ಸಂಗ್ರಹ ಚಿತ್ರ 
ರಾಜ್ಯ

ಅಪಘಾತದಲ್ಲಿ ಬಾಲಕ ಸಾವು: ಉದ್ರಿಕ್ತರಿಂದ ಹಲ್ಲೆಗೊಳಗಾಗಿದ್ದ BBMP ಕಸದ ಲಾರಿ ಚಾಲಕ ಸಾವು

ಅಬ್ದುಲ್ ಖಾದರ್ ಎಂಬವರು ಮಗ ಐಮಾನ್‌ನೊಂದಿಗೆ ಸ್ಕೂಟರ್​ನಲ್ಲಿ ತೆರಳುತ್ತಿದ್ದ ವೇಳೆ ಕಸದ ಲಾರಿ ಡಿಕ್ಕಿ ಹೊಡೆದಿತ್ತು. ಪರಿಣಾಮ ರಸ್ತೆಯ ಮೇಲೆ ಬಿದ್ದ ಐಮಾನ್‌ನ ತಲೆ ಮೇಲೆ ಲಾರಿ ಹರಿದಿದ್ದರಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದ.

ಬೆಂಗಳೂರು: ರಸ್ತೆ ಅಪಘಾತದಲ್ಲಿ ಬಾಲಕನ ಸಾವಿಗೀಡಾದ ಕಾರಣಕ್ಕೆ ಉದ್ರಿಕ್ತ ಗುಂಪಿನಿಂದ ಹಲ್ಲೆಗೊಳಗಾಗಿದ್ದ ಬಿಬಿಎಂಪಿ ಘನ ತ್ಯಾಜ್ಯ ಸಾಗಿಸುವ ಕಾಂಪ್ಯಾಕ್ಟರ್‌ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾರೆ.

ಕೊಂಡಯ್ಯ (59) ಎಂಬವರೇ ಕೊನೆಯುಸಿರೆಳೆದ ಲಾರಿ ಚಾಲಕ. ಮಾರ್ಚ್ 29ರಂದು ಥಣಿಸಂದ್ರದ ರೈಲ್ವೇ ಟ್ರ್ಯಾಕ್ ಬಳಿ ಕಸದ ಲಾರಿ ಹಾಗೂ ಸ್ಕೂಟರ್ ನಡುವೆ ಸಂಭವಿಸಿ, ಬಾಲಕ ಐಮಾನ್ (10) ಮೃತಪಟ್ಟಿದ್ದ.

ಅಬ್ದುಲ್ ಖಾದರ್ ಎಂಬವರು ಮಗ ಐಮಾನ್‌ನೊಂದಿಗೆ ಸ್ಕೂಟರ್​ನಲ್ಲಿ ತೆರಳುತ್ತಿದ್ದ ವೇಳೆ ಕಸದ ಲಾರಿ ಡಿಕ್ಕಿ ಹೊಡೆದಿತ್ತು. ಪರಿಣಾಮ ರಸ್ತೆಯ ಮೇಲೆ ಬಿದ್ದ ಐಮಾನ್‌ನ ತಲೆ ಮೇಲೆ ಲಾರಿ ಹರಿದಿದ್ದರಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದ. ಹೆಣ್ಣೂರು ಸಂಚಾರ ಪೊಲೀಸ್ ವ್ಯಾಪ್ತಿಯಲ್ಲಿರುವ ರೈಲ್ವೆ ಸೇತುವೆಯ ಬಳಿಯ ಥಣಿಸಂದ್ರ ಮುಖ್ಯ ರಸ್ತೆಯಲ್ಲಿ ಈ ಘಟನೆ ಸಂಭವಿಸಿತ್ತು.

ಅಪಘಾತವನ್ನು ಕಂಡು ರೊಚ್ಚಿಗೆದ್ದ ಸ್ಥಳೀಯರು, ಲಾರಿಗೆ ಬೆಂಕಿ ಹಚ್ಚಿ, ಚಾಲಕನ ಮೇಲೆ ಮನಬಂದಂತೆ ಹಲ್ಲೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದರು.

ಮಾರಣಾಂತಿಕ ಹಲ್ಲೆಗೀಡಾದ ಕೊಂಡಯ್ಯ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಮೃತ ಕೊಂಡಯ್ಯ ಆಂಧ್ರ ಪ್ರದೇಶದ ಮೂಲದವರಾಗಿದ್ದು, ವೈಟ್‌ಫೀಲ್ಡ್ ಬಳಿ ವಾಸಿಸುತ್ತಿದ್ದರು ಎನ್ನಲಾಗಿದೆ. ಘಟನೆ ವೇಳೆ ಕೊಂಡಯ್ಯ ಮದ್ಯದ ಅಮಲಿನಲ್ಲಿದ್ದ ಎಂದು ಸ್ಥಳೀಯರು ಆರೋಪಿಸಿದ್ದು, ಚಾಲಕ ಕುಡಿದಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಘಟನೆ ಸಂಬಂಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಬಾಲಾಪರಾಧಿ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಸರೈಪಾಳ್ಯ ಮತ್ತು ಹೆಗ್ಡೆನಗರ ನಿವಾಸಿಗಳಾದ ಅಫ್ರೋಜ್, ಅಕ್ರಮ್ ಖಾನ್ ಮತ್ತು ತಬಾರಕ್ ಎಂದು ಗುರ್ತಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT