ಡಿ.ಕೆ. ಶಿವಕುಮಾರ್  
ರಾಜ್ಯ

ಧರ್ಮದ ಹೆಸರಲ್ಲಿ ರಾಜಕಾರಣ ನೀಚತನ; ಅವರವರ ಸಮಾಜವನ್ನು ಅವರೇ ರಕ್ಷಣೆ ಮಾಡಿಕೊಳ್ಳಲು ಹೊರಟಿದ್ದಾರೆ, ತಪ್ಪೇನು?: ಡಿ.ಕೆ ಶಿವಕುಮಾರ್

ಕರಗ ಆಚರಣೆಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡುವುದಕ್ಕೆ ನಿಯಮಾವಳಿ ಇದೆ. ಯಾರದೋ ಕೈಗೆ ಹಣ ನೀಡಲು ಆಗುವುದಿಲ್ಲ. ಜಿಲ್ಲಾಧಿಕಾರಿಗಳಿಗೆ ಜವಾಬ್ದಾರಿ ವಹಿಸಿದ್ದೇವೆ.

ಬೆಂಗಳೂರು: ಬೆಂಗಳೂರು ಭಾವೈಕ್ಯತೆಯ ದೊಡ್ಡ ಸಂಕೇತ. ಕರಗ ಆಚರಣೆ ವೇಳೆ ದರ್ಗಾಕ್ಕೂ ಭೇಟಿ ನೀಡಲಾಗುತ್ತದೆ. ಧರ್ಮ, ದೇವಾಸ್ಥಾನದ ಹೆಸರಿನಲ್ಲಿ ರಾಜಕಾರಣ ಮಾಡುವುದು ನೀಚತನ. ಇದನ್ನು ಯಾರೂ ಸಹ ಮಾಡಬಾರದು ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರಗ ಆಚರಣೆಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡುವುದಕ್ಕೆ ನಿಯಮಾವಳಿ ಇದೆ. ಯಾರದೋ ಕೈಗೆ ಹಣ ನೀಡಲು ಆಗುವುದಿಲ್ಲ. ಜಿಲ್ಲಾಧಿಕಾರಿಗಳಿಗೆ ಜವಾಬ್ದಾರಿ ವಹಿಸಿದ್ದೇವೆ. ಅವರು ಯಾರಿಗೆ ಹಣ ನೀಡಬೇಕೋ ಅವರಿಗೆ ಹಣ ನೀಡುತ್ತಾರೆ. ಬಜೆಟ್ ಅಲ್ಲಿಯೇ ಹಣ ಮೀಲಿಟ್ಟಿದ್ದೇವೆ. ಕರಗ ಉತ್ಸವ ಚೆನ್ನಾಗಿ ನಡೆಯಲು ಜಿಲ್ಲಾಧಿಕಾರಿಗಳು, ಪೊಲೀಸರು ಶ್ರಮವಹಿಸಿದ್ದಾರೆ ಎಂದು ತಿಳಿಸಿದರು.

ವೀರಶೈವ ಮಹಾಸಭಾದವರು ಅವರ ಸಮಾಜ ರಕ್ಷಣೆ ಮಾಡಿಕೊಳ್ಳಲು ಹೊರಟಿದ್ದು, ಅವರನ್ನು ನಾವು ಏಕೆ ಟೀಕೆ ಮಾಡಬೇಕು. ಪ್ರಜಾಪ್ರಭುತ್ವ, ಸಂವಿಧಾನದ ಪ್ರಕಾರವಾಗಿ ಅವರುಗಳು ತಮ್ಮ ನಿಲುವುಗಳನ್ನು ಪ್ರತಿಪಾದನೆ ಮಾಡಲಿ ಎಂದು ಹೇಳಿದರು.

ಮುಖ್ಯಮಂತ್ರಿಗಳು ಜಾತಿಗಣತಿ ವರದಿಯ ಬಗ್ಗೆ ಚರ್ಚೆ ನಡೆಸಲು ಜನಪ್ರತಿನಿಧಿಗಳಿಗೂ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದಕ್ಕಿಂತ ಮುಕ್ತವಾಗಿ ಇನ್ನೇನು ‌ಮಾಡಲು ಸಾಧ್ಯ" ಎಂದರು. ಚುನಾವಣೆ ಪೂರ್ವದಲ್ಲಿ ಒಕ್ಕಲಿಗ ಸಮುದಾಯ ಬೆನ್ನಿಗೆ ನಿಲ್ಲಬೇಕು ಎಂದು ಈ ಹಿಂದೆ ನೀಡಿದ್ದ ಹೇಳಿಕೆ ಬಗ್ಗೆ ಕೇಳಿದಾಗ, "ಅದು ಬೇರೆ ವಿಚಾರ. ಈಗ ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿದ್ದೇನೆ. ಎಲ್ಲರಿಗೂ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ, ಧ್ವನಿ, ಧ್ಯೇಯ, ಉದ್ದೇಶ, ಸಂಕಲ್ಪ ಎಲ್ಲವೂ ಸಹ" ಎಂದರು. ಒಕ್ಕಲಿಗರ ಸಂಖ್ಯೆ 61 ಲಕ್ಷ ತೋರಿಸಲಾಗುತ್ತಿದೆ ಎಂದು ಕೇಳಿದಾಗ, "ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಷ್ಟೇ" ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT