ರಾಜಭವನ (ಸಂಗ್ರಹ ಚಿತ್ರ) 
ರಾಜ್ಯ

ಸುಳ್ಳು ಕೇಸ್ ದಾಖಲಿಸಿ ಪತ್ನಿಯಿಂದ ಕಿರುಕುಳ ಆರೋಪ: ರಾಜಭವನದ ಮುಂದೆ ಪೆಟ್ರೋಲ್ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನ, ರಕ್ಷಣೆ

ಹೆಬ್ಬಾಳ ನಿವಾಸಿ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಜುಹೈಲ್ ಅಹ್ಮದ್ (26) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.

ಬೆಂಗಳೂರು: ಪತ್ನಿಯ ಕಿರುಕುಳಕ್ಕೆ ಬೇಸತ್ತ ಪತಿಯೊಬ್ಬ ರಾಜಭವನದ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೊಂದು ಭಾನುವಾರ ನಡೆದಿದೆ.

ಹೆಬ್ಬಾಳ ನಿವಾಸಿ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಜುಹೈಲ್ ಅಹ್ಮದ್ (26) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದು, ಸಂಜೆ 4.30 ರ ಸುಮಾರಿಗೆ, ರಾಜಭವನದ ಮುಂದೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಈ ವೇಳೆ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಭದ್ರತಾ ಸಿಬ್ಬಂದಿ ಇದನ್ನು ಗಮನಿಸಿ, ಬೆಂಕಿ ಹಚ್ಚಿಕೊಳ್ಳದಂತೆ ತಡೆದು, ರಕ್ಷಣೆ ಮಾಡಿದ್ದಾರೆ. ಬಳಿಕ ಹತ್ತಿರದ ಆಸ್ಪತ್ರೆಗೆ ಕರೆದೊಯ್ದು, ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.

ಜುಹೈಲ್ ಅಹ್ಮದ್ ಅವರು ಒಂದು ಲೀಟರ್ ಪೆಟ್ರೋಲ್'ನ್ನು ತಂದು ಮೈಮೇಲೆ ಸುರಿದುಕೊಂಡಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ವಿಚಾರಣೆಯ ಸಮಯದಲ್ಲಿ, ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಳ್ಳಲು ಬಯಸಿರುವುದಾಗಿ ಅಹ್ಮದ್ ಪೊಲೀಸರಿಗೆ ತಿಳಿಸಿದ್ದಾರೆ.

ನನ್ನ ಪತ್ನಿ ವರದಕ್ಷಿಣೆ ಕಿರುಕುಳ ಸೇರಿ ಹಲವು ರೀತಿಯ ಸುಳ್ಳು ಕೇಸ್‌ಗಳನ್ನು ಹಾಕಿ ಕಿರುಕುಳ ನೀಡುತಿದ್ದಾಳೆ. ಚಿಕ್ಕಬಳ್ಳಾಪುರ ಠಾಣೆಗೆ ಪತ್ನಿಯ ವಿರುದ್ಧ ದೂರು ನೀಡಲು ಹೋಗಿದ್ದೆ. ಆದರೆ, ಪೊಲೀಸರು ದೂರು ದಾಖಲಿಸಿಕೊಂಡಿಲ್ಲ. ಹೀಗಾಗಿ ನ್ಯಾಯ ಬೇಕು ಎಂದು ರಾಜಭವನದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದೆ ಎಂದು ಟೆಕ್ಕಿ ಹೇಳಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಏಷ್ಯಾ ಸಂಘರ್ಷ: ಭಾರತ ಸೇರಿ 5 ದೇಶಗಳಿಗೆ Hormuz ಮೂಲಕ ಸುರಕ್ಷಿತ ಸಂಚಾರಕ್ಕೆ Iran ಅನುಮತಿ!

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಇರಾನಿಯನ್ನರು ಸಾಯುತ್ತಿದ್ದಾಗ ನೀವೆಲ್ಲಿದ್ರಿ..: 'ಶಾಂತಿ-ಸಂಧಾನ' ವ್ಯಂಗ್ಯ ಮಾಡಿದ ನಟ Boman Irani ಚಳಿಬಿಡಿಸಿದ ನಟಿ Mandana Karimi!

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಉಗ್ರರೊಂದಿಗೆ ನಂಟು ಆರೋಪ: ಬಳ್ಳಾರಿ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ

SCROLL FOR NEXT