ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳು (ಸಂಗ್ರಹ ಚಿತ್ರ) 
ರಾಜ್ಯ

ಅಂಬೇಡ್ಕರ್‌ ಜಯಂತಿ, ಬುದ್ಧ ಪೂರ್ಣಿಮೆ: ಕಾರಾಗೃಹಗಳಲ್ಲಿ ಸಿಹಿ ವಿತರಣೆಗೆ ರಾಜ್ಯ ಸರ್ಕಾರ ಆದೇಶ

2014ರಿಂದ ವಿಶೇಷ ದಿನಗಳಲ್ಲಿ ಬಂದಿಗಳಿಗೆ ಸಿಹಿ ವಿತರಿಸುವ ಪದ್ಧತಿ ಜಾರಿಯಲ್ಲಿದೆ. ಗಣರಾಜ್ಯೋತ್ಸವ, ಯುಗಾದಿ, ರಂಜಾನ್‌, ಕ್ರಿಸ್‌ಮಸ್‌ ಸೇರಿ ರಾಷ್ಟ್ರೀಯ ಹಬ್ಬಗಳು ಹಾಗೂ ಪ್ರಮುಖ ಹಬ್ಬಗಳಂದು ಕೈದಿಗಳಿಗೆ ಸಿಹಿ ವಿತರಿಸಲಾಗುತ್ತಿದೆ.

ಬೆಂಗಳೂರು: ಪ್ರತಿ ವರ್ಷ ಡಾ. ಬಿ.ಆರ್‌. ಅಂಬೇಡ್ಕರ್‌ ಜನ್ಮದಿನ (ಏ.14) ಮತ್ತು ಬುದ್ಧ ಪೂರ್ಣಿಮೆಯಂದು (ಮೇ 12) ರಾಜ್ಯದ ಎಲ್ಲಾ ಕಾರಾಗೃಹಗಳಲ್ಲಿರುವ ಕೈದಿಗಳಿಗೆ ಸಿಹಿ ವಿತರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2014ರಿಂದ ವಿಶೇಷ ದಿನಗಳಲ್ಲಿ ಬಂದಿಗಳಿಗೆ ಸಿಹಿ ವಿತರಿಸುವ ಪದ್ಧತಿ ಜಾರಿಯಲ್ಲಿದೆ. ಗಣರಾಜ್ಯೋತ್ಸವ, ಯುಗಾದಿ, ರಂಜಾನ್‌, ಕ್ರಿಸ್‌ಮಸ್‌ ಸೇರಿ ರಾಷ್ಟ್ರೀಯ ಹಬ್ಬಗಳು ಹಾಗೂ ಪ್ರಮುಖ ಹಬ್ಬಗಳಂದು ಕೈದಿಗಳಿಗೆ ಸಿಹಿ ವಿತರಿಸಲಾಗುತ್ತಿದೆ.

ಇದರಂತೆ ಅಂಬೇಡ್ಕರ್‌ ಜಯಂತಿ, ಬುದ್ಧ ಪೂರ್ಣಿಮೆಯಂದೂ ಕಾರಾಗೃಹಗಳಲ್ಲಿ ಸಿಹಿ ವಿತರಣೆಗೆ ಆದೇಶ ಹೊರಡಿಸಲು ಸಾಮಾಜಿಕ ಹೋರಾಟಗಾರ ಟಿ.ನರಸಿಂಹಮೂರ್ತಿ ಅವರು ಸಿ.ಎಂ ಅವರಿಗೆ ಮನವಿ ಸಲ್ಲಿಸಿದ್ದರು.

ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಸಿ.ಎಂ ಟಿಪ್ಪಣಿ ಹೊರಡಿಸಿದ್ದರು. ಇದೀಗ ಗೃಹ ಇಲಾಖೆ ಅಂಬೇಡ್ಕರ್‌ ಜಯಂತಿ, ಬುದ್ಧ ಪೂರ್ಣಿಮೆಯಂದೂ ಕೈದಿಗಳಿಗೆ ಸಿಹಿ ವಿತರಿಸುವಂತೆ ಆದೇಶ ಹೊರಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

SCROLL FOR NEXT