ಬಂಧನ online desk
ರಾಜ್ಯ

ವಕ್ಫ್ ಮಸೂದೆ ಕುರಿತು ಪ್ರಚೋದನಕಾರಿ ಹೇಳಿಕೆ; ಇಬ್ಬರ ಬಂಧನ

ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಕಬೀರ್ ಖಾನ್ ಗಾಗಿ ಹುಡುಕಾಟ ಮುಂದುವರೆಸಿದ್ದಾರೆ.

ದಾವಣಗೆರೆ: ವಕ್ಫ್ ತಿದ್ದುಪಡಿ ಮಸೂದೆ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಇತ್ತೀಚೆಗೆ ನಗರದಲ್ಲಿ ವಕ್ಫ್ ಮಸೂದೆ -2025 ರ ವಿರುದ್ಧ ವ್ಯಕ್ತಿಯೊಬ್ಬ ಪ್ರಚೋದನಕಾರಿ ಹೇಳಿಕೆ ನೀಡಿರುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಈ ವೀಡಿಯೊವನ್ನು ಆಧರಿಸಿ, ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಅಹ್ಮದ್ ಕಬೀರ್ ಖಾನ್ ಮತ್ತು ಆತನ ಸಹಚರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರ ನೇತೃತ್ವದಲ್ಲಿ ಪ್ರಕರಣದ ಆರೋಪಿಗಳನ್ನು ಹುಡುಕಲು ಆಜಾದ್ ನಗರ ಪೊಲೀಸ್ ಇನ್ಸ್‌ಪೆಕ್ಟರ್ ಅಶ್ವಿನ್ ಕುಮಾರ್ ಜೊತೆಗೆ ಸಿಬ್ಬಂದಿಯ ತಂಡವನ್ನು ರಚಿಸಲಾಗಿತ್ತು.

ಇದರಂತೆ ಪೊಲೀಸರು ಪ್ರಕರಣದ ಎರಡನೇ ಆರೋಪಿ ಬಾಷಾನಗರದ ಅಬ್ದುಲ್ ಗನಿ (56) ಮತ್ತು ಮೂರನೇ ಆರೋಪಿ ಮೊಹಮ್ಮದ್ ಜುಬೈರ್ (40) ಅವರನ್ನು ಬಂಧನಕ್ಕೊಳಪಡಿಸಿದ್ದು, ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಕಬೀರ್ ಖಾನ್ ಗಾಗಿ ಹುಡುಕಾಟ ಮುಂದುವರೆಸಿದ್ದಾರೆ.

ಈ ನಡುವೆ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಎಸ್ಪಿ ಉಮಾ ಪ್ರಶಾಂತ್ ಶ್ಲಾಘಿಸಿದ್ದಾರೆ.

ಯಾವುದೇ ಪ್ರಚೋದನಕಾರಿ, ವೈಯಕ್ತಿಕ ನಿಂದನೆ, ಧಾರ್ಮಿಕ ನಿಂದನೆ, ದ್ವೇಷ ಭಾಷಣ, ದೇಶ ವಿರೋಧಿ ಪೋಸ್ಟ್‌ಗಳನ್ನು ಹಾಕುವುದು, ವಕ್ಫ್ ಮಸೂದೆ ಮತ್ತು ಇತರ ಆಕ್ಷೇಪಾರ್ಹ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕುವುದು, ಹಂಚಿಕೊಳ್ಳುವುದು ಮತ್ತು ಕೆಟ್ಟದಾಗಿ ಕಾಮೆಂಟ್ ಮಾಡುವುದು ಕಾನೂನುಬಾಹಿರವಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಮಾ ಪ್ರಶಾಂತ್ ಅವರು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT