ಸಂಗ್ರಹ ಚಿತ್ರ 
ರಾಜ್ಯ

ಮದ್ಯಪಾನಕ್ಕೆ ಅವಕಾಶ ನೀಡದ್ದಕ್ಕೆ ವಾಚ್‌ಮನ್‌ ಬರ್ಬರ ಕೊಲೆ; ಮೂವರ ಬಂಧನ

ಈ ಸಂಬಂಧ ದೂರು ದಾಖಲಿಸಿಕೊಂಡ ಕಗ್ಗಲೀಪುರ ಪೊಲೀಸರು ಕೆಲವೇ ಗಂಟೆಗಳಲ್ಲಿ ವಡೇರಹಳ್ಳಿ ನಿವಾಸಿಗಳಾದ ಪುನೀತ್, ಮಹೇಶ್ ಮತ್ತು ಮೋಹನ್ ಎಂಬ ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಖಾಸಗಿ ಜಮೀನಿನಲ್ಲಿ ಮದ್ಯಪಾನ ಮಾಡಲು ಅವಕಾಶ ನೀಡದ 50 ವರ್ಷದ ವಾಚ್‌ಮನ್‌ನನ್ನು ಮೂವರು ಆರೋಪಿಗಳು ಕೊಲೆ ಮಾಡಿರುವ ಘಟನೆ ಕೆಂಗೇರಿ ಬಳಿಯ ವಡೇರಹಳ್ಳಿಯಲ್ಲಿ ಬುಧವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಈ ಸಂಬಂಧ ದೂರು ದಾಖಲಿಸಿಕೊಂಡ ಕಗ್ಗಲೀಪುರ ಪೊಲೀಸರು ಕೆಲವೇ ಗಂಟೆಗಳಲ್ಲಿ ವಡೇರಹಳ್ಳಿ ನಿವಾಸಿಗಳಾದ ಪುನೀತ್, ಮಹೇಶ್ ಮತ್ತು ಮೋಹನ್ ಎಂಬ ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ಮಹೇಶ್ ಹಾಗೂ ಮೋಹನ್ ವೃತ್ತಿಯಲ್ಲಿ ಚಾಲಕರಾಗಿದ್ದು, ಪುನೀತ್ ನಿರುದ್ಯೋಗಿಯಾಗಿದ್ದಾನೆಂದು ತಿಳಿದುಬಂದಿದೆ.

ಮೂವರು ಆರೋಪಿಗಳು ಮದ್ಯದ ಬಾಟಲಿಗಳೊಂದಿಗೆ ಜಮೀನಿನ ಬಳಿ ಬಂದಿದ್ದು, ಜಮೀನು ಪ್ರವೇಶಿಸಲು ಮುಂದಾಗಿದ್ದಾರೆ. ಈ ವೇಳೆ ಕಾವಲು ಕಾಯುತ್ತಿದ್ದ ನಾಗರಾಜು(50) ಅವರು ನಿರಾಕರಿಸಿದ್ದು, ಬಳಿಕ ಆರೋಪಿಗಳು ಮರದ ಹಲಗೆಯಿಂದ ಹಲ್ಲೆ ನಡೆಸಿದ್ದಾರೆ. ಬಳಿಕ ನಾಗರಾಜು ಅವರ ಮೊಬೈಲ್ ಕಸಿದು ಸ್ಥಳದಿಂದ ಪರಾರಿಯಾಗಿದ್ದಾರೆ.

ಬಳಿಕ ಸ್ಥಳೀಯರು ನಾಗರಾಜು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದು, ಈ ವೇಳೆ ಮಾರ್ಗದ ಮಧ್ಯೆಯೇ ನಾಗರಾಜು ಅವರು ಕೊನೆಯುಸಿರೆಳೆದಿದ್ದಾರೆ.

ಘಟನೆ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದ್ದು, ಮರುದಿನ ಬೆಳಿಗ್ಗೆ 11 ಗಂಟೆ ಸುಮಾರಿಗೆ ನಾಗರಾಜು ಅವರು ಮೃತಪಟ್ಟಿದ್ದಾರೆ.

ಆರೋಪಿಗಳು ತಂದೆಯ ಫೋನ್ ಕಸಿದು ಪರಾರಿಯಾಗಿದ್ದರು. ಹೀಗಾಗಿ ಏನಾಗಿದೆ ಎಂಬುದು ಯಾರಿಗೂ ತಿಳಿದಿರಲಿಲ್ಲ. ಮರುದಿನ ಅಪ್ಪನ ಸ್ನೇಹಿತರು ಕರೆ ಮಾಡಿದ್ದು, ಫೋನ್ ತೆಗೆಯದ ಕಾರಣ ನೋಡಲು ಹೋದಾಗ ಘಟನೆ ಬೆಳಕಿಗೆ ಬಂದಿತ್ತು. ಕೂಡಲೇ ಆಸ್ಪತ್ರೆ ಸಾಗಿಸಲು ಮುಂದಾಗಿದ್ದರು. ಆದರೆ,ಮಾರ್ಗದ ಮಧ್ಯೆಯೇ ಕೊನೆಯುಸಿರೆಳೆದಿದ್ದರು. ಆರೋಪಿಗಳು ಫೋನ್ ಕಸಿಯದಿದ್ದಿದ್ದರೆ ಅಪ್ಪ ಬದುಕುಳಿಯುತ್ತಿದ್ದರು ಎಂದು ನಾಗರಾಜು ಅವರ ಪುತ್ರ ದರ್ಶನ್ (22) ಅವರು ಕಣ್ಣೀರಿಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT