ಬಸನಗೌಡ ಪಾಟೀಲ್ ಯತ್ನಾಳ್ 
ರಾಜ್ಯ

ಗೋಶಾಲೆಯಿಂದ ಕಸಾಯಿಖಾನೆಗೆ ಅಕ್ರಮವಾಗಿ ಗೋವುಗಳ ಸಾಗಣೆ: ಯತ್ನಾಳ್ ವಿರುದ್ಧ ಅಬ್ದುಲ್‌ ಹಮೀದ್‌ ಮುಶ್ರೀಫ್‌ ಗಂಭೀರ ಆರೋಪ

ನಗರ ಪಾಲಿಕೆ ವಶಪಡಿಸಿಕೊಂಡಿರುವ ಹೆಚ್ಚಿನ ಬಿಡಾಡಿ ದಕರುನಗಳನ್ನು ಕಗ್ಗೋಡು ಗ್ರಾಮದಲ್ಲಿರುವ ಯತ್ನಾಳ್ ಅವರ ಗೋಶಾಲೆಗೆ ಕಳುಹಿಸಲಾಗುತ್ತದೆ.

ವಿಜಯಪುರ: ಕಗ್ಗೋಡದಲ್ಲಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಗೋಶಾಲೆಯಿಂದ ಕಸಾಯಿಖಾಲೆಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದ್ದು, ದೊಡ್ಡ ಅವ್ಯವಹಾರ ನಡೆಯುತ್ತಿದೆ ಎಂದು ಕಾಂಗ್ರೆಸ್‌ ಮುಖಂಡ ಅಬ್ದುಲ್‌ ಹಮೀದ್‌ ಮುಶ್ರೀಫ್‌ ಅವರು ಗಂಭೀರ ಆರೋಪ ಮಾಡಿದ್ದಾರೆ.

ಶನಿವಾರ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, ನಗರ ಪಾಲಿಕೆ ವಶಪಡಿಸಿಕೊಂಡಿರುವ ಹೆಚ್ಚಿನ ಬಿಡಾಡಿ ದಕರುನಗಳನ್ನು ಕಗ್ಗೋಡು ಗ್ರಾಮದಲ್ಲಿರುವ ಯತ್ನಾಳ್ ಅವರ ಗೋಶಾಲೆಗೆ ಕಳುಹಿಸಲಾಗುತ್ತದೆ. ಗೋಶಾಲೆಯಿಂದ ಯತ್ನಾಳ್ ಅವರು ಕಲಬುರಗಿಗೆ ಅಕ್ರಮವಾಗಿ ಕಸಾಯಿಖಾನೆಗೆ ಕಳುಹಿಸುವ ಮೂಲಕ ದೊಡ್ಡ ವ್ಯವಹಾರ ಮಾಡುತ್ತಿದ್ದಾರೆಂದು ಆರೋಪಿಸಿದ್ದಾರೆ.

ಯತ್ನಾಳ್ ಅವರು ಆರೋಪ ನಿರಾಕರಿಸುವುದಾದರೆ, ಕಳೆದ 7-8 ವರ್ಷಗಳಿಂದ ಅವರ ಗೋಶಾಲೆಗೆ ಎಷ್ಟು ದನಕರುಗಳನ್ನು ಕಳುಹಿಸಲಾಗಿದೆ. ಅವುಗಳು ಏನಾದವು, ಎಲ್ಲಿಗೆ ಹೋದವು ಎಂಬುದರ ಕುರಿತು ದಾಖಲೆಗಳನ್ನು ನೀಡಲಿ ಎಂದು ಸವಾಲು ಹಾಕಿದರು. ಅಲ್ಲದೆ, ಈ ಬಗ್ಗೆ ತನಿಖೆಯಾಗಬೇಕೆಂದು ಆಗ್ರಹಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

ಖಾಸಗಿ ಕಟ್ಟಡಗಳಲ್ಲಿ ಮತಗಟ್ಟೆ ಸ್ಥಾಪನೆ ನಿಷ್ಪಕ್ಷಪಾತದಲ್ಲಿ ರಾಜಿ: ಚುನಾವಣಾ ಆಯೋಗಕ್ಕೆ ಮಮತಾ ಪತ್ರ

ಅಧಿಕಾರಕ್ಕೆ ಬಂದ ಬೆನ್ನಲ್ಲೇ ಬಿಹಾರದಲ್ಲಿ NDA ಸರ್ಕಾರ ಮಹತ್ವದ ಘೋಷಣೆ: ಸನಾತನ ಧರ್ಮ ಪ್ರಚಾರಕ್ಕಾಗಿ 38 ಜಿಲ್ಲೆಗಳಲ್ಲಿ ಸಂಚಾಲಕರ ನೇಮಕ!

SCROLL FOR NEXT