ಪಿಸಿ ಮೋಹನ್ 
ರಾಜ್ಯ

'ಮುಸ್ಲಿಂ ತುಷ್ಟೀಕರಣ' ನೀತಿ ರಾಜ್ಯದಲ್ಲಿ ಪಶ್ಚಿಮ ಬಂಗಾಳದಂತಹ ಪರಿಸ್ಥಿತಿಗೆ ಕಾರಣವಾಗಬಹುದು: ಪಿಸಿ ಮೋಹನ್

ಸರ್ಕಾರದ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿ ನೀಡುವ ರಾಜ್ಯ ಸರ್ಕಾರದ ಕ್ರಮವನ್ನು 'ತುಷ್ಟೀಕರಣ ತಂತ್ರ' ಎಂದು ಕರೆದ ಬೆಂಗಳೂರು ಕೇಂದ್ರ ಸಂಸದರು, ಹಿಂದೂಗಳು 'ಎಚ್ಚರಗೊಳ್ಳುವಂತೆ' ಕರೆ ನೀಡಿದ್ದಾರೆ.

ಬೆಂಗಳೂರು: ಸರ್ಕಾರದ ಓಲೈಕೆ ರಾಜಕಾರಣದಿಂದಾಗಿ ಪಶ್ಚಿಮ ಬಂಗಾಳದ ಹಿಂಸಾಚಾರ ಪೀಡಿತ ಮುರ್ಷಿದಾಬಾದ್ ಜಿಲ್ಲೆಯಿಂದ ಹಿಂದೂಗಳು ಪಲಾಯನ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ನಾಯಕ ಪಿಸಿ ಮೋಹನ್, ಕರ್ನಾಟಕ ಕಾಂಗ್ರೆಸ್‌ನ ತುಷ್ಟೀಕರಣ ತಂತ್ರಗಳಿಂದ ಇಲ್ಲಿಯೂ ಇದೇ ರೀತಿಯ ಪರಿಸ್ಥಿತಿಗೆ ಕಾರಣವಾಗಬಹುದು ಎಂದು ಹೇಳಿದ್ದಾರೆ.

ಸರ್ಕಾರದ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿ ನೀಡುವ ರಾಜ್ಯ ಸರ್ಕಾರದ ಕ್ರಮವನ್ನು 'ತುಷ್ಟೀಕರಣ ತಂತ್ರ' ಎಂದು ಕರೆದ ಬೆಂಗಳೂರು ಕೇಂದ್ರ ಸಂಸದರು, ಹಿಂದೂಗಳು 'ಎಚ್ಚರಗೊಳ್ಳುವಂತೆ' ಕರೆ ನೀಡಿದ್ದಾರೆ.

'ಮುರ್ಷಿದಾಬಾದ್‌ನಲ್ಲಿ ನಡೆಯುತ್ತಿರುವ ಘಟನೆಗಳು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಅಪಾಯಕಾರಿ ಓಲೈಕೆ ರಾಜಕಾರಣದ ನೇರ ಪರಿಣಾಮವಾಗಿದೆ. ಇದು ಹಿಂದೂಗಳನ್ನು ಪಲಾಯನ ಮಾಡುವಂತೆ ಮಾಡಿದೆ. ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಂರಿಗೆ ಶೇ 4ರಷ್ಟು ಮೀಸಲಾತಿಯಂತಹ ಕರ್ನಾಟಕ ಕಾಂಗ್ರೆಸ್‌ನ ಓಲೈಕೆಯ ತಂತ್ರಗಳು ಸಹ ಇದೇ ರೀತಿಯ ಪರಿಸ್ಥಿತಿಗೆ ಕಾರಣವಾಗಬಹುದು. ಹಿಂದೂಗಳೇ, ಎದ್ದೇಳಿ!' ಎಂದು 'X' ನಲ್ಲಿ ಪೋಸ್ಟ್ ಮಾಡಿದ್ದಾರೆ.

ಜನರು ತಮ್ಮ ಕುಟುಂಬಗಳು ಮತ್ತು ವಸ್ತುಗಳೊಂದಿಗೆ ಮುರ್ಷಿದಾಬಾದ್‌ನಿಂದ ಪಲಾಯನ ಮಾಡುತ್ತಿರುವುದನ್ನು ತೋರಿಸುವ ವಿಡಿಯೋವನ್ನು ಮೋಹನ್ ಹಂಚಿಕೊಂಡಿದ್ದಾರೆ.

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸಿ ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಮೂವರು ಸಾವಿಗೀಡಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT