ಒಕ್ಕಲಿಗರ ಸಂಘದ ನಾಯಕರು 
ರಾಜ್ಯ

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ

ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ ಅವರು, ಜಾತಿ ಗಣತಿ ವರದಿಯನ್ನು ಹಿಂಪಡೆಯಬೇಕು ಎಂದರು.

ಬೆಂಗಳೂರು: ರಾಜ್ಯ ಸರ್ಕಾರ ಇತ್ತೀಚೆಗೆ ಸಚಿವ ಸಂಪುಟದಲ್ಲಿ ಮಂಡಿಸಿದ ವಿವಾದಾತ್ಮಕ ಜಾತಿ ಗಣತಿ(ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಇದೀಗ ರಾಜ್ಯ ಒಕ್ಕಲಿಗರ ಸಂಘ ಈ ವರದಿ ಜಾರಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ ಅವರು, ಜಾತಿ ಗಣತಿ ವರದಿಯನ್ನು ಹಿಂಪಡೆಯಬೇಕು. ಒಂದು ವೇಳೆ ವರದಿ ಜಾರಿಗೊಳಿಸಿದರೆ ಸರ್ಕಾರ ಉಳಿಯುವುದಿಲ್ಲ ಮತ್ತು ಕರ್ನಾಟಕ ಬಂದ್​ ರೀತಿಯ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಸರ್ಕಾರ ಕಾಂತರಾಜು ಆಯೋಗದ ವರದಿ ಜಾರಿ ಮಾಡಲು ಹೊರಟಿದೆ. ಆದರೆ ಅದರ ವಿರುದ್ದ ಹೋರಾಟ ಮಾಡಲು ಒಕ್ಕಲಿಗ ಸಂಘದ ಕಾರ್ಯಕಾರಿ ಸಮಿತಿ ನಿರ್ಧರಿಸಿದೆ. ಮುಂದಿನ ಹಂತದಲ್ಲಿ ಯಾವ ರೀತಿ ಹೋರಾಟ ಮಾಡಬೇಕು ಎಂಬುದರ ಬಗ್ಗೆ ಇಂದು ಚರ್ಚಿಸಲಾಗಿದೆ ಎಂದರು.

ಕಾಂತರಾಜು ಅವರ ವರದಿ ಆರೋಗ್ಯಕರವಾಗಿಲ್ಲ. 10 ವರ್ಷಗಳ ಹಿಂದೆ ಸಮೀಕ್ಷೆ ಮಾಡಿದ ವರದಿಯನ್ನ ಈಗ ಜಾರಿಗೊಳಿಸಲು ಮುಂದಾಗಿದೆ. ಈ ವರದಿಯಲ್ಲಿ ಒಕ್ಕಲಿಗ ಜನಾಂಗವನ್ನ ಕೇವಲ 61ಲಕ್ಷ ತೋರಿಸಲಾಗಿದೆ ಎಂದರು.

ರಾಜ್ಯದ 224 ಕ್ಷೇತ್ರದಲ್ಲಿ ಒಕ್ಕಲಿಗರು ಕೇವಲ 61ಲಕ್ಷ ಮಾತ್ರ ಇರಲು ಸಾಧ್ಯವೇ ಇಲ್ಲ. ಒಂದೊಂದು ತಾಲೂಕಲ್ಲೂ 60 ಸಾವಿರದಿಂದ 1ಲಕ್ಷಕ್ಕೂ ಹೆಚ್ಚು ಒಕ್ಕಲಿಗ ಸಮುದಾಯದ ಜನರಿದ್ದಾರೆ. ಆದರೆ ಈ ವರದಿಯಲ್ಲಿ ನಮ್ಮ ಜನಾಂಗವನ್ನ 6ನೇ ಸ್ಥಾನದಲ್ಲಿ ಇರಿಸಲಾಗಿದೆ. ಇದು ಬೇರೆ ಜನಾಂಗಕ್ಕೆ ಮೀಸಲಾತಿ ನೀಡುವ ಉದ್ದೇಶದಿಂದ ಮಾಡುವ ಹುನ್ನಾರ. ಹೀಗಾಗಿ ನಾವು ಕರ್ನಾಟಕ ಬಂದ್ ಮಾಡುವುದರ ಮೂಲಕ ಹೋರಾಟ ಮಾಡಬೇಕಾಗುತ್ತೆ. ಜಾತಿ ಗಣತಿ ವರದಿಯಲ್ಲಿ ಸಾಕಷ್ಟು ಜನಾಂಗಕ್ಕೆ ಅನ್ಯಾಯವಾಗಿದೆ. ಹೀಗಾಗಿ ಇದನ್ನು ಹಿಂಪಡೆಯಬೇಕು ಮತ್ತು ಮರುಪರಿಶೀಲನೆ ಮಾಡಬೇಕು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT