ಶಂಕರ್ ಬಿದರಿ 
ರಾಜ್ಯ

ಜಾತಿ ಜನಗಣತಿ ವರದಿಯನ್ನು ಒಪ್ಪುವುದಿಲ್ಲ: ವೀರಶೈವ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ್ ಬಿದರಿ

ವೀರಶೈವ-ಲಿಂಗಾಯತ ಸಮುದಾಯದ ಜನಸಂಖ್ಯೆಯ ಬಗ್ಗೆ ವರದಿಯು ನಿಖರವಾದ ಮಾಹಿತಿಯನ್ನು ಒದಗಿಸುವುದಿಲ್ಲ. ವರದಿಯ ಪ್ರಕಾರ, ಸಮುದಾಯದ ಜನಸಂಖ್ಯೆಯನ್ನು 66 ಲಕ್ಷ ಎಂದು ತೋರಿಸಲಾಗಿದೆ ಎಂದರು.

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗವು ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಸಲ್ಲಿಸಿರುವ ವಿವಾದಾತ್ಮಕ ಜಾತಿ ಗಣತಿ ವರದಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ್ ಬಿದರಿ ಭಾನುವಾರ ಹೇಳಿದ್ದಾರೆ.

ವೀರಶೈವ-ಲಿಂಗಾಯತ ಸಮುದಾಯದ ಜನಸಂಖ್ಯೆಯ ಬಗ್ಗೆ ವರದಿಯು ನಿಖರವಾದ ಮಾಹಿತಿಯನ್ನು ಒದಗಿಸುವುದಿಲ್ಲ. ವರದಿಯ ಪ್ರಕಾರ, ಸಮುದಾಯದ ಜನಸಂಖ್ಯೆಯನ್ನು 66 ಲಕ್ಷ ಎಂದು ತೋರಿಸಲಾಗಿದೆ ಎಂದರು.

'ಆದಾಗ್ಯೂ, ಎಲ್ಲ ಉಪಜಾತಿಗಳನ್ನು ಪರಿಗಣಿಸಿದಾಗ, ರಾಜ್ಯದಲ್ಲಿ ನಿಜವಾದ ಜನಸಂಖ್ಯೆ ಸುಮಾರು ಮೂರು ಕೋಟಿಯಷ್ಟಿದೆ. ನಾವು ಯಾವುದೇ ಸಂದರ್ಭದಲ್ಲೂ ಈ ವರದಿಯನ್ನು ಸ್ವೀಕರಿಸುವುದಿಲ್ಲ. ರಾಜ್ಯದಲ್ಲಿ ಹೊಸದಾಗಿ ಜಾತಿ ಜನಗಣತಿ ನಡೆಸುವಂತೆ ನಾವು ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತೇವೆ' ಎಂದು ಹೇಳಿದರು.

ಒಟ್ಟು 224 ವಿಧಾನಸಭಾ ಕ್ಷೇತ್ರಗಳ ಪೈಕಿ ಸುಮಾರು 150 ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಫಲಿತಾಂಶವನ್ನು ನಿರ್ಧರಿಸುವಲ್ಲಿ ವೀರಶೈವ-ಲಿಂಗಾಯತ ಸಮುದಾಯವು ನಿರ್ಣಾಯಕ ಪಾತ್ರ ವಹಿಸುವುದರಿಂದ, ಇದು ಕರ್ನಾಟಕದ ಅತ್ಯಂತ ಪ್ರಭಾವಶಾಲಿ ಸಮುದಾಯಗಳ್ಲಿ ಒಂದಾಗಿದೆ.

ಜಾತಿ ಗಣತಿ ವರದಿಯನ್ನು ಪರಿಶೀಲಿಸಬೇಕಾಗಿದೆ

ಭಾನುವಾರ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂಬಿ ಪಾಟೀಲ್, ವರದಿಯಲ್ಲಿ ಹೇಳಿರುವಂತೆ ವೀರಶೈವ-ಲಿಂಗಾಯತ ಸಮುದಾಯದ ಜನಸಂಖ್ಯೆ ಸುಮಾರು 70 ಲಕ್ಷ ಅಲ್ಲ. ವಾಸ್ತವದಲ್ಲಿ ಒಂದು ಕೋಟಿಗಿಂತ ಹೆಚ್ಚಿದೆ ಎಂದು ಹೇಳಿದರು.

'ನಾನು ಜಾತಿ ಗಣತಿ ವರದಿಯ ಪ್ರತಿಯನ್ನು ಪಡೆದುಕೊಂಡಿದ್ದೇನೆ. ಯಾವುದೇ ಹೇಳಿಕೆಗಳನ್ನು ನೀಡುವ ಮುನ್ನ ಅದನ್ನು ಸಂಪೂರ್ಣವಾಗಿ ಪರಿಶೀಲಿಸಬೇಕಾಗಿದೆ. ವರದಿಯನ್ನು ಅಧ್ಯಯನ ಮಾಡಿದ ನಂತರ, ಏಪ್ರಿಲ್ 17 ರಂದು ನಿಗದಿಯಾಗಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ನನ್ನ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತೇನೆ' ಎಂದರು.

'ಸಂದೇಹಗಳನ್ನು ಪರಿಹರಿಸಿಕೊಳ್ಳಬೇಕು ಮತ್ತು ಈ ವಿಷಯವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಬೇಕು. ಮೀಸಲಾತಿ ಸೌಲಭ್ಯಗಳನ್ನು ಪಡೆಯಲು, ಅನೇಕ ಉಪಜಾತಿಗಳು ತಮ್ಮನ್ನು ಲಿಂಗಾಯತ ಸಮುದಾಯಕ್ಕೆ ಸೇರಿದವರು ಎಂದು ಅಧಿಕೃತವಾಗಿ ದಾಖಲಿಸಿಕೊಳ್ಳುವುದಿಲ್ಲ. ಅಂತಹ ಸಂಗತಿಗಳನ್ನು ಗಣನೆಗೆ ತೆಗೆದುಕೊಳ್ಳಬೇಕು. ಈ ವಿಷಯವನ್ನು ಚರ್ಚಿಸಲಾಗುವುದು ಮತ್ತು ಯಾವುದೇ ಸಂಘರ್ಷ ಇರುವುದಿಲ್ಲ' ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT