ಬಸನಗೌಡ ಪಾಟೀಲ್ ಯತ್ನಾಳ್ 
ರಾಜ್ಯ

ಮಹಮ್ಮದ್ ಪೈಗಂಬರ್ ಬಗ್ಗೆ ಮಾತನಾಡಿಲ್ಲ, ನನ್ನನ್ನು ಮುಗಿಸಲು ಹೋದರೆ ಇಡೀ ರಾಜ್ಯ ಹೊತ್ತಿ ಉರಿಯಲಿದೆ: ಯತ್ನಾಳ್

ಮಾತಿನ ವೇಗದಲ್ಲಿ ತಪ್ಪಾಗಿದೆ. ನಾನು ಜಿನ್ನಾ ಅವರನ್ನು ಉಲ್ಲೇಖಿಸಲು ಬಯಸಿದ್ದೆ. ಆದರೆ, ಪ್ರವಾದಿ ಮುಹಮ್ಮದ್ ಅವರ ಹೆಸರು ಬಂದು ಬಿಟ್ಟಿತು. ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ನನ್ನ ಮಾತುಗಳನ್ನು ತಪ್ಪಾಗಿ ನಿರೂಪಿಸಿದೆ.

ಬೆಂಗಳೂರು: ನಾನು ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಮಾತನಾಡಿಲ್ಲ. ಮಹಮ್ಮದ್ ಅಲಿ ಜಿನ್ನಾ ಎನ್ನಲು ಹೋಗಿ ಮಾತಿನ ವೇಗದಲ್ಲಿ ತಪ್ಪಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರು ಸೋಮವಾರ ಸ್ಪಷ್ಟನೆ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾತಿನ ವೇಗದಲ್ಲಿ ತಪ್ಪಾಗಿದೆ. ನಾನು ಜಿನ್ನಾ ಅವರನ್ನು ಉಲ್ಲೇಖಿಸಲು ಬಯಸಿದ್ದೆ. ಆದರೆ, ಪ್ರವಾದಿ ಮುಹಮ್ಮದ್ ಅವರ ಹೆಸರು ಬಂದು ಬಿಟ್ಟಿತು. ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ನನ್ನ ಮಾತುಗಳನ್ನು ತಪ್ಪಾಗಿ ನಿರೂಪಿಸಿದೆ. ಇದು ಕೋಮು ಉದ್ವಿಗ್ನತೆಯನ್ನು ಹುಟ್ಟುಹಾಕುವ ಪ್ರಯತ್ನ. ವಿಜಯಪುರದಲ್ಲಿ ಗೂಂಡಾಗಿರಿ, ಹಫ್ತಾ ವಸೂಲಿ ಮಾಡಲು ಆಗದೇ ಹತಾಶರಾಗಿರುವ ಕಾಂಗ್ರೆಸಿಗರು ಪೈಗಂಬರ್‌ಗೆ ನೆಪ ಮಾಡಿಕೊಂಡು, ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ಹಿಂದೂ ಧರ್ಮದಲ್ಲಿ ಮತ್ತೊಂದು ಧರ್ಮವನ್ನು ಹೀಯಾಳಿಸುವ ಸಂಸ್ಕೃತಿ ಇಲ್ಲ. ನಮ್ಮ ಗುರು, ಹಿರಿಯರು ಕಲಿಸಿಲ್ಲ ಎಂದು ಹೇಳಿದರು.

ನನ್ನನ್ನು ಮುಗಿಸುವುದಾಗಿ ಬೆದರಿಕೆ ಒಡ್ಡಿರುವ ಆಡಿಯೋ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ, ಇದರ ಹಿಂದೆ ಯಾರಿದ್ದಾರೆ ಎನ್ನುವುದು ಶೀಘ್ರ ಗೊತ್ತಾಗಲಿದೆ. ನನ್ನನ್ನು ಮುಗಿಸಲು ಯಾರಿಗೂ ಆಗಲ್ಲ, ಇಡೀ ಕರ್ನಾಟಕದ ಹಿಂದೂಗಳು ನನ್ನ ಜೊತೆ ಇದ್ದಾರೆ. ನನ್ನನ್ನು ಮುಗಿಸಲು ಹೋದರೆ ರಾಜ್ಯದಲ್ಲಿ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ತಿಳಿಸಿದರು.

ಬಿಜೆಪಿಯ ಜನಕ್ರೋಶ ಯಾತ್ರೆ ಕುರಿತು ಮಾತನಾಡಿ, ಕಾಂಗ್ರೆಸ್ ಸರ್ಕಾರ ಜನರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಫಲವಾಗಿದೆ. ಗ್ಯಾಸ್ ಮತ್ತು ಪೆಟ್ರೋಲ್ ಬೆಲೆಗಳು ಹೆಚ್ಚಾಗಿದೆ ಎಂದರು.

ಗುತ್ತಿಗೆದಾರರು ಕಾಂಗ್ರೆಸ್ ಸರ್ಕಾರ ಭಾರೀ ಕಮಿಷನ್ ಪಡೆದು ಬಿಲ್‌ಗಳನ್ನು ತೆರವುಗೊಳಿಸುತ್ತಿಲ್ಲ ಎಂದು ಆರೋಪಿಸುತ್ತಿದ್ದಾರೆ. ಈ ಬಗ್ಗೆ ತನಿಖೆಯಾಗಲಿ, ಸತ್ಯಾಂಶ ಹೊರಬರಲಿ ಎಂದು ಹೇಳಿದರು. ಜಾತಿ ಜನಗಣತಿ ಸಮೀಕ್ಷೆಯನ್ನು ಟೀಕಿಸಿದ ಅವರು, ವರದಿ ದೋಷಪೂರಿತವಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

ಯುವನಿಧಿಗೆ ನಿರುದ್ಯೋಗಿ ವಿದ್ಯಾರ್ಥಿಗಳ ನೋಂದಣಿ ನೋಡ್ತಿದ್ದರೆ ಆತಂಕಕಾರಿ, ಶಿಕ್ಷಣದಲ್ಲಿ ಬದಲಾವಣೆ ಅಗತ್ಯ: ವಿಟಿಯು ಉಪಕುಲಪತಿ

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ಹರಿಬಿಟ್ಟ ಆರೋಪಿಗಳು: ಹುಬ್ಬಳ್ಳಿ ಪೊಲೀಸರಿಂದ ಮೂವರ ಬಂಧನ!

ದಾವಣಗೆರೆ: ಮಕ್ಕಳ ಹಾದಿ ಹಿಡಿದ ಬಿಜೆಪಿ ಮುಖಂಡ; ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

SCROLL FOR NEXT