ಶಂಕರ್ ಬಿದರಿ 
ರಾಜ್ಯ

ಜಾತಿ ಜನಗಣತಿ ವರದಿಯನ್ನು ಒಪ್ಪುವುದಿಲ್ಲ: ವೀರಶೈವ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ್ ಬಿದರಿ

ವೀರಶೈವ-ಲಿಂಗಾಯತ ಸಮುದಾಯದ ಜನಸಂಖ್ಯೆಯ ಬಗ್ಗೆ ವರದಿಯು ನಿಖರವಾದ ಮಾಹಿತಿಯನ್ನು ಒದಗಿಸುವುದಿಲ್ಲ. ವರದಿಯ ಪ್ರಕಾರ, ಸಮುದಾಯದ ಜನಸಂಖ್ಯೆಯನ್ನು 66 ಲಕ್ಷ ಎಂದು ತೋರಿಸಲಾಗಿದೆ ಎಂದರು.

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗವು ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಸಲ್ಲಿಸಿರುವ ವಿವಾದಾತ್ಮಕ ಜಾತಿ ಗಣತಿ ವರದಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ್ ಬಿದರಿ ಭಾನುವಾರ ಹೇಳಿದ್ದಾರೆ.

ವೀರಶೈವ-ಲಿಂಗಾಯತ ಸಮುದಾಯದ ಜನಸಂಖ್ಯೆಯ ಬಗ್ಗೆ ವರದಿಯು ನಿಖರವಾದ ಮಾಹಿತಿಯನ್ನು ಒದಗಿಸುವುದಿಲ್ಲ. ವರದಿಯ ಪ್ರಕಾರ, ಸಮುದಾಯದ ಜನಸಂಖ್ಯೆಯನ್ನು 66 ಲಕ್ಷ ಎಂದು ತೋರಿಸಲಾಗಿದೆ ಎಂದರು.

'ಆದಾಗ್ಯೂ, ಎಲ್ಲ ಉಪಜಾತಿಗಳನ್ನು ಪರಿಗಣಿಸಿದಾಗ, ರಾಜ್ಯದಲ್ಲಿ ನಿಜವಾದ ಜನಸಂಖ್ಯೆ ಸುಮಾರು ಮೂರು ಕೋಟಿಯಷ್ಟಿದೆ. ನಾವು ಯಾವುದೇ ಸಂದರ್ಭದಲ್ಲೂ ಈ ವರದಿಯನ್ನು ಸ್ವೀಕರಿಸುವುದಿಲ್ಲ. ರಾಜ್ಯದಲ್ಲಿ ಹೊಸದಾಗಿ ಜಾತಿ ಜನಗಣತಿ ನಡೆಸುವಂತೆ ನಾವು ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತೇವೆ' ಎಂದು ಹೇಳಿದರು.

ಒಟ್ಟು 224 ವಿಧಾನಸಭಾ ಕ್ಷೇತ್ರಗಳ ಪೈಕಿ ಸುಮಾರು 150 ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಫಲಿತಾಂಶವನ್ನು ನಿರ್ಧರಿಸುವಲ್ಲಿ ವೀರಶೈವ-ಲಿಂಗಾಯತ ಸಮುದಾಯವು ನಿರ್ಣಾಯಕ ಪಾತ್ರ ವಹಿಸುವುದರಿಂದ, ಇದು ಕರ್ನಾಟಕದ ಅತ್ಯಂತ ಪ್ರಭಾವಶಾಲಿ ಸಮುದಾಯಗಳ್ಲಿ ಒಂದಾಗಿದೆ.

ಜಾತಿ ಗಣತಿ ವರದಿಯನ್ನು ಪರಿಶೀಲಿಸಬೇಕಾಗಿದೆ

ಭಾನುವಾರ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂಬಿ ಪಾಟೀಲ್, ವರದಿಯಲ್ಲಿ ಹೇಳಿರುವಂತೆ ವೀರಶೈವ-ಲಿಂಗಾಯತ ಸಮುದಾಯದ ಜನಸಂಖ್ಯೆ ಸುಮಾರು 70 ಲಕ್ಷ ಅಲ್ಲ. ವಾಸ್ತವದಲ್ಲಿ ಒಂದು ಕೋಟಿಗಿಂತ ಹೆಚ್ಚಿದೆ ಎಂದು ಹೇಳಿದರು.

'ನಾನು ಜಾತಿ ಗಣತಿ ವರದಿಯ ಪ್ರತಿಯನ್ನು ಪಡೆದುಕೊಂಡಿದ್ದೇನೆ. ಯಾವುದೇ ಹೇಳಿಕೆಗಳನ್ನು ನೀಡುವ ಮುನ್ನ ಅದನ್ನು ಸಂಪೂರ್ಣವಾಗಿ ಪರಿಶೀಲಿಸಬೇಕಾಗಿದೆ. ವರದಿಯನ್ನು ಅಧ್ಯಯನ ಮಾಡಿದ ನಂತರ, ಏಪ್ರಿಲ್ 17 ರಂದು ನಿಗದಿಯಾಗಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ನನ್ನ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತೇನೆ' ಎಂದರು.

'ಸಂದೇಹಗಳನ್ನು ಪರಿಹರಿಸಿಕೊಳ್ಳಬೇಕು ಮತ್ತು ಈ ವಿಷಯವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಬೇಕು. ಮೀಸಲಾತಿ ಸೌಲಭ್ಯಗಳನ್ನು ಪಡೆಯಲು, ಅನೇಕ ಉಪಜಾತಿಗಳು ತಮ್ಮನ್ನು ಲಿಂಗಾಯತ ಸಮುದಾಯಕ್ಕೆ ಸೇರಿದವರು ಎಂದು ಅಧಿಕೃತವಾಗಿ ದಾಖಲಿಸಿಕೊಳ್ಳುವುದಿಲ್ಲ. ಅಂತಹ ಸಂಗತಿಗಳನ್ನು ಗಣನೆಗೆ ತೆಗೆದುಕೊಳ್ಳಬೇಕು. ಈ ವಿಷಯವನ್ನು ಚರ್ಚಿಸಲಾಗುವುದು ಮತ್ತು ಯಾವುದೇ ಸಂಘರ್ಷ ಇರುವುದಿಲ್ಲ' ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

SCROLL FOR NEXT