ಸತೀಶ್ ಜಾರಕಿಹೊಳಿ  
ರಾಜ್ಯ

ಕೆಲ ಸಚಿವರ ಒತ್ತಡದಿಂದ ರಾಜ್ಯ ಸರ್ಕಾರ ಶಿರಾ ವಿಮಾನ ನಿಲ್ದಾಣ ಯೋಜನೆಯನ್ನು ಕೈಬಿಟ್ಟಿದೆ: ಸತೀಶ್ ಜಾರಕಿಹೊಳಿ

ಶಿರಾ ಬಳಿ ವಿಮಾನ ನಿಲ್ದಾಣ ಬಂದರೆ ಕನಿಷ್ಠ ಏಳರಿಂದ ಎಂಟು ಜಿಲ್ಲೆಗಳು ಪ್ರಯೋಜನ ಪಡೆಯುತ್ತವೆ ಎಂದು ಮನವಿ ಮಾಡಿದ್ದೆ.

ಬೆಳಗಾವಿ: ಕೆಲವು ಪ್ರಭಾವಿ ಸಚಿವರ ಒತ್ತಡದಿಂದ ರಾಜ್ಯ ಸರ್ಕಾರ ತುಮಕೂರು ಬಳಿಯ ಶಿರಾದಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸುವ ಯೋಜನೆಯನ್ನು ಕೈಬಿಟ್ಟಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶನಿವಾರ ಹೇಳಿದ್ದಾರೆ.

ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರು ತಿಂಗಳ ಹಿಂದೆಯೇ ಶಿರಾ ಬಳಿ 2ನೇ ವಿಮಾನ ನಿಲ್ದಾಣ ಸ್ಥಾಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೆ. ಶಿರಾ ಬಳಿ ವಿಮಾನ ನಿಲ್ದಾಣ ಬಂದರೆ ಕನಿಷ್ಠ ಏಳರಿಂದ ಎಂಟು ಜಿಲ್ಲೆಗಳು ಪ್ರಯೋಜನ ಪಡೆಯುತ್ತವೆ ಎಂದು ಮನವಿ ಮಾಡಿದ್ದೆ. ಹಲವಾರು ಶಾಸಕರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಥಾಪಿಸಬೇಕೆಂದು ಬಯಸಿದ್ದಾರೆ. ಆದರೆ, ಕೆಲ ಪ್ರಭಾವಿ ಸಚಿವರ ಒತ್ತಡದಿಂದ ಸರ್ಕಾರ ಯೋಜನೆಯಿಂದ ಹಿಂದೆ ಸರಿದಿದಂತಿದೆ. ಸರ್ಕಾರ ತನ್ನ ನಿರ್ಧಾರವನ್ನು ಪುನರ್ವಿಮರ್ಶಿಸಬೇಕಿದೆ ಎಂದು ಹೇಳಿದ್ದಾರೆ.

ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಇತ್ತೀಚೆಗೆ ನವದೆಹಲಿಗ ಭೇಟಿ ನೀಡಿದ್ದಾಗ ಕೇಂದ್ರ ಸಚಿವ ರಾಮ್ ಮೋಹನ್ ನಾಯ್ಡು ಅವರ ಗಮನಕ್ಕೆ ತರಲಾಗಿತ್ತು. ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಹಚ್ಚಾಗುತ್ತಿದ್ದು, ತುಮಕೂರು ಬಳಿಯ ಶಿರಾದಲ್ಲಿ 2ನೇ ವಿಮಾನ ನಿಲ್ದಾಣದ ಸ್ಥಾಪನೆ ಅಗತ್ಯವಿದೆ. ಕನಿಷ್ಠ ಏಳರಿಂದ ಎಂಟು ಜಿಲ್ಲೆಗಳು ಸೇರಿದಂತೆ ಶಿರಾ ಸುತ್ತಮುತ್ತಲಿನ ಅನೇಕ ಪ್ರದೇಶಗಳು ಇದರಿಂದ ಪ್ರಯೋಜನ ಪಡೆಯಲಿದೆ ಎಂದು ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, ಎಐಸಿಸಿ ಕಾರ್ಯಕಾರಿಣಿ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ತೀರ್ಮಾನಿಸಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

SCROLL FOR NEXT