ತುಂಗಭದ್ರಾ ಜಲಾಶಯ 
ರಾಜ್ಯ

ತುಂಗಭದ್ರಾ ಜಲಾಶಯ: ಆಯಸ್ಸು ಮುಗಿದ ಕ್ರೆಸ್ಟ್​ಗೇಟ್​ ಬದಲಾವಣೆಗೆ ಸರ್ಕಾರ ಮುಂದು, ಟೆಂಡರ್'ಗೆ ಆಹ್ವಾನ

ಅಧಿಕಾರಿಗಳ ನಡೆ ರೈತರು ನಿರಾಳಗೊಳ್ಳುವಂತೆ ಮಾಡಿದ್ದು, ಕ್ರೆಸ್ಟ್​ಗೇಟ್ ಮರುಸ್ಥಾಪಿಸುವ ಕಾರ್ಯ ತಿಂಗಳೊಳಗೆ ಪ್ರಾರಂಭವಾಗುವ ನಿರೀಕ್ಷೆಗಳಿವೆ.

ಹೊಸಪೇಟೆ: ತುಂಗಭದ್ರಾ ಜಲಾಶಯದ 19ನೇ ಕ್ರೆಸ್ಟ್​ಗೇಟ್ ಕೊಚ್ಚಿಕೊಂಡು ಹೋಗಿ ಅಪಾರ ಪ್ರಮಾಣದ ನೀರು ವ್ಯರ್ಥವಾದ ಘಟನೆ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ, ಇದೀಗ ಆಯಸ್ಸು ಮುಗಿದಿರುವ ಕ್ರೆಸ್ಟ್​ಗೇಟ್'ಗಳ ಬದಲಾವಣೆಗೆ ಮುಂದಾಗಿದೆ.

ತಜ್ಞರ ತಂಡವು ಅಣೆಕಟ್ಟಿನ ಎಲ್ಲಾ ಕ್ರೆಸ್ಟ್ ಗೇಟ್‌ಗಳನ್ನು ಬದಲಾಯಿಸಲು ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಜಲಾಶಯದ ಮಂಡಳಿಯು ಇದೀಗ ಕ್ರೆಸ್ಟ್ ಗೇಟ್‌ ಬದಲಾವಣೆಗೆ ಟೆಂಡರ್'ಗೆ ಆಹ್ವಾನಿಸಿದೆ. ಅಧಿಕಾರಿಗಳ ನಡೆ ರೈತರು ನಿರಾಳಗೊಳ್ಳುವಂತೆ ಮಾಡಿದ್ದು, ಕ್ರೆಸ್ಟ್​ಗೇಟ್ ಮರುಸ್ಥಾಪಿಸುವ ಕಾರ್ಯ ತಿಂಗಳೊಳಗೆ ಪ್ರಾರಂಭವಾಗುವ ನಿರೀಕ್ಷೆಗಳಿವೆ.

ಕಳೆದ ವರ್ಷ ಆಗಸ್ಟ್‌ನಲ್ಲಿ, ಭಾರೀ ಮಳೆಯ ನಡುವೆ ನೀರಿನ ಒಳಹರಿವು ಹೆಚ್ಚಾಗಿದ್ದ ಪರಿಣಾಮ ಕ್ರೆಸ್ಟ್ ಗೇಟ್ ಸಂಖ್ಯೆ 19 ಕೊಚ್ಚಿಕೊಂಜು ಹೋಗಿತ್ತು. ಈ ವೇಳೆ ಅಪಾರ ಪ್ರಮಾಣದ ನೀರು ವ್ಯರ್ಥವಾಗಿತ್ತು. ಬಳಿಕ ಹೈಡ್ರೊ ಮೆಕ್ಯಾನಿಕಲ್ ಎಂಜಿನಿಯರಿಂಗ್‌ ತಜ್ಞ ಕನ್ನಯ್ಯ ನಾಯ್ಡು ನೇತೃತ್ವದ ತಂಡವು ತಾತ್ಕಾಲಿಕ ಗೇಟ್ ಅಳವಡಿಸಿ 50 ಟಿಎಂಸಿ ನೀರನ್ನು ಉಳಿಸಿತ್ತು.

ನಂತರ 33 ಕ್ರೆಸ್ಟ್ ಗೇಟ್‌ಗಳನ್ನು ಹೊಂದಿರುವ ಈ ಜಲಾಶಯದ ಕುರಿತು ಅಧ್ಯಯನ ಮಾಡಲು ರಾಜ್ಯ ಸರ್ಕಾರ ಕೇಂದ್ರ ಜಲ ಮಂಡಳಿಯ (ಸಿಡಬ್ಲ್ಯೂಸಿ) ಅಡಿಯಲ್ಲಿ ಸಮಿತಿಯನ್ನು ರಚಿಸಿತ್ತು. ಈ ಸಮಿತಿಯು ಇತ್ತೀಚೆಗೆ ತನ್ನ ವರದಿಯನ್ನು ಸಲ್ಲಿಸಿದ್ದು, ಎಲ್ಲಾ ಕ್ರೆಸ್ಟ್ ಗೇಟ್‌ಗಳನ್ನು ಬದಲಾಯಿಸಬೇಕು, ಹೊಸ ತಂತ್ರಜ್ಞಾನವನ್ನು ಪರಿಚಯಿಸಬೇಕು ಎಂದು ಶಿಫಾರಸು ಮಾಡಿತ್ತು.

ತುಂಗಭದ್ರಾ ಅಣೆಕಟ್ಟು ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, ಏಪ್ರಿಲ್ 11 ರಂದು ಹೊಸ ಕ್ರೆಸ್ಟ್ ಗೇಟ್ ಅಳವಡಿಕೆಗೆ ಮಂಡಳಿಯು ಟೆಂಡರ್ ಆಹ್ವಾನಿಸಿದ್ದು, ಈ ಕಾರ್ಯಕ್ಕೆ ರೂ.2 ಕೋಟಿ ವೆಚ್ಚವಾಗಲಿದೆ ಎಂದು ಹೇಳಿದ್ದಾರೆ.

ಪ್ರಸ್ತುತ, ಅಣೆಕಟ್ಟಿನಲ್ಲಿ 105 ಟಿಎಂಸಿ ನೀರು ಸಂಗ್ರಹವಾಗಿದ್ದು, ಒಪ್ಪಂದದ ಪ್ರಕಾರ, ನಾವು ಇತರ ಎರಡು ರಾಜ್ಯಗಳಿಗೆ ನೀರನ್ನು ಬಿಡುಗಡೆ ಮಾಡುತ್ತಿದ್ದೇವೆ. ಪ್ರಸ್ತುತ ಹಾನಿಗೊಳಗಾಗಿರುವ ಕ್ರೆಸ್ಟ್ ಗೇಟ್ ಬದಲಾಯಿಸುತ್ತಿದ್ದು, ಭವಿಷ್ಯದಲ್ಲಿ, ಎಲ್ಲಾ ಕ್ರೆಸ್ಟ್ ಗೇಟ್‌ಗಳನ್ನು ಹಂತ ಹಂತವಾಗಿ ಬದಲಾಯಿಸಲಾಗುವುದು. ಹೊಸ ತಂತ್ರಜ್ಞಾನಗಳನ್ನು ಅಳವಡಿಸಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT