ಲಾರಿ ಮುಷ್ಕರದ ಚಿತ್ರ 
ರಾಜ್ಯ

ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಂಧಾನ ಸಭೆ ಯಶಸ್ವಿ; ಲಾರಿ ಮುಷ್ಕರ ವಾಪಸ್

ಬಹುತೇಕ ಬೇಡಿಕೆಗಳನ್ನು ಈಡೇರಿಸುವುದಾಗಿ ಸಚಿವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಲಾರಿ ಮಾಲೀಕರು ಮುಷ್ಕರವನ್ನು ಹಿಂಪಡೆದಿದ್ದಾರೆ.

ಬೆಂಗಳೂರು: ಡೀಸೆಲ್ ದರ ಇಳಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘ ಕೊನೆಗೂ ಮುಷ್ಕರವನ್ನು ವಾಪಸ್ ತೆಗೆದುಕೊಂಡಿದೆ.

ಲಾರಿ ಮಾಲೀಕರ ಬೇಡಿಕೆ ಈಡೇರಿಸುವ ಸಂಬಂಧ ಇಂದು ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ. ಬಹುತೇಕ ಬೇಡಿಕೆಗಳನ್ನು ಈಡೇರಿಸುವುದಾಗಿ ಸಚಿವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಲಾರಿ ಮಾಲೀಕರು ಮುಷ್ಕರವನ್ನು ಹಿಂಪಡೆದಿದ್ದಾರೆ.

ಡೀಸೆಲೆ ಬೆಲೆ ಇಳಿಕೆ ಹಾಗೂ ರಾಜ್ಯ ಹೆದ್ದಾರಿಗಳಲ್ಲಿನ ಟೋಲ್ ಗಳನ್ನು ತೆಗೆಯುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘ ಕಳೆದ ಮೂರು ದಿನಗಳಿಂದ ಮುಷ್ಕರ ನಡೆಸುತಿತ್ತು.

ಲಾರಿ ಮಾಲೀಕರ ಸಂಘದ ಪ್ರತಿನಿಧಿಗಳು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರೆಡ್ಡಿ ಅವರೊಂದಿಗೆ ನಡೆಸಿದ ಮಾತುಕತೆ ವಿಫಲವಾಗಿತ್ತು. ಆದರೆ ಇಂದು ರಾಮಲಿಂಗಾರೆಡ್ಡಿ ಅವರೊಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು, ಲಾರಿ ಮುಷ್ಕರವನ್ನು ವಾಪಸ್ ಪಡೆಯುತ್ತಿರುವುದಾಗಿ ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದರು.

ಡೀಸೆಲ್ ಬೆಲೆ ಕಡಿಮೆ ಮಾಡಲು ಅಥವಾ ರಾಜ್ಯ ಹೆದ್ದಾರಿಗಳಲ್ಲಿನ ಟೋಲ್ ಗಳನ್ನು ತೆಗೆಯಲು ಸರ್ಕಾರ ಒಪ್ಪಿಲ್ಲ. ಆದಾಗ್ಯೂ, ಕೆಲವೊಂದು ಇತರ ಕುಂದುಕೊರತೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಲಾಗಿದೆ. ಹೀಗಾಗಿ ಲಾರಿ ಮುಷ್ಕರವನ್ನು ಹಿಂಪಡೆದಿರುವುದಾಗಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel