ಸಿಎಂ ಸಿದ್ದರಾಮಯ್ಯ 
ರಾಜ್ಯ

ಶಿಕ್ಷಣದಲ್ಲಿ ಜಾತಿ ತಾರತಮ್ಯ ತಡೆಗೆ ರಾಜ್ಯ ಸರ್ಕಾರ ಕ್ರಮ: ‘ರೋಹಿತ್‌ ವೇಮುಲ ಕಾಯ್ದೆ’ ಶೀಘ್ರದಲ್ಲೇ ಜಾರಿ

ರೋಹಿತ್, ಪಾಯಲ್, ದರ್ಶನ್‌ ಮತ್ತು ಘನತೆಗೆ ಅರ್ಹರಾದ ಅಸಂಖ್ಯಾತರ ಕನಸುಗಳನ್ನು ಗೌರವಿಸಲು ಕಾನೂನನ್ನು ಆದಷ್ಟು ಶೀಘ್ರ ಸಿದ್ಧಪಡಿಸಲಾಗುವುದು.

ಬೆಂಗಳೂರು: ಶಿಕ್ಷಣದಲ್ಲಿ ಜಾತಿ ತಾರತಮ್ಯ ತಡೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ‘ರೋಹಿತ್‌ ವೇಮುಲ ಕಾಯ್ದೆ’ಯ ಜಾರಿಗೆ ತರಲು ಚಿಂತನೆ ನಡೆಸುತ್ತಿದೆ.

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು. ಇದನ್ನು ಖಾತ್ರಿಪಡಿಸುವುದಕ್ಕಾಗಿ ʼರೋಹಿತ್‌ ವೇಮುಲಾ ಕಾಯ್ದೆʼ ಹೆಸರಿನ ಕಾನೂನನ್ನು ಕರ್ನಾಟಕದಲ್ಲೂ ರೂಪಿಸುವಂತೆ ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಪತ್ರದ ಮೂಲಕ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು, ರಾಹುಲ್ ಗಾಂಧಿಯವರೇ ನಿಮ್ಮ ಸಹಾನುಭೂತಿಯ ಪತ್ರ ಮತ್ತು ನ್ಯಾಯಕ್ಕಾಗಿ ಅಚಲ ಧ್ವನಿಗೆ ಧನ್ಯವಾದಗಳು. ಜಾತಿ, ವರ್ಗ ಅಥವಾ ಗುರುತಿನ ಹೆಸರಿನಲ್ಲಿ ಯಾವುದೇ ವಿದ್ಯಾರ್ಥಿ ಎಂದಿಗೂ ತಾರತಮ್ಯ ಅಥವಾ ಬಹಿಷ್ಕಾರವನ್ನು ಎದುರಿಸದಂತೆ ನೋಡಿಕೊಳ್ಳಲು ನಮ್ಮ ಸರಕಾರ ಬದ್ಧ ಎಂದು ಹೇಳಿದ್ದಾರೆ.

ರೋಹಿತ್, ಪಾಯಲ್, ದರ್ಶನ್‌ ಮತ್ತು ಘನತೆಗೆ ಅರ್ಹರಾದ ಅಸಂಖ್ಯಾತರ ಕನಸುಗಳನ್ನು ಗೌರವಿಸಲು ಕಾನೂನನ್ನು ಆದಷ್ಟು ಶೀಘ್ರ ಸಿದ್ಧಪಡಿಸಲಾಗುವುದು. ಬಿ.ಆರ್. ಅಂಬೇಡ್ಕರ್‌ ಅವರ ಸಮಾನ, ಸಹಾನುಭೂತಿಯ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವತ್ತ ದಿಟ್ಟ ಹೆಜ್ಜೆ ಇಡಲಾಗುವುದು. ಆದಷ್ಟು ಬೇಗ ಈ ಕಾನೂನನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT