ಕೆಎನ್ ರಾಜಣ್ಣ - ಜಿ ಪರಮೇಶ್ವರ 
ರಾಜ್ಯ

ಜಾತಿ ಗಣತಿ ವರದಿ ಅಂಗೀಕರಿಸುವ ಬಗ್ಗೆ ನಿರ್ಧಾರವಾಗಿಲ್ಲ ಎಂದ ರಾಜಣ್ಣ; 'ಇದು ಕೇವಲ ಆರಂಭ': ಪರಮೇಶ್ವರ

ಸಮುದಾಯಗಳು ಮತ್ತು ನಾಯಕರಿಂದ ಅಭಿಪ್ರಾಯಗಳು ಬರುತ್ತಿವೆ. ಈ ವಿಷಯವನ್ನು ಸಂಪುಟದಲ್ಲಿ ಚರ್ಚಿಸಿ ಫಲಿತಾಂಶ ಏನಾಗುತ್ತದೆ ಎಂದು ನೋಡೋಣ ಎಂದು ಹೇಳಿದರು.

ಬೆಂಗಳೂರು: ಜಾತಿ ಗಣತಿ ವರದಿಯನ್ನು ಸ್ವೀಕರಿಸುವ ನಿರ್ಧಾರವನ್ನು ಇನ್ನೂ ತೆಗೆದುಕೊಂಡಿಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಸೋಮವಾರ ಹೇಳಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಆಕ್ಷೇಪಣೆಗಳಿದ್ದರೆ ಅವುಗಳನ್ನು ಪರಿಶೀಲಿಸಲಾಗುವುದು. ಜಾತಿ ಗಣತಿ ವರದಿ ವಿರುದ್ಧ ಶ್ರೀಗಳ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಿದ ಅವರು, 'ಆ ಸ್ವಾಮೀಜಿಗಳು ಡೇಟಾವನ್ನು ಎಲ್ಲಿಂದ ಪಡೆದರು?' ಎಂದು ಪ್ರಶ್ನಿಸಿದರು.

ಏಪ್ರಿಲ್ 17ರಂದು ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ವಿಷಯವನ್ನು ಚರ್ಚಿಸಲಾಗುವುದು. ನಾವು ಏನೇ ಮಾಡಿದರೂ ವಿರೋಧ ಪಕ್ಷಗಳು ಎಂದಿಗೂ ನಮ್ಮನ್ನು ಒಪ್ಪುವುದಿಲ್ಲ ಎಂದು ಅವರು ಹೇಳಿದರು.

ಗೃಹ ಸಚಿವ ಪರಮೇಶ್ವರ ಹೇಳಿದ್ದೇನು?

ಈಮಧ್ಯೆ, ಜಾತಿ ಗಣತಿ ವರದಿಯ ಸುತ್ತಲಿನ ಚರ್ಚೆಯ ಕುರಿತು ಸೋಮವಾರ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಗೃಹ ಸಚಿವ ಜಿ ಪರಮೇಶ್ವರ, 'ನಾನು ಜಾತಿ ಜನಗಣತಿ ವರದಿಯನ್ನು ಓದಲು ಪ್ರಾರಂಭಿಸಿದ್ದೇನೆ. ಮೂರರಿಂದ ನಾಲ್ಕು ಪುಟಗಳನ್ನು ಮಾತ್ರ ಓದಿದ್ದೇನೆ. ಎರಡ್ಮೂರು ಪ್ರಮುಖ ವಿಷಯಗಳಿವೆ. ಜಾತಿ ಗಣತಿ ಪೂರ್ಣಗೊಂಡು ಮೂರು ವರ್ಷ ಕಳೆದಿವೆ. ವರದಿಯನ್ನು ಹೊರತರುವುದು ಕಠಿಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲಿನ ನಡುವೆಯೂ ಈ ವರದಿಯನ್ನು ಹೊರತಂದಿದ್ದಾರೆ' ಎಂದು ಹೇಳಿದರು.

'ಪರಿಸ್ಥಿತಿ ಹೇಗಿದೆ ಎಂಬುದರ ಬಗ್ಗೆ ತಿಳಿದಿದೆ. ವರದಿಯಿಂದ ಉಂಟಾಗುವ ಪರಿಣಾಮ, ನೀತಿಗಳು ಮತ್ತು ಕಾರ್ಯಕ್ರಮಗಳ ವಿವರಗಳ ಕುರಿತು ನಾನು ಮಾತನಾಡುವುದಿಲ್ಲ. ಇವುಗಳ ಬಗ್ಗೆ ಈ ಹಂತದಲ್ಲಿ ಮಾತನಾಡಲು ಸಾಧ್ಯವಿಲ್ಲ. ಈ ಹಂತದಲ್ಲಿ ನಾನು ಅದರ ಬಗ್ಗೆ ಏನಾದರೂ ಹೇಳಿದರೆ ಅದು ಸೂಕ್ತವಲ್ಲ' ಎಂದರು.

'ನಮಗೆ ಜಾತಿ ಗಣತಿ ಪ್ರತಿಗಳನ್ನು ನೀಡಲಾಗಿದೆ. ಏಪ್ರಿಲ್ 17ರಂದು ಈ ವಿಷಯದ ಬಗ್ಗೆ ಮಾತ್ರ ಚರ್ಚಿಸಲು ಸಚಿವರಿಗೆ ಸೂಚಿಸಲಾಗಿದೆ. ಚರ್ಚೆಯ ನಂತರ, ಸ್ವೀಕಾರದ ವಿಷಯ ಮತ್ತು ಇತರ ಸಮಸ್ಯೆಗಳು ಉದ್ಭವಿಸುತ್ತವೆ. ಇದು ಕೇವಲ ಆರಂಭ' ಎಂದು ತಿಳಿಸಿದರು.

ಈ ವರದಿಗೆ ವಿರೋಧದ ಬಗ್ಗೆ ಕೇಳಿದಾಗ, ಈ ಹಂತದಲ್ಲಿ ಏನನ್ನೂ ಹೇಳಲು ಆಗುವುದಿಲ್ಲ. ಟೀಕೆಗಳ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಸಮುದಾಯಗಳು ಮತ್ತು ನಾಯಕರಿಂದ ಅಭಿಪ್ರಾಯಗಳು ಬರುತ್ತಿವೆ. ಈ ವಿಷಯವನ್ನು ಸಂಪುಟದಲ್ಲಿ ಚರ್ಚಿಸಿ ಫಲಿತಾಂಶ ಏನಾಗುತ್ತದೆ ಎಂದು ನೋಡೋಣ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT