ಸಚಿವ ಸತೀಶ್ ಜಾರಕಿಹೊಳಿ 
ರಾಜ್ಯ

ಜಾತಿಗಣತಿ ಚರ್ಚೆಗೆ ಪ್ರತ್ಯೇಕ ಅಧಿವೇಶನದ ಅಗತ್ಯವಿದೆ: ಸಚಿವ ಸತೀಶ್‌ ಜಾರಕಿಹೊಳಿ

ಸಮೀಕ್ಷೆಯ ದತ್ತಾಂಶ ಅಥವಾ ಅಧ್ಯಯನದ ಬಗ್ಗೆ ಯಾವುದೇ ಸಂದೇಹಗಳು ಅಥವಾ ಆರೋಪಗಳನ್ನು ಶಾಸಕಾಂಗದಲ್ಲೇ ಚರ್ಚಿಸಬೇಕು. ವರದಿಯ ಕುರಿತು ಸದನದೊಳಗೆ ಸಮಗ್ರ ಚರ್ಚೆ ನಡೆದರೆ ಸಮೀಕ್ಷೆಯ ಸತ್ಯಾಸತ್ಯತೆಯನ್ನು ಯಾರೂ ಅನುಮಾನಿಸುವುದಿಲ್ಲ.

ಬೆಳಗಾವಿ: ‘2015ರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ಯ ವರದಿ ಕುರಿತು ಚರ್ಚಿಸಲು ಪ್ರತ್ಯೇಕ ವಿಧಾನಸಭೆಯ ವಿಶೇಷ ಅಧಿವೇಶನದ ಅಗತ್ಯವಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಂಗಳವಾರ ಹೇಳಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮೀಕ್ಷೆಯ ದತ್ತಾಂಶ ಅಥವಾ ಅಧ್ಯಯನದ ಬಗ್ಗೆ ಯಾವುದೇ ಸಂದೇಹಗಳು ಅಥವಾ ಆರೋಪಗಳನ್ನು ಶಾಸಕಾಂಗದಲ್ಲೇ ಚರ್ಚಿಸಬೇಕು. ವರದಿಯ ಕುರಿತು ಸದನದೊಳಗೆ ಸಮಗ್ರ ಚರ್ಚೆ ನಡೆದರೆ ಸಮೀಕ್ಷೆಯ ಸತ್ಯಾಸತ್ಯತೆಯನ್ನು ಯಾರೂ ಅನುಮಾನಿಸುವುದಿಲ್ಲ. ರಾಜ್ಯದ ಜನರು ಕೂಡ ಇದರ ಬಗ್ಗೆ ತಿಳಿದುಕೊಳ್ಳುತ್ತಾರೆ ಎಂದು ಹೇಳಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆದಿದ್ದ ಒಕ್ಕಲಿಗರ ಸಭೆಯ ಕುರಿತ ಪ್ರಶ್ನೆಗೆ ಉತ್ತರಿಸಿ ಶಿವಕುಮಾರ್ ಒಕ್ಕಲಿಗ ಸಮುದಾಯದ ನಾಯಕರಾಗಿರುವುದರಿಂದ ವರದಿ ಕುರಿತು ಚರ್ಚಿಸಲು ಒಕ್ಕಲಿಗರ ಸಭೆ ಕರೆದಿದ್ದಾರೆ. ಇದರಲ್ಲಿ ಯಾವುದೇ ತಪ್ಪಿಲ್ಲ ಎಂದು ತಿಳಿಸಿದರು.

ಬಿಜೆಪಿ ಮತ್ತು ಜೆಡಿಎಸ್ ಜನಕ್ರೋಶ ಯಾತ್ರೆಯ ಬಗ್ಗೆ ಮಾತನಾಡಿ, ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಸೇರಿದಂತೆ ಹಲವು ವಸ್ತುಗಳ ಬೆಲೆಗಳನ್ನು ಹೆಚ್ಚಿಸಿದ್ದು ಕೇಂದ್ರ ಸರ್ಕಾರ. ಹೀಗಿರುವಾಗ ನಮ್ಮ ಸರ್ಕಾರದ ವಿರುದ್ಧ ಜನಕ್ರೋಶ ಯಾತ್ರೆ ನಡೆಸುವ ಬಿಜೆಪಿಯ ನಿರ್ಧಾರ ಎಷ್ಟು ಸರಿ? ಬಿಜೆಪಿ ಪ್ರತಿಭಟಿಸಲು ಬಯಸಿದರೆ, ಕೇಂದ್ರದ ವಿರುದ್ಧವೂ ಪ್ರತಿಭಟನೆ ನಡೆಸಬೇಕು ಎಂದು ವ್ಯಂಗ್ಯವಾಡಿದರು.

ಬೆಳಗಾವಿ ನಗರಕ್ಕೆ ಪ್ರಸ್ತಾವಿತ ಎಲಿವೇಟೆಡ್ ಕಾರಿಡಾರ್, ಡಿಸಿ ಕಚೇರಿ ನಿರ್ಮಾಣ, ನೀರಾವರಿ ಸಮಸ್ಯೆಗಳು, ಹಿಡಕಲ್ ಅಣೆಕಟ್ಟಿನಲ್ಲಿ ಕುಡಿಯುವ ನೀರಿನ ಸಂಗ್ರಹಣೆ ಮತ್ತು ಅರಣ್ಯ ಇಲಾಖೆಯ ಕೆಲವು ಅಭಿವೃದ್ಧಿ ಕಾರ್ಯಗಳ ಕುರಿತು ಮಂಗಳವಾರ ಅಧಿಕಾರಿಗಳ ಸಭೆ ನಡೆಸಲಾಗಿದೆ. ಕುಡಿಯುವ ಉದ್ದೇಶಗಳಿಗಾಗಿ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರನ್ನು ಬಿಡುಗಡೆ ಮಾಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಪತ್ರ ಬರೆದಿದ್ದಾರೆ. ನೀರು ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಮಾಡಿದ ಮನವಿಗೆ ಮಹಾರಾಷ್ಟ್ರ ಸರ್ಕಾರ ಸ್ಪಂದಿಸುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT