ಮತಾಂತರ 
ರಾಜ್ಯ

ಮತಾಂತರಕ್ಕೆ ಒಪ್ಪದ ಪತ್ನಿ-ಅತ್ತೆಯ ಮೇಲೆ ಮಾರಣಾಂತಿಕ ಹಲ್ಲೆ: 9 ಮಂದಿ ವಿರುದ್ಧ ಪ್ರಕರಣ ದಾಖಲು

ಕಳೆದ ನಾಲ್ಕು ವರ್ಷಗಳಿಂದ ಕಿರುಕುಳ ನೀಡುತ್ತಿದ್ದಾರೆ. ಈ ಒತ್ತಡ ಸಹಿಸಲಾಗದೆ ಸಹೋದರಿ ಆತ್ಮಹತ್ಯೆಗೂ ಯತ್ನಿಸಿದ್ದಳು. ನಂತರ ಕೆಆರ್ಎಸ್ ಜಲಾಶಯದ ಬಳಿ ಪತ್ತೆಯಾಗಿದ್ದಳು. ಈ ಸಂಬಂಧ ಪಾಂಡವಪುರ ಪೊಲೀಸರಿಗೆ ಈ ಹಿಂದೆ ದೂರು ದಾಖಲಾಗಿತ್ತು.

ಮಂಡ್ಯ: ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳಲು ನಿರಾಕರಿಸಿದ ಪತ್ನಿ ಹಾಗೂ ಅತ್ತೆಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯಿಸಿ ಶ್ರೀಕಾಂತ್‌ ಎಂಬುವರು ತನ್ನ ಪತ್ನಿ ಲಕ್ಷ್ಮೀ ಮತ್ತು ಅತ್ತೆ ಮೇಲೆ ರಾಡ್​ನಿಂದ ಹಲ್ಲೆ ಮಾಡಿದ್ದಾರೆಂದು ತಿಳಿದುಬಂದಿದೆ.

ಈ ಸಂಬಂಧ ಲಕ್ಷೀ ಅವರ ಸಹೋದರ ರವಿಕಿರಣ್ ಹಾಗೂ ಇತರೆ ಕುಟುಂಬ ಸದಸ್ಯರೂ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನಲ್ಲಿ ಸಹೋದರಿ ಲಕ್ಷ್ಮೀ 15 ವರ್ಷಗಳ ಹಿಂದೆ ಪಾಲಹಳ್ಳಿಯ ಶ್ರೀಕಾಂತ್ ಎಂಬುವವರನ್ನು ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದರು. ಕೆಲ ವರ್ಷಗಳ ಬಳಿಕ ಶ್ರೀಕಾಂತ್, ಅವರ ಇಬ್ಬರು ಪುತ್ರರು, ತಾಯಿ ಕೃಷ್ಣವೇಣಿ ಮತ್ತು ಹಿರಿಯ ಸಹೋದರರಾದ ಹರೀಶ್ ಮತ್ತು ಪ್ರಶಾಂತ್ ಅವರೊಂದಿಗೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡರು. ಇದೀಗ ಶ್ರೀಕಾಂತ್ ಜಾನ್ ಎಂದು ಹೆಸರು ಬದಲಿಸಿಕೊಂಡಿದ್ದು, ಅವರ ತಾಯಿ ಕೃಷ್ಣವೇಣಿ ಅವರನ್ನು ಮೇರಿ ಎಂದು ಕರೆಯಲಾಗುತ್ತಿದೆ.

ತಾವು ಮತಾಂತರಗೊಂಡ ಬಳಿಕ ಸಹೋದರಿಯನ್ನೂ ಮತಾಂತರಗೊಳ್ಳುವಂತೆ ಒತ್ತಡ ಹಾಕುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಕಿರುಕುಳ ನೀಡುತ್ತಿದ್ದಾರೆ. ಈ ಒತ್ತಡ ಸಹಿಸಲಾಗದೆ ಸಹೋದರಿ ಆತ್ಮಹತ್ಯೆಗೂ ಯತ್ನಿಸಿದ್ದಳು. ನಂತರ ಕೆಆರ್ಎಸ್ ಜಲಾಶಯದ ಬಳಿ ಪತ್ತೆಯಾಗಿದ್ದಳು. ಈ ಸಂಬಂಧ ಪಾಂಡವಪುರ ಪೊಲೀಸರಿಗೆ ಈ ಹಿಂದೆ ದೂರು ದಾಖಲಾಗಿತ್ತು.

ಈ ನಡುವೆ ಶ್ರೀಕಾತ್ ಕುಟುಂಬಸ್ಥರು ಸಹೋದರಿ, ತಾಯಿ ಹಾಗೂ ನನ್ನ ಮೇಲೆ ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿದ್ದು, ತಲೆಗೆ ಗಾಯಗಳಾಗಿವೆ. ಶ್ರೀರಂಗಪಟ್ಟಣದ ಆಸ್ಪತ್ರೆಯಲ್ಲಿ ಪಡೆಯಲಾಗುತ್ತಿದೆ ಎಂದು ಹೇಳಿದ್ದಾರೆ.

ದೂರು ಸಂಬಂಧ ಪೊಲೀಸರು ಶ್ರೀಕಾಂತ್ (ಜಾನ್), ಹರೀಶ್, ರವಿ, ಸುಬ್ರಹ್ಮಣ್ಯ, ಪ್ರಭಾ, ಪ್ರಶಾಂತ್, ನಾಗಿಣಿ, ಕೃಷ್ಣಕುಮಾರ್ ಮತ್ತು ಸಾಗರ್ ಎಂಬುವವರ ವಿರುದ್ಧ ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಮಧ್ಯೆ, ಶ್ರೀರಂಗಪಟ್ಟಣ ಮತ್ತು ಪಾಂಡವಪುರದ ಹಲವಾರು ಹಿಂದೂ ಸಂಘಟನೆಗಳು ರವಿಕಿರಣ್ ಅವರ ಕುಟುಂಬಕ್ಕೆ ಬೆಂಬಲ ವ್ಯಕ್ತಪಡಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್