ಸಂಗ್ರಹ ಚಿತ್ರ 
ರಾಜ್ಯ

ಕೊಪ್ಪಳದಲ್ಲಿ ಮೂಢ ನಂಬಿಕೆ: ಜ್ವರ ಕಡಿಮೆ ಮಾಡಲು ಮಕ್ಕಳಿಗೆ ಊದುಬತ್ತಿಯಿಂದ ಸುಡುವ ಪಾಲಕರು; ಈವರೆಗೆ 18 ಪ್ರಕರಣ ಬೆಳಕಿಗೆ

ಕನಕಗಿರಿ ತಾಲೂಕಿನ ವಿಠ್ಠಲಾಪುರದಲ್ಲಿ 7 ತಿಂಗಳ ಮಗುವಿಗೆ ಜ್ವರ ಕಡಿಮೆಯಾಗಲಿಲ್ಲ ಎಂದು ಮಗುವಿನ ತಾಯಿ ಡಿ. 4 ರಂದು ಊದುಬತ್ತಿಯಿಂದ ಸುಟ್ಟಿದ್ದಳು.

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ವಿಠಲಾಪುರದಲ್ಲಿ ಮಗುವಿಗೆ ಜ್ವರ ಬಂದಿದೆ ಎಂದು ತಾಯಿಯೊಬ್ಬಳು ಊದುಬತ್ತಿಯಿಂದ ಸುಟ್ಟಿದ್ದು, ಇದರಿಂದ ಮಗು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಅಂತಹದ್ದೇ 18 ಪ್ರಕರಣಗಳು ಬೆಳಕಿಗೆ ಬಂದಿವೆ.

ಕನಕಗಿರಿ ತಾಲೂಕಿನ ವಿಠ್ಠಲಾಪುರದಲ್ಲಿ 7 ತಿಂಗಳ ಮಗುವಿಗೆ ಜ್ವರ ಕಡಿಮೆಯಾಗಲಿಲ್ಲ ಎಂದು ಮಗುವಿನ ತಾಯಿ ಡಿ. 4 ರಂದು ಊದುಬತ್ತಿಯಿಂದ ಸುಟ್ಟಿದ್ದಳು. ಬಳಿಕ ಮಗುವಿಗೆ ಚಿಕಿತ್ಸೆ ಕೊಡಿಸಲು ಗಂಗಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಮಗು ಚಿಕಿತ್ಸೆ ಫಲಿಸದೆ ಮೃತಪಟ್ಟಿತ್ತು. ಬಳಿಕ ಫೆ.2ರಂದು ನಡೆದ ಶಿಶು ಮರಣ ತಡೆಯುವ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದಿತು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಜಿಲ್ಲಾಧಿಕಾರಿ ನಲಿನ್ ಅತುಲ್, ಕೂಡಲೇ ಪಾಲಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚಿಸಿದ ಮೇಲೆ ಕನಕಗಿರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.

ಈ ಸಂಬಂಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಆಸ್ಪತ್ರೆಯಲ್ಲಿ ಮಕ್ಕಳು ಗಾಯಗೊಂಡು ಚಿಕಿತ್ಸೆಗೆ ದಾಖಲಾಗಿರುವ ಪ್ರಕರಣಗಳನ್ನು ಪತ್ತೆ ಮಾಡಿದಾಗ, ಜ್ವರ ಬಂದ ಮಕ್ಕಳಿಗೆ ಪೋಷಕರು ಊದುಬತ್ತಿಯಿಂದ ಸುಟ್ಟಿರುವುದು ಗೊತ್ತಾಗಿದೆ. ಹೀಗಾಗಿ, ಈ ಕುರಿತು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಿಗೆ ಕ್ರಮವಹಿಸುವಂತೆ ಸೂಚಿಸಲಾಗಿದೆ. ಜಿಲ್ಲಾಧಿಕಾರಿ ಈ ಮಕ್ಕಳ ಬಗ್ಗೆ ನಿಗಾವಹಿಸಿ ಮತ್ತು ಪ್ರಕರಣವನ್ನು ದಾಖಲಿಸುವಂತೆ ಸೂಚಿಸಿದ್ದಾರೆ.

ಊದುಬತ್ತಿಯಿಂದ ಮಕ್ಕಳಿಗೆ ಸುಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯಇಲಾಖೆಯಿಂದ 18 ಪ್ರಕರಣಗಳು ದಾಖಲಾಗಿದೆ. ಈ ಬಗ್ಗೆ ಪರಿಶೀಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣ ಮಕ್ಕಳ ಸಹಾಯವಾಣಿಗೆ ಮಾಹಿತಿ ನೀಡಬೇಕೆಂದು ಸೂಚಿಸಿದ್ದಾರೆ.

ಜಗತ್ತು ಬಹಳ ಮುಂದೆ ಸಾಗುತ್ತಿದ್ದರೂ ವಿಠಲಾಪುರದ ಗ್ರಾಮಸ್ಥರು ಇನ್ನೂ ಮೂಢನಂಬಿಕೆಯನ್ನು ನಂಬುತ್ತಿದ್ದಾರೆ. ವೈದ್ಯಕೀಯ ಅಗತ್ಯಗಳನ್ನು ಅರ್ಥಮಾಡಿಕೊಳ್ಳದೆ ಮಕ್ಕಳನ್ನು ಕೊಲ್ಲುತ್ತಿದ್ದಾರೆ. ಜ್ವರ ಪೀಡಿತ ಮಕ್ಕಳಿಗೆ ಊದುಬತ್ತಿಯಿಂದ ಸುಡುವ ನಂಬಿಕೆ ಕೇಳಿ ನಮಗೆ ಆಶ್ಚರ್ಯವಾಯಿತು. ಈ ರೀತಿಯ ಸಲಹೆ ನೀಡುವವರನ್ನು ಬಂಧಿಸಬೇಕೆಂದು ಅಧಿಕಾರಿಗಳು ಹೇಳಿದ್ದಾರೆ.

ಕನಕಗಿರಿ ತಾಲ್ಲೂಕು ಆಡಳಿತದ ಅಧಿಕಾರಿಯೊಬ್ಬರು ಮಾತನಾಡಿ, ತಪ್ಪು ಮಾಡಿದವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ಜಿಲ್ಲಾಧಿಕಾರಿ ನಮಗೆ ಸೂಚಿಸಿದ್ದಾರೆ. ಸೂಚನೆ ಹಿನ್ನೆಲೆಯಲ್ಲಿ ಜಾಗೃತರಾಗಿದ್ದು, ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡತ್ತಿದ್ದೇವೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT