ತಡೆಗೋಡೆಗೆ ಡಿಕ್ಕಿ ಹೊಡೆದ ಪಿಕ್ ಅಪ್  
ರಾಜ್ಯ

ರಾಯಚೂರು: ರಸ್ತೆ ತಡೆಗೋಡೆಗೆ ಪಿಕ್ ಅಪ್ ವಾಹನ ಡಿಕ್ಕಿ, ನಾಲ್ವರು ಸಾವು

ಗೂಡ್ಸ್ ಪಿಕ್ ಅಪ್ ವಾಹನ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಅದರ ಪರಿಣಾಮ ಗೂಡ್ಸ್ ವಾಹನದಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರನ್ನು ನಾಗರಾಜ್, ಸೋಮು, ನಾಗಭೂಷಣ ಹಾಗೂ ಮುರಳಿ ಎಂದು ಗುರುತಿಸಲಾಗಿದೆ.

ರಾಯಚೂರು: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಅಮರಾಪುರ ಗ್ರಾಮದ ಬಳಿ ಇಂದು ನಸುಕಿನ ಜಾವ ನಡೆದಿದೆ.

ಗೂಡ್ಸ್ ಪಿಕ್ ಅಪ್ ವಾಹನ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಅದರ ಪರಿಣಾಮ ಗೂಡ್ಸ್ ವಾಹನದಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರನ್ನು ನಾಗರಾಜ್, ಸೋಮು, ನಾಗಭೂಷಣ ಹಾಗೂ ಮುರಳಿ ಎಂದು ಗುರುತಿಸಲಾಗಿದೆ.

ಮೃತರು ನಾಲ್ವರು ತೆಲಂಗಾಣದ ಹಿಂದೂಪುರ ನಿವಾಸಿಗಳಾಗಿದ್ದಾರೆ. ಗೂಡ್ಸ್ ಪಿಕಪ್ ವಾಹನ ಚಾಲಕ ಆನಂದ್ ಗೆ ಗಂಭೀರ ಗಾಯವಾಗಿದೆ. ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಾಲಕ ಚಿಕಿತ್ಸೆ ನೀಡಲಾಗುತ್ತಿದೆ. ಇವರು ಕುರಿ ಖರೀದಿಸಲು ಯಾದಗಿರಿ ಜಿಲ್ಲೆಯ ಶಹಪುರಕ್ಕೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅಧಿಕಾರ ಹಂಚಿಕೆ ಬಗ್ಗೆ ಯಾರೂ ಮಾತನಾಡಬೇಡಿ, ಸಾರ್ವಜನಿಕ ಹೇಳಿಕೆ ಕೊಡಬೇಡಿ': ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಬುದ್ದಿಮಾತು

'ನೀವು ಶಾಶ್ವತ ವಿಪತ್ತು ನಿಧಿ ಏಕೆ ರಚಿಸಿಲ್ಲ': ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನೆ

ಜೈಪುರ-ಬಿಕಾನೇರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್-ಟ್ರಕ್ ಮುಖಾಮುಖಿ ಡಿಕ್ಕಿ: ನಾಲ್ವರು ಸಾವು, 27 ಜನರಿಗೆ ಗಾಯ

ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಬಗೆದಿದೆ: ಡಿ ಕೆ ಶಿವಕುಮಾರ್

ಮೈಸೂರು: ಶಾಲೆಗೆ ಹೋಗಲು ಬಸ್ಸು, ರಸ್ತೆ ಇಲ್ಲದೆ ಪ್ರತಿದಿನ 14 ಕಿ.ಮೀ. ನಡೆಯುತ್ತಿದ್ದ ಮಕ್ಕಳ ನೆರವಿಗೆ ಧಾವಿಸಿದ ಅರಣ್ಯ ಇಲಾಖೆ!

SCROLL FOR NEXT