೆ ಇಲಾಖೆ, ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಕೈಗಾರಿಕಾ ಕೇಂದ್ರ, ಪ್ರವಾಸೋದ್ಯಮ ಇಲಾಖೆ, ಆರೋಗ್ಯ ಇಲಾಖೆ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯನಿರ್ವಹಣಾಧಿಕಾರಿ, ಕೆನರಾ ವಾಣಿಜ್ಯೋದ್ಯಮ ಕೈಗಾರಿಕಾ ಸಂಘಕ್ಕೆ ಕಳುಹಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT