ಬೆಂಗಳೂರು ಮಳೆ  
ರಾಜ್ಯ

ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಭಾರೀ ಮಳೆ ಸಾಧ್ಯತೆ: IMD

ಬಿಸಿಲ ಬೇಗೆಯಿಂದ ಬಳಲುತ್ತಿದ್ದ ಬೆಂಗಳೂರಿಗೆ ಸೋಮವಾರ ಧಾರಾಕಾರ ಮಳೆ ಸುರಿದು ತಂಪೆರೆಯಿತು. ಮಧ್ಯಾಹ್ನದಿಂದಲೇ ನಗರದಾದ್ಯಂತ ಮೋಡ ಕವಿದ ವಾತಾವರಣವಿತ್ತು. ಸಂಜೆ 5ರ ಹೊತ್ತಿಗೆ ಏಕಾಏಕಿ ಆರಂಭವಾದ ಮಳೆ ಕೆಲವೆಡೆ ಅರ್ಧ ಗಂಟೆ, ಕೆಲವೆಡೆ ಒಂದು ಗಂಟೆ ಕಾಲ ಧೋ ಎಂದು ಸುರಿಯಿತು.

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಒಂದು ವಾರ ಸಾಧಾರಣದಿಂದ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಆಂಧ್ರಪ್ರದೇಶದ ಕರಾವಳಿಯ ಮಧ್ಯಭಾಗಗಳು ಸೇರಿ ವಿವಿಧೆಡೆ ಚಂಡಮಾರುತದ ಪರಿಚಲನೆ ಸರಾಸರಿ ಸಮುದ್ರಮಟ್ಟದಿಂದ 0.9 ಕಿ.ಮೀ. ಎತ್ತರದಲ್ಲಿದೆ. ಪಶ್ಚಿಮ ರಾಜಸ್ಥಾನದಿಂದ ಮನ್ನಾರ್ ಕೊಲ್ಲಿಯವರೆಗೆ ಪೂರ್ವ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಮರಾಠವಾಡ ಮತ್ತು ಕರ್ನಾಟಕದ ಒಳನಾಡು ಮತ್ತು ತಮಿಳುನಾಡಿನಾದ್ಯಂತ ಚಂಡಮಾರುತದ ಪರಿಚಲನೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿದೆ.

ಆಗ್ನೇಯ ಮಧ್ಯಪ್ರದೇಶದಿಂದ ವಿದರ್ಭದಾದ್ಯಂತ ತೆಲಂಗಾಣದ ಮಧ್ಯ ಭಾಗಗಳವರೆಗೆ 0.9 ಕಿ.ಮೀ ಎತ್ತರದಲ್ಲಿ ಒಂದು ತಗ್ಗು ನಿರ್ಮಾಣವಾಗಿದೆ. ಕರಾವಳಿ ಆಂಧ್ರಪ್ರದೇಶ, ಯಾಣಂ ಮತ್ತು ನೆರೆಯ ಪ್ರದೇಶಗಳ ಮಧ್ಯ ಭಾಗಗಳಲ್ಲಿ ಮೇಲ್ಭಾಗದ ಮೇಲಿನ ವಾಯು ಚಂಡಮಾರುತದ ಪ್ರಸರಣವಿದೆ. ಇದರಿಂದಾಗಿ ರಾಜ್ಯದ ವಿವಿಧೆಡೆ ಮಳೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾವೇರಿ, ಚಿಕ್ಕಮಗಳೂರು, ಕೊಡಗು, ಕೋಲಾರ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ರಾಯಚೂರು. ಕೊಪ್ಪಳ, ಕಲಬುರಗಿ, ಯಾದಗಿರಿ, ಧಾರವಾಡ ಮತ್ತು ಬೆಳಗಾವಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಇನ್ನು ಬಿಸಿಲ ಬೇಗೆಯಿಂದ ಬಳಲುತ್ತಿದ್ದ ಬೆಂಗಳೂರಿಗೆ ಸೋಮವಾರ ಧಾರಾಕಾರ ಮಳೆ ಸುರಿದು ತಂಪೆರೆಯಿತು. ಮಧ್ಯಾಹ್ನದಿಂದಲೇ ನಗರದಾದ್ಯಂತ ಮೋಡ ಕವಿದ ವಾತಾವರಣವಿತ್ತು. ಸಂಜೆ 5ರ ಹೊತ್ತಿಗೆ ಏಕಾಏಕಿ ಆರಂಭವಾದ ಮಳೆ ಕೆಲವೆಡೆ ಅರ್ಧ ಗಂಟೆ, ಕೆಲವೆಡೆ ಒಂದು ಗಂಟೆ ಕಾಲ ಧೋ ಎಂದು ಸುರಿಯಿತು.

ಧಾನಸೌಧ, ಕೆ.ಆರ್‌. ಸರ್ಕಲ್‌, ಕಾರ್ಪೊರೇಷನ್‌, ಶಾಂತಿನಗರ, ಮೆಜೆಸ್ಟಿಕ್‌, ಮೈಸೂರು ಬ್ಯಾಂಕ್‌ ವೃತ್ತದ ಸುತ್ತಮುತ್ತ ಹದಿನೈದು ನಿಮಿಷಕ್ಕೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿಯಿತು. ಮಳೆಯಿಂದಾಗಿ ಯಾವುದೇ ಅಹಿತಕರ ಘಟನೆಗಳು ನಗರದಲ್ಲಿ ವರದಿಯಾಗಿಲ್ಲ. ಆದರೆ ಸಂಪಂಗಿರಾಮ್ ನಗರದಲ್ಲಿ ಮರವೊಂದು ಧರೆಗುರುಳಿ ಬಿದ್ದಿದ್ದು ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಜೆ 7.30 ರವರೆಗೆ, ನಗರದಲ್ಲಿ 3.4 ಮಿಮೀ ಮಳೆಯನ್ನು ದಾಖಲಿಸಿದ್ದರೆ, ಎಚ್‌ಎಎಲ್ ವಿಮಾನ ನಿಲ್ದಾಣದ ವೀಕ್ಷಣಾಲಯದಲ್ಲಿ 0.2 ಮಿಮೀ ಮಳೆ ದಾಖಲಾಗಿದೆ. ಕೆಐಎಯಲ್ಲಿ 0.1 ಮಿಮೀ ಮಳೆ ದಾಖಲಾಗಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT