ಕೆಎನ್ ರಾಜಣ್ಣ - ಜಿ ಪರಮೇಶ್ವರ 
ರಾಜ್ಯ

ಜಾತಿ ಗಣತಿ ವರದಿ ಅಂಗೀಕರಿಸುವ ಬಗ್ಗೆ ನಿರ್ಧಾರವಾಗಿಲ್ಲ ಎಂದ ರಾಜಣ್ಣ; 'ಇದು ಕೇವಲ ಆರಂಭ': ಪರಮೇಶ್ವರ

ಸಮುದಾಯಗಳು ಮತ್ತು ನಾಯಕರಿಂದ ಅಭಿಪ್ರಾಯಗಳು ಬರುತ್ತಿವೆ. ಈ ವಿಷಯವನ್ನು ಸಂಪುಟದಲ್ಲಿ ಚರ್ಚಿಸಿ ಫಲಿತಾಂಶ ಏನಾಗುತ್ತದೆ ಎಂದು ನೋಡೋಣ ಎಂದು ಹೇಳಿದರು.

ಬೆಂಗಳೂರು: ಜಾತಿ ಗಣತಿ ವರದಿಯನ್ನು ಸ್ವೀಕರಿಸುವ ನಿರ್ಧಾರವನ್ನು ಇನ್ನೂ ತೆಗೆದುಕೊಂಡಿಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಸೋಮವಾರ ಹೇಳಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಆಕ್ಷೇಪಣೆಗಳಿದ್ದರೆ ಅವುಗಳನ್ನು ಪರಿಶೀಲಿಸಲಾಗುವುದು. ಜಾತಿ ಗಣತಿ ವರದಿ ವಿರುದ್ಧ ಶ್ರೀಗಳ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಿದ ಅವರು, 'ಆ ಸ್ವಾಮೀಜಿಗಳು ಡೇಟಾವನ್ನು ಎಲ್ಲಿಂದ ಪಡೆದರು?' ಎಂದು ಪ್ರಶ್ನಿಸಿದರು.

ಏಪ್ರಿಲ್ 17ರಂದು ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ವಿಷಯವನ್ನು ಚರ್ಚಿಸಲಾಗುವುದು. ನಾವು ಏನೇ ಮಾಡಿದರೂ ವಿರೋಧ ಪಕ್ಷಗಳು ಎಂದಿಗೂ ನಮ್ಮನ್ನು ಒಪ್ಪುವುದಿಲ್ಲ ಎಂದು ಅವರು ಹೇಳಿದರು.

ಗೃಹ ಸಚಿವ ಪರಮೇಶ್ವರ ಹೇಳಿದ್ದೇನು?

ಈಮಧ್ಯೆ, ಜಾತಿ ಗಣತಿ ವರದಿಯ ಸುತ್ತಲಿನ ಚರ್ಚೆಯ ಕುರಿತು ಸೋಮವಾರ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಗೃಹ ಸಚಿವ ಜಿ ಪರಮೇಶ್ವರ, 'ನಾನು ಜಾತಿ ಜನಗಣತಿ ವರದಿಯನ್ನು ಓದಲು ಪ್ರಾರಂಭಿಸಿದ್ದೇನೆ. ಮೂರರಿಂದ ನಾಲ್ಕು ಪುಟಗಳನ್ನು ಮಾತ್ರ ಓದಿದ್ದೇನೆ. ಎರಡ್ಮೂರು ಪ್ರಮುಖ ವಿಷಯಗಳಿವೆ. ಜಾತಿ ಗಣತಿ ಪೂರ್ಣಗೊಂಡು ಮೂರು ವರ್ಷ ಕಳೆದಿವೆ. ವರದಿಯನ್ನು ಹೊರತರುವುದು ಕಠಿಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲಿನ ನಡುವೆಯೂ ಈ ವರದಿಯನ್ನು ಹೊರತಂದಿದ್ದಾರೆ' ಎಂದು ಹೇಳಿದರು.

'ಪರಿಸ್ಥಿತಿ ಹೇಗಿದೆ ಎಂಬುದರ ಬಗ್ಗೆ ತಿಳಿದಿದೆ. ವರದಿಯಿಂದ ಉಂಟಾಗುವ ಪರಿಣಾಮ, ನೀತಿಗಳು ಮತ್ತು ಕಾರ್ಯಕ್ರಮಗಳ ವಿವರಗಳ ಕುರಿತು ನಾನು ಮಾತನಾಡುವುದಿಲ್ಲ. ಇವುಗಳ ಬಗ್ಗೆ ಈ ಹಂತದಲ್ಲಿ ಮಾತನಾಡಲು ಸಾಧ್ಯವಿಲ್ಲ. ಈ ಹಂತದಲ್ಲಿ ನಾನು ಅದರ ಬಗ್ಗೆ ಏನಾದರೂ ಹೇಳಿದರೆ ಅದು ಸೂಕ್ತವಲ್ಲ' ಎಂದರು.

'ನಮಗೆ ಜಾತಿ ಗಣತಿ ಪ್ರತಿಗಳನ್ನು ನೀಡಲಾಗಿದೆ. ಏಪ್ರಿಲ್ 17ರಂದು ಈ ವಿಷಯದ ಬಗ್ಗೆ ಮಾತ್ರ ಚರ್ಚಿಸಲು ಸಚಿವರಿಗೆ ಸೂಚಿಸಲಾಗಿದೆ. ಚರ್ಚೆಯ ನಂತರ, ಸ್ವೀಕಾರದ ವಿಷಯ ಮತ್ತು ಇತರ ಸಮಸ್ಯೆಗಳು ಉದ್ಭವಿಸುತ್ತವೆ. ಇದು ಕೇವಲ ಆರಂಭ' ಎಂದು ತಿಳಿಸಿದರು.

ಈ ವರದಿಗೆ ವಿರೋಧದ ಬಗ್ಗೆ ಕೇಳಿದಾಗ, ಈ ಹಂತದಲ್ಲಿ ಏನನ್ನೂ ಹೇಳಲು ಆಗುವುದಿಲ್ಲ. ಟೀಕೆಗಳ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಸಮುದಾಯಗಳು ಮತ್ತು ನಾಯಕರಿಂದ ಅಭಿಪ್ರಾಯಗಳು ಬರುತ್ತಿವೆ. ಈ ವಿಷಯವನ್ನು ಸಂಪುಟದಲ್ಲಿ ಚರ್ಚಿಸಿ ಫಲಿತಾಂಶ ಏನಾಗುತ್ತದೆ ಎಂದು ನೋಡೋಣ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಉಗ್ರರೊಂದಿಗೆ ನಂಟು ಆರೋಪ: ಬಳ್ಳಾರಿ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

ಮಾನಸಿಕ ನೆಮ್ಮದಿಗೆ 10 ಸಾವಿರ ರೂ, ಸ್ವಯಂ ಆರೈಕೆಗೆ 10 ಸಾವಿರ: 22 ವರ್ಷದ ಬೆಂಗಳೂರು Gen Z ಯುವತಿಯ ಮಾಸಿಕ ಖರ್ಚುವೆಚ್ಚ ವೈರಲ್!

SCROLL FOR NEXT